• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಪ್ರಚಾರ ಮಾಡಿದ ಏಳು ಕ್ಷೇತ್ರಗಳಲ್ಲಿ ಆರರಲ್ಲಿ ಬಿಜೆಪಿ ಗೆಲುವು!

Tulunadu News Posted On November 25, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರಗಳಲ್ಲಿ ನಿರೀಕ್ಷೆಗೂ ಮೀರಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮಹಾಯುತಿ ಒಕ್ಕೂಟ ಅಭೂತಪೂರ್ವ ಸಾಧನೆ ಮಾಡಿದೆ. ಒಟ್ಟು 288 ಕ್ಷೇತ್ರಗಳಲ್ಲಿ 230 ಗೆಲ್ಲುವ ಮೂಲಕ ಸುಸ್ಥಿರ ಸರಕಾರ ನೀಡಲು ಚುನಾವಣಾ ಪೂರ್ವ ಮೈತ್ರಿ ಪಕ್ಷಗಳು ಒಟ್ಟಾಗಿದೆ. ಸರಳ ಬಹುಮತಕ್ಕೆ 145 ಸೀಟುಗಳು ಸಾಕಿದ್ದರೂ ಮಹಾಯುತಿ ಒಕ್ಕೂಟಕ್ಕೆ ದೊರಕಿರುವ ಈ ಸೀಟುಗಳನ್ನು ನೋಡಿ ರಾಜಕೀಯ ಪಂಡಿತರು ಕೂಡ ಅವಕ್ಕಾಗಿದ್ದಾರೆ. ಮಹಾ ವಿಕಾಸ ಅಘಾಡಿ ಯಲ್ಲಿರುವ ಕಾಂಗ್ರೆಸ್, ಉದ್ದವ್ ಬಣ ಮತ್ತು ಶರದ್ ಪವಾರ್ ಬಣ ಸಹಜವಾಗಿ ನಿರಾಸೆಯ ಮಡುವಿನಲ್ಲಿ ಇದೆ.

ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ಸಿನ ರಾಷ್ಟ್ರೀಯ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದಲ್ಲಿ ಏಳು ಬೃಹತ್ ಸಭೆಗಳಲ್ಲಿ ಭಾಗವಹಿಸಿ ವಿಪಕ್ಷ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ಅದರಲ್ಲಿ ಆರರಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಒಕ್ಕೂಟ ಗೆಲ್ಲುವ ಮೂಲಕ ಹೊಸ ಸಾಧನೆ ಮಾಡಿದೆ. ಅಷ್ಟೇ ಅಲ್ಲ, 2019 ರಲ್ಲಿ ಗೆದ್ದಿರುವ ಅಂತರಕ್ಕಿಂತ ಈ ಬಾರಿ ಗೆದ್ದ ಶಾಸಕರ ಅಂತರ ಜಾಸ್ತಿ ಇರುವುದು ಕೂಡ ಕಾಂಗ್ರೆಸ್ಸಿಗೆ ತೀವ್ರ ಇರಿಸುಮುರಿಸು ಉಂಟಾಗುವಂತೆ ಮಾಡಿದೆ.

