• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊದಲ ಮಗುವಿನ ಸಂಭ್ರಮ ಹಂಚಿಕೊಂಡ ರಾಹುಲ್ – ಅಥಿಯಾ!

Tulunadu News Posted On November 8, 2024
0


0
Shares
  • Share On Facebook
  • Tweet It

ಟೀ ಇಂಡಿಯಾ ವಿಕೆಟ್ ಕೀಪರ್ – ಬ್ಯಾಟ್ಸಮನ್ , ಮಂಗಳೂರು ಮೂಲದ ಕೆ.ಎಲ್ ರಾಹುಲ್ ನವೆಂಬರ್ 8 ರಂದು ಸಂಭ್ರಮದ ವಿಷಯವೊಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಚೊಚ್ಚಲ ಮಗುವಿಗೆ ಅಪ್ಪನಾಗುವ ಖುಷಿ. ಕಳೆದ ವರ್ಷ ಅದ್ದೂರಿಯಾಗಿ ಮದುವೆಯಾಗಿದ್ದ ಕ್ರೀಡಾ ತಾರೆ ರಾಹುಲ್ ಮತ್ತು ಚಿತ್ರನಟಿ ಅಥಿಯಾ ಶೆಟ್ಟಿ ಮುಂದಿನ ವರ್ಷ ಪೋಷಕರಾಗಿ ಬದುಕಿನಲ್ಲಿ ಭಡ್ತಿ ಹೊಂದಲಿದ್ದಾರೆ. ಈ ಬಗ್ಗೆ ಬರೆದಿರುವ ರಾಹುಲ್ ” ನಮ್ಮ ಸುಂದರ ಆರ್ಶೀವಾದ ಶೀಘ್ರದಲ್ಲಿ ಬರಲಿದೆ” ಎಂದಿದ್ದಾರೆ.
ರಾಹುಲ್ ಸದ್ಯ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದಾರೆ. ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಅವರ ಪ್ರದರ್ಶನ ನೀರಸವಾಗಿದ್ದರೂ ಬದುಕಿನಲ್ಲಿ ಅವರ ಹೊಸ ಆಯಾಮ ಮಾತ್ರ ಅವರ ಅಭಿಮಾನಿಗಳಲ್ಲಿ ಸಂತಸವನ್ನು ತಂದಿದೆ. ಅಥಿಯಾ ತಂದೆ ಖ್ಯಾತ ನಟ ಸುನೀಲ್ ಶೆಟ್ಟಿಯವರೂ ವಿದೇಶದಲ್ಲಿ ಶೂಟಿಂಗ್ ನಲ್ಲಿದ್ದಾರೆ. ಒಟ್ಟಿನಲ್ಲಿ 2019 ರಿಂದಲೇ ಪ್ರೀತಿ ಪ್ರೇಮದ ಬಲೆಯಲ್ಲಿದ್ದ ರಾಹುಲ್ ಹಾಗೂ ಅಥಿಯಾ ತಮ್ಮ ಪ್ರೀತಿಯನ್ನು 2019 ರ ಅಂತ್ಯದಲ್ಲಿ ಬಹಿರಂಗಪಡಿಸಿದ್ದರು. 2023 ರ ಜನವರಿ 23 ರಂದು ಕೆ.ಎಲ್ ರಾಹುಲ್ ಹಾಗೂ ಅಥಿಯಾ ವಿವಾಹ ಬಂಧನಕ್ಕೆ ಒಳಗಾಗಿದ್ದರು. ಇಬ್ಬರ ಮೂಲವೂ ದಕ್ಷಿಣ ಕನ್ನಡ ಜಿಲ್ಲೆಯಾಗಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
  • Popular Posts

    • 1
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 2
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 3
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 4
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 5
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...

  • Privacy Policy
  • Contact
© Tulunadu Infomedia.

Press enter/return to begin your search