• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಆಯ್ಕೆ ಮಾಡಲು ನಮಗೆ ಒಂದೇ ದಿನ ಸಾಕು – ಸಚಿನ್ ಪೈಲೆಟ್

Tulunadu News Posted On November 22, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎರಡೂ ಮೈತ್ರಿಕೂಟದ ಪಕ್ಷಗಳಿಗೆ ತಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭಾರಿ ನಿರೀಕ್ಷೆ ಇದೆ. ಅದಕ್ಕೆ ಸರಿಯಾಗಿ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ ಎನ್ನುವ ಊಹೆ ಮಾಡಿದ್ದರೆ ಕೆಲವು ಭಾಜಪಾ ನೇತೃತ್ವದ ಮೈತ್ರಿಕೂಟ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ಹೇಳಿದೆ. ಹೀಗಿರುವಾಗ ಒಂದು ವೇಳೆ ಭಾಜಪಾ ಮೈತ್ರಿಕೂಟ ಅಧಿಕಾರಕ್ಕೆ ಮರಳಿದರೆ ಏಕನಾಥ್ ಶಿಂಧೆ ತಾವು ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ ಎಂದಿದ್ದಾರೆ. ಹಾಗಾದರೆ ಅಲ್ಲಿ ಯಾರು ಸಿಎಂ ಆಗುತ್ತಾರೆ ಎನ್ನುವ ಪ್ರಶ್ನೆಯ ನಡುವೆ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ನಾವು ಒಂದೇ ದಿನದಲ್ಲಿ ಸಿಎಂ ಯಾರೆಂದು ನಿರ್ಧರಿಸುತ್ತೇವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಸಚಿನ್ ಪೈಲೆಟ್ ಹೇಳಿದ್ದಾರೆ.

ಆದರೆ ಪೈಲೆಟ್ ಹೇಳಿದಷ್ಟು ಈ ಲೆಕ್ಕಾಚಾರಗಳು ಸುಲಭವಾಗಿಲ್ಲ ಎನ್ನುವುದು ನಿಜ. ಕಾಂಗ್ರೆಸ್ ಮೈತ್ರಿಕೂಟದಲ್ಲಿ ಇರುವ ಮೂರು ಪಕ್ಷಗಳಲ್ಲಿ ಹಿರಿಯಣ್ಣ ಅಂದರೆ ಎನ್ ಸಿಪಿ ನಾಯಕ ಶರದ್ ಪವಾರ್. ಅವರು ಯಾರನ್ನು ಸಿಎಂ ಎಂದು ಕರೆಯುತ್ತಾರೆಯೋ ಅವರೇ ಈ ಮೈತ್ರಿಕೂಟದ ಸಿಎಂ ಎನ್ನುವುದು ಅಲಿಖಿತ ನಿಯಮ. ಇನ್ನು ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಕೂಡ ತಕ್ಷಣ ಯಾರನ್ನೋ ಸಿಎಂ ಎಂದು ಒಪ್ಪಿಕೊಳ್ಳುವುದಿಲ್ಲ. ಇನ್ನು ಅದರಲ್ಲಿ ಕಾಂಗ್ರೆಸ್ ಎಷ್ಟು ಶಾಸಕರನ್ನು ಗೆಲ್ಲಿಸಿಕೊಳ್ಳಲಿದೆ ಎನ್ನುವುದು ಕೂಡ ಇಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ.

ಈ ಎಲ್ಲದರ ಮಧ್ಯದಲ್ಲಿ ಒಂದು ವೇಳೆ ಒಂದಿಷ್ಟು ಸ್ಥಾನಗಳು ಯಾವುದೇ ಮೈತ್ರಿಕೂಟಕ್ಕೆ ಬರದೇ ಹೋದರೆ ಆಗ ಪರಸ್ಪರ ಕುದುರೆ ವ್ಯಾಪಾರ, ಕತ್ತೆ ವ್ಯಾಪಾರ ನಡೆಯಲಿದೆ. ಆದ್ದರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನು ಮೈತ್ರಿಕೂಟಗಳು ಸರಳ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಾಗ ಆಯ್ಕೆ ಮಾಡುವುದು ಅಷ್ಟು ಸುಲಭವೂ ಅಲ್ಲ, ಸಾಧ್ಯವೂ ಅಲ್ಲ. ಆದರೆ ರಾಜಕೀಯದಲ್ಲಿ ಮಿಂದು ಎದ್ದಿರುವ ಶರದ್ ಪವಾರ್ ನಂತಹ ಮುತ್ಸದ್ದಿಗಳು ಮನಸ್ಸು ಮಾಡಿದರೆ ಅದು ಕಷ್ಟವೂ ಅಲ್ಲ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search