• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

Tulunadu News Posted On November 20, 2024
0


0
Shares
  • Share On Facebook
  • Tweet It

ನಕ್ಸಲ್ ನಾಯಕ ವಿಕ್ರಂ ಗೌಡನ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರ ಅವನ ಹುಟ್ಟೂರಾದ ಹೆಬ್ರಿ ತಾಲೂಕಿನ ಕೂಡ್ಲೂವಿನಲ್ಲಿ ನೆರವೇರಿತು. ಪೀತಬೈಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೋಮವಾರ ರಾತ್ರಿ ವಿಕ್ರಂ ಗೌಡ ಹತನಾಗಿದ್ದ. ಸತ್ತಿರುವ ನಕ್ಸಲ್ ವಿಕ್ರಂ ಗೌಡ ಎಂದು ಪೊಲೀಸರು ಖಚಿತಪಡಿಸಿದ್ದರು.

ಅದಾದ ನಂತರ ಆರಂಭದಲ್ಲಿ ವಿಕ್ರಂ ಗೌಡನ ಮನೆಯವರು ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದರು. ಏಕೆಂದರೆ ಆತ ನಕ್ಸಲ್ ಮುಖಂಡನಾಗಿದ್ದ ಕಾರಣ ಮತ್ತು ತಾವು ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ಮಾಡಿದರೆ ಕಾನೂನಿನ ಕುಣಿಕೆ ತಮ್ಮನ್ನು ಹಿಂಬಾಲಿಸಬಹುದು ಎನ್ನುವ ಆತಂಕ ಇದ್ದಿರಲಿಕ್ಕೂ ಸಾಕು. ಕೊನೆಗೆ ಪೊಲೀಸರ ಮನವೊಲಿಕೆಯ ಬಳಿಕ ಮನೆಯವರು ಮೃತದೇಹವನ್ನು ಪಡೆದಿದ್ದರು. ತಂದೆ, ತಾಯಿ ತೀರಿಕೊಂಡಿರುವುದರಿಂದ ವಿಕ್ರಂ ಗೌಡನಿಗೆ ಅವನ ಕಡೆಯವರು ಎಂದು ಇರುವುದು ಸಹೋದರಿ ಹಾಗೂ ಸಹೋದರ ಮಾತ್ರ. ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಮೀಪದ ಬಂಧುಗಳು, ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಎರಡು ದಶಕಗಳಿಗಿಂತಲೂ ಹಲವು ವರ್ಷಗಳಿಂದ ನಕ್ಸಲ ತಂಡದಲ್ಲಿದ್ದ. ಹಲವು ಪ್ರಕರಣಗಳಲ್ಲಿ ಅವನ ಹೆಸರಿತ್ತು. ಸೋಮವಾರ ರಾತ್ರಿ ಸುಮಾರು ನಾಲ್ಕರಿಂದ ಆರು ಮಂದಿ ನಕ್ಸಲರ ತಂಡ ಪೀತಬೈಲಿನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್ ಎಫ್ ತಂಡದ ನಡುವೆ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search