ಮಹಾರಾಷ್ಟ್ರದ ನಂದೂರಬರ್, ದಾಮಾನಗಾಂವ್, ನಾಗಪುರ ಈಸ್ಟ್, ಗೊಂಡಿಯಾ, ಚಿಮ್ಮೂರ್, ನಾಡೆಡ್ ಉತ್ತರ, ಬಾಂದ್ರಾ ಈಸ್ಟ್ ನಲ್ಲಿ ರಾಹುಲ್ ಗಾಂಧಿ ವ್ಯಾಪಕ ಪ್ರಚಾರ ಮಾಡಿದ್ದರು. ಅದರಲ್ಲಿ ಬಾಂದ್ರಾ ಈಸ್ಟ್ ನಲ್ಲಿ ಉದ್ದವ್ ಠಾಕ್ರೆಯ ಬಣದ ಅಭ್ಯರ್ಥಿ ಗೆದ್ದದ್ದು ಬಿಟ್ಟರೆ ಉಳಿದ ಆರು ಕಡೆಗಳಲ್ಲಿ ಮಹಾ ವಿಕಾಸ್ ಅಘಾಡಿ ಅಭ್ಯರ್ಥಿಗಳು ಗೆದ್ದಿಲ್ಲ. ಇದು ಒಟ್ಟಾರೆಯಾಗಿ ರಾಹುಲ್ ಗಾಂಧಿಯವರ ವರ್ಚಸ್ಸು ಮತ್ತು ಕಾಂಗ್ರೆಸ್ ಇಮೇಜಿಗೆ ಹೊಡೆತ ಬಿದ್ದಂತೆ ಕಾಣುತ್ತದೆ.

ಹಾಗಂತ ನರೇಂದ್ರ ಮೋದಿಯವರು ಪ್ರಚಾರ ಮಾಡಿದ ಎಲ್ಲಾ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದಲ್ಲ. ಆದರೆ ಗೆಲುವಿನ ಶೇಕಡಾವಾರು ಪ್ರಮಾಣ ರಾಹುಲ್ ಅವರಿಗೆ ಹೋಲಿಸಿದರೆ ಹೆಚ್ಚಿದೆ. ಈ ಬಾರಿ ಮೋದಿಯವರು ಮಹಾರಾಷ್ಟ್ರದ 11 ಕಡೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಚಾರ ಮಾಡಿದ್ದಾರೆ. ದುಲೆ ಸಿಟಿ, ನಾಸಿಕ್, ಅಕೋಲ, ನಾಂಡೆಡ್, ಪುಣೆ, ಸೋಲಾಪುರ ಸಿಟಿ ಸೆಂಟ್ರಲ್, ಚಿಮ್ಮೂರು, ಅಮರಾವತಿ, ಪವೇಲ್, ಛತ್ರಪತಿ ಸಂಬಾಜಿ ನಗರ ಮತ್ತು ಮುಂಬೈ. ಇದರಲ್ಲಿ ಅಕೋಲ (ವೆಸ್ಟ್) ಮಾತ್ರ ಭಾಜಪಾ ಮೈತ್ರಿಕೂಟಕ್ಕೆ ಒಲಿಯಲಿಲ್ಲ ಬಿಟ್ಟರೆ ಬೇರೆ ಎಲ್ಲಾ ಕಡೆ ನರೇಂದ್ರ ಮೋದಿಯವರ ಪ್ರಚಾರ ವ್ಯರ್ಥವಾಗಲಿಲ್ಲ. ಬಿಜೆಪಿ ಪದಾಧಿಕಾರಿಯೊಬ್ಬರ ಪ್ರಕಾರ ” ಪ್ರಧಾನಿ ನರೇಂದ್ರ ಮೋದಿಯವರು ಒಂದು ಕ್ಷೇತ್ರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗವಹಿಸುವಾಗ ಅದರ ಪ್ರಭಾವ ಸುತ್ತಲಿನ ಎಲ್ಲಾ ಕ್ಷೇತ್ರಗಳಿಗೂ ಆಗುತ್ತದೆ. ಅವರು ಹನ್ನೊಂದು ಕ್ಷೇತ್ರದಲ್ಲಿ ಸ್ವತ: ಪ್ರಚಾರ ಮಾಡಿದರೂ ಇದರ ಪ್ರಭಾವ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸರಾಸರಿ 106 ಕ್ಷೇತ್ರಗಳಲ್ಲಿ ಆಗಿದೆ. ಇನ್ನು ಆ 106 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳು ಮಾತ್ರ ವಿಪಕ್ಷಗಳ ಬುಟ್ಟಿಗೆ ಹೋಗಿವೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search