• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೂಟ್ಯೂಬ್ ವಿಡಿಯೋ ವೀಕ್ಷಿಸಿ ಬಾಬಾ ಸಿದ್ಧಿಕಿ ಹತ್ಯೆ!

Tulunadu News Posted On November 11, 2024


  • Share On Facebook
  • Tweet It

ಮಹಾರಾಷ್ಟ್ರದ ಶಾಸಕ, ಪ್ರಭಾವಿ ನಾಯಕ ಬಾಬಾ ಸಿದ್ಧಿಕಿ ಹತ್ಯೆಯ ಆರೋಪಿಗಳಾದ ಮೂವರು ಶೂಟರ್ ಗಳು ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು. ಈ ವೇಳೆ ಯೂಟ್ಯೂಬ್ ನಲ್ಲಿ ಟ್ಯುಟೋರಿಯಲ್ ವಿಡಿಯೋಗಳನ್ನು ನೋಡಿ ಬಂದೂಕುಗಳನ್ನು ಹೇಗೆ ಬಳಸಬೇಕೆಂದು ಕಲಿತಿದ್ದರು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ. ಆರೋಪಿಗಳು ಸುಮಾರು 4 ವಾರಗಳ ಕಾಲ ಅಂತಹ ವಿಡಿಯೋಗಳನ್ನು ವೀಕ್ಷಿಸಿ ಅಧ್ಯಯನ ನಡೆಸಿದ್ದರು ಎನ್ನುವ ವಿಷಯವೂ ವಿಚಾರಣೆಯಲ್ಲಿ ತಿಳಿದುಬಂದಿದೆ.


ವಿಚಾರಣೆ ವೇಳೆ ಆರೋಪಿ ಶಿವಕುಮಾರ್ ಎಂಬುವವನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಜೊತೆ ಸಂಬಂಧ ಇರುವುದು ತಿಳಿದುಬಂದಿದೆ. ಶಿವಕುಮಾರನಿಗೆ ಲಾರೆನ್ಸ್ ನ ಆಪ್ತ ಸಹಾಯಕನಾಗಿದ್ದ ಶುಭಂ ಲೋಂಕರ್ ಎನ್ನುವ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಸಹೋದರ್ ಅನ್ಮೋಲ್ ಬಿಷ್ಣೋಯ್ ಜೊತೆ ಸಂಪರ್ಕ ಸಾಧಿಸಲು ಸಹಕರಿಸಿದ್ದ. ಅನ್ಮೋಲ್ ಸೂಚನೆಯ ಮೇರೆಗೆ ಈ ಹತ್ಯೆ ನಡೆದಿದೆ ಎನ್ನುವ ವಿಷಯ ಪೊಲೀಸರಿಗೆ ವಿಚಾರಣೆಯಲ್ಲಿ ತಿಳಿದುಬಂದಿದೆ.
ಅಕ್ಟೋಬರ್ 12 ರಂದು ಮುಂಬೈಯ ಬಾಂದ್ರಾದಲ್ಲಿರುವ ಪುತ್ರ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಸಿದ್ದಿಕಿ ಹತ್ಯೆಗೆ 9.9 ಎಂ ಎಂ ಪಿಸ್ತೂಲ್ ಬಳಸಲಾಗಿತ್ತು. ಒಟ್ಟು ಆರು ಸುತ್ತುಗಳಲ್ಲಿ ಗುಂಡು ಹಾರಿಸಲಾಗಿತ್ತು. ಸಿದ್ದಿಕಿ ಹತ್ಯೆ ಬಳಿಕ ಪರಾರಿಯಾಗಿದ್ದ ಪ್ರಮುಖ ಆರೋಪಿ ನೇಪಾಳಕ್ಕೆ ಪಲಾಯನ ಮಾಡಲು ಪ್ಲಾನ್ ಮಾಡಿಕೊಂಡಿದ್ದ. ಅಷ್ಟರಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ  ಹಾಗೂ ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಒಟ್ಟಿನಲ್ಲಿ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search