• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆಯುವಂತಿಲ್ಲ – ಯುಪಿ ಮಹಿಳಾ ಆಯೋಗ

Tulunadu News Posted On November 8, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಮಹಿಳಾ ಆಯೋಗ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳ ಬಗ್ಗೆ ವರದಿಯನ್ನು ತಯಾರಿಸಿದೆ. ಅದರಲ್ಲಿ ಪ್ರಮುಖವಾಗಿರುವ ಕೆಲವು ವಿಷಯಗಳು ಇಲ್ಲಿವೆ. ಮೊದಲನೇಯದಾಗಿ ಮಹಿಳೆಯರ ಬಟ್ಟೆಯ ಅಳತೆಯನ್ನು ಪುರುಷರು ತೆಗೆದುಕೊಳ್ಳುವಂತಿಲ್ಲ. ಇನ್ನು ಜಿಮ್ ಗಳಲ್ಲಿ ಮತ್ತು ಯೋಗ ತರಗತಿಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ತರಬೇತಿ ನೀಡಬೇಕು. ಮೂರನೇಯದಾಗಿ ಬಸ್ ಗಳಲ್ಲಿ ಮಹಿಳಾ ಸುರಕ್ಷತಾ ಸಿಬ್ಬಂದಿಗಳನ್ನೇ ನೇಮಿಸಬೇಕು. ಇನ್ನು ಮಹಿಳಾ ಉಡುಗೆಗಳ ಮಳಿಗೆಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಬೇಕು.
ಇಂತಹ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಮಹಿಳಾ ಆಯೋಗ ಅಕ್ಟೋಬರ್ 28 ರಂದು ಲಕ್ನೋದಲ್ಲಿ ಸಭೆ ಸೇರಿ ಚಿಂತನೆ ನಡೆಸಿದೆ. ಇದೇ ಸಂದರ್ಭದಲ್ಲಿ ಬೇರೆ ಬೇರೆ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಯುಪಿ ಮಹಿಳಾ ಆಯೋಗದ ಸದಸ್ಯರು ಸಮಾಲೋಚನೆ ನಡೆಸಿದರು.
ಆಯೋಗದ ಸದಸ್ಯೆ ಮನೀಶಾ ಅಹ್ಲಾವಟ್ ಮಾತನಾಡಿ ” ಈ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದೆ. ಇದರ ಸಾಧ್ಯಾಸಾಧ್ಯತೆಯ ಬಗ್ಗೆ ಯೋಚಿಸಬೇಕಾಗಿದೆ. ಒಂದು ವೇಳೆ ಅದು ಸಮಂಜಸ ಎಂದು ತಿಳಿದುಬಂದರೆ ಅದರ ಮಸೂದೆ ರಚನೆ ಮಾಡಿ ಸರಕಾರಕ್ಕೆ ಸಲ್ಲಿಸಬೇಕಾಗುವುದು. ನಂತರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು. ಇತ್ತ ಈ ಕ್ರಮಗಳು ಯೋಚನಾ ಹಂತದಲ್ಲಿ ಇರುವಾಗಲೇ ಅತ್ತ ಶಾಮ್ಲಿ ಜಿಲ್ಲೆಯ ಜಿಲ್ಲಾ ಪ್ರೊಭೆಶನರಿ ಅಧಿಕಾರಿ ಹಮೀದ್ ಹುಸೇನ್ ಅವರು ಸುತ್ತೋಲೆ ಹೊರಡಿಸಿದ್ದು ಮಹಿಳಾ ತರಬೇತುದಾರರನ್ನೇ ಜಿಮ್, ಯೋಗ ಮತ್ತು ನಾಟಕ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರ ತರಬೇತಿಗಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇನ್ನು ಇಂತಹ ಕಡೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಹುಸೇನ್ ಅವರು ” ಮಹಿಳಾ ಸುರಕ್ಷಾಕರ್ಮಿ ಮತ್ತು ಶಿಕ್ಷಕಿಯನ್ನು ಶಾಲಾ ಬಸ್ಸುಗಳಲ್ಲಿ ನೇಮಿಸಲು ಮತ್ತು ಮಹಿಳಾ ಬಟ್ಟೆ ಹೊಲಿಗೆ ಕೇಂದ್ರಗಳಲ್ಲಿ ಅಳತೆಗೆ ಮಹಿಳೆಯರನ್ನೇ ನೇಮಿಸಲು ಸೂಚಿಸಿದ್ದಾರೆ. ಯುಪಿಯ ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರ್ವಾಲ್ ಅವರು ಈ ನಿಯಮಗಳನ್ನು ಸ್ವಾಗತಿಸಿದ್ದು, ಮಹಿಳಾ ಸುರಕ್ಷತೆಗಾಗಿ ಈ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.
0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search