• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಯಿಯಲ್ಲಿ ನವಜಾತ ಶಿಶು ಕಚ್ಚಿ ಓಡಿದ ನಾಯಿ!

Tulunadu News Posted On November 20, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಸೋನಾಮುಖಿಯಲ್ಲಿ ನಡೆದ ಘಟನೆ ನಿಜಕ್ಕೂ ಹೃದಯ ವಿದ್ರಾವಕವಾಗಿದೆ. ಭಾಜಪಾ ಮುಖಂಡ ಅಮಿತ್ ಮಾಳವೀಯ ಅವರು ಫೋಟೋ ಹಾಕಿ ನೀಡಿರುವ ಮಾಹಿತಿ ನಿಜಕ್ಕೂ ತುಂಬಾ ನೋವು ತರುವಂತದ್ದು.  “ಉತ್ತಮ ವೈದ್ಯಕೀಯ ಸೌಲಭ್ಯ ಇದೆ ಎಂದು ಎದೆಯುಬ್ಬಿಸಿ ಹೇಳಿಕೊಂಡು ಬರುತ್ತಿರುವ ಮಮತಾ ಬ್ಯಾನರ್ಜಿಯವರೇ, ನಿಮ್ಮ ರಾಜ್ಯದಲ್ಲಿ ಗರ್ಭಿಣಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ ಆಗುವ ಪರಿಸ್ಥಿತಿ ಬಂದಿದೆ. ಆಕೆಗೆ ಅಲ್ಲಿ ಯಾವುದೇ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿಗಳು ಇರದೇ ಆಕೆ ಒದ್ದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದುರಾದೃಷ್ಟವಶಾತ್ ತಾಯಿಯಿಂದ ಮಗು ಭೂಮಿಗೆ ಬರುವಾಗ ಅಲ್ಲಿ ಬೀದಿಬದಿ ನಾಯಿಯೊಂದು ಅಡ್ಡಾಡುತ್ತಿದ್ದು, ಅದು ಮಗುವನ್ನು ಬಾಯಿಯಲ್ಲಿ ಕಚ್ಚಿ ಓಡಿಹೋಗಿದೆ. ಇದು ನಿಜಕ್ಕೂ ಚಿಂತಾಜನಕವಾಗಿರುವ ಘಟನೆ” ಎಂದು ಅವರು ಬರೆದುಕೊಂಡಿದ್ದಾರೆ.

ನವೆಂಬರ್ 18 ರಂದು ಈ ಘಟನೆ ನಡೆದಿದೆ. ಆರು ತಿಂಗಳ ಅವಧಿಪೂರ್ವ ಹೆರಿಗೆ ಆಗಿದ್ದು, ಗರ್ಭಿಣಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಮೂತ್ರ ತರಲು ವೈದ್ಯರು ಸೂಚಿಸಿದಾಗ ಆಕೆ ಶೌಚಾಲಯಕ್ಕೆ ಹೋಗಿದ್ದಳು. ಆಕೆಯೊಂದಿಗೆ ಸಂಬಂಧಿಕ ಮಹಿಳೆಯೊಬ್ಬಳು ಇದ್ದಳು. ಶೌಚಾಲಯದಲ್ಲಿ ಅಚಾನಕ್ ಆಗಿ ಹೊಟ್ಟೆ ನೋವು ಜಾಸ್ತಿಯಾಗಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಆಕೆಯ ಜೊತೆಗಿದ್ದ ಮಹಿಳೆ ವೈದ್ಯರನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆಯಲು ಓಡಿದ್ದಾಳೆ. ಆದರೆ ಆಕೆಯ ಮನವಿಗೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಕೆ ಮತ್ತೊಮ್ಮೆ ಓಡಿ ಶೌಚಾಲಯಕ್ಕೆ ಬಂದಾಗ ಮಗು ಕಾಣೆಯಾಗಿತ್ತು. ಮಗು ಎಲ್ಲಿ ಎಂದು ಅತ್ತಿತ್ತ ಹುಡುಕಿದಾಗ ನಾಯಿಯೊಂದು ಬಾಯಿಯಲ್ಲಿ ಕಚ್ಚಿ ಓಡುತ್ತಿರುವುದು ಎಲ್ಲರಿಗೂ ಕಂಡುಬಂದಿದೆ. ಇನ್ನು ಅಲ್ಲಿರುವ ಜನರು ಹೇಳುವ ಪ್ರಕಾರ ಆ ನಾಯಿ ಈ ಘಟನೆ ಆದ ನಂತರವೂ ಅಲ್ಲಿಯೇ ಸುತ್ತಾಡುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
Tulunadu News July 4, 2025
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
  • Popular Posts

    • 1
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 2
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 3
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 4
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 5
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?

  • Privacy Policy
  • Contact
© Tulunadu Infomedia.

Press enter/return to begin your search