• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟ್ರಂಪ್ ಅಧ್ಯಕ್ಷರಾಗುತ್ತಿದ್ದಂತೆ ಅಬಾರ್ಶನ್ ಮಾತ್ರೆಗಳಿಗೆ ತುಂಬಾ ಡಿಮಾಂಡ್!

Tulunadu News Posted On November 12, 2024
0


0
Shares
  • Share On Facebook
  • Tweet It

ಅಮೇರಿಕಾದ ನೂತನ ಅಧ್ಯಕ್ಷರಾಗಿ ಡೋನಾಲ್ಡ್ ಟ್ರಂಪ್ ಎರಡನೇ ಬಾರಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಬಾರ್ಶನ್ ಮಾತ್ರೆಗಳಿಗೆ ಬೇಡಿಕೆ ಏಕಾಏಕಿ ಹೆಚ್ಚಿರುವ ಘಟನೆ ಅಮೇರಿಕಾದಲ್ಲಿ ನಡೆದಿದೆ. ಅದಕ್ಕೆ ಕಾರಣ ಅಮೇರಿಕಾದ ಸುಪ್ರೀಂಕೋರ್ಟ್ ಕಳೆದ ಜೂನ್ ನಲ್ಲಿ ನೀಡಿರುವ ಐತಿಹಾಸಿಕ ತೀರ್ಪು. ಜನರಿಗೆ ಗರ್ಭಪಾತದ ಹಕ್ಕನ್ನು ನಿರಾಕರಿಸಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಮುಂದಿನ ದಿನಗಳಲ್ಲಿ ಅಮೇರಿಕಾದಲ್ಲಿ ಕಾನೂನುಗಳು ಬದಲಾಗುವ ಸಾಧ್ಯತೆ ಇದೆ. ಆಗ ಅಧಿಕಾರದಲ್ಲಿದ್ದ ಬೈಡೆನ್ ಸರಕಾರ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿತ್ತು. ಆದರೆ ಆಗ ಮಾಜಿ ಅಧ್ಯಕ್ಷರಾಗಿದ್ದ ಡೋನಲ್ಡ್ ಟ್ರಂಪ್ ಮತ್ತು ಬೆಂಬಲಿಗರು ಮಾತ್ರ ಗರ್ಭಪಾತ ಹಕ್ಕು ರದ್ದು ಮಾಡಿದ ತೀರ್ಪನ್ನು ಸ್ವಾಗತಿಸಿದ್ದರು.

ಆಗಲೇ ಅಮೇರಿಕಾದಲ್ಲಿ ರಿಪಬ್ಲಿಕನ್ ಪಕ್ಷದವರು ಆಡಳಿತ ಇರುವ ರಾಜ್ಯಗಳು ಗರ್ಭಪಾತವನ್ನು ಅಕ್ರಮ ಎಂದು ಘೋಷಿಸಿದ್ದವು. ಅದರಿಂದ ಅಮೇರಿಕಾದ 11 ರಾಜ್ಯಗಳು ಗರ್ಭಪಾತ ನಿಷೇಧ ಕಾನೂನು ಜಾರಿ ಮಾಡಿವೆ. ಡೆಮಾಕ್ರಾಟ್ ಪಕ್ಷ ಆಡಳಿತ ಇರುವ ಇತರ ರಾಜ್ಯಗಳಲ್ಲಿ ಈ ಕಾನೂನು ಜಾರಿ ಮಾಡಲಾಗಿಲ್ಲ. ಕಟ್ಟರ್ ಮೂಲಭೂತವಾದವನ್ನೇ ಅನುಸರಿಸುವ ಇಸ್ಲಾಮಿಕ್ ದೇಶಗಳಲ್ಲಿ ಗರ್ಭಪಾತಕ್ಕೆ ವಿರೋಧ ಇದೆ. ಹೆಚ್ಚಿನ ಮುಸಲೀಯರ ದೇಶಗಳಲ್ಲಿ ಗರ್ಭಪಾತ ನಿಷೇಧ ಕಾನೂನು ಇದೆ.

ಈಗ ಟ್ರಂಪ್ ಅಧಿಕಾರಕ್ಕೆ ಬಂದಿರುವುದರಿಂದ ಅವರು ಈ ಕಾನೂನನ್ನು ಪ್ರಬಲವಾಗಿ ಜಾರಿಗೆ ತಂದರೆ ಏನು ಮಾಡುವುದು ಎಂದು ಹೆದರಿರುವ ಅಸಂಖ್ಯಾತ ಯುವತಿಯರು ಅಬಾರ್ಶನ್ ಮಾತ್ರೆಗಳನ್ನು ಖರೀದಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ, ಅಬಾರ್ಶನ್ ಮಾತ್ರೆಗಳನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಆನ್ ಲೈನ್ ನಲ್ಲಿ ಕೇವಲ 24 ಗಂಟೆಗಳಲ್ಲಿ 10 ಸಾವಿರ ಅಬಾರ್ಶನ್ ಮಾತ್ರೆಗಳಿಗೆ ಬೇಡಿಕೆ ಇಟ್ಟಿದ್ದಾರೆ.

ಅಬಾರ್ಶನ್ ಮಾತ್ರೆಗಳನ್ನು ಪೂರೈಸುವ ಕಂಪೆನಿಗಳಿಗೆ ಭರ್ಜರಿ ಡಿಮಾಂಡ್ ಬಂದಿದೆ. ಎಷ್ಟರಮಟ್ಟಿಗೆ ಅಂದರೆ ಏಡ್ ಆಕ್ಸೆಸ್ ಕಂಪೆನಿಯ ವೆಬ್ ಸೈಟ್ ಕ್ರ್ಯಾಶ್ ಆಗಿದೆ ಮತ್ತು ಪ್ಲ್ಯಾನ್ ಸಿ ಎನ್ನುವ ವೆಬ್ ಸೈಟಿಗೆ ಒಂದೇ ದಿನ 82,200 ಮಂದಿ ಲಾಗಿನ್ ಆಗಿದ್ದಾರೆ. ಅಮೇರಿಕಾದ ರಾಜ್ಯಗಳಲ್ಲಿರುವ ಅಬಾರ್ಶನ್ ಕಾನೂನು ಬದ್ಧತೆಯಿಂದ ತಾವು ಸಿಕ್ಕಿಬೀಳಬಹುದು ಎನ್ನುವ ಭಯದಿಂದ ಯುವತಿಯರು ಅಬಾರ್ಶನ್ ಮಾತ್ರೆ, ಔಷಧಿಯನ್ನು ಜನರು ಮುಗಿಬಿದ್ದು ಖರೀದಿಸಿ ಸ್ಟಾಕ್ ಇಟ್ಟುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search