• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಇಳಿಮುಖ ಕಾಣುತ್ತಿರುವ ಎಟಿಎಂಗಳ ಸಂಖ್ಯೆ! ಈಗ ಎಲ್ಲಿಗೆ ಬಂದು ತಲುಪಿದೆ ಗೊತ್ತಾ?

Tulunadu News Posted On December 4, 2024
0


0
Shares
  • Share On Facebook
  • Tweet It

ಭಾರತ ಈಗ ಆಧುನಿಕ ತಂತ್ರಜ್ಞಾನದ ವಿಷಯದಲ್ಲಿ ಮಹತ್ತರ ಹೆಜ್ಜೆಗಳನ್ನು ಇಡುತ್ತಿದೆ. ಆರ್ಥಿಕ ವ್ಯವಹಾರಗಳು ಈಗ ಬಹುತೇಕ ಯುಪಿಐ ಮೂಲಕವೇ ನಡೆಯುತ್ತಿರುವುದರಿಂದ ಜನರು ಬ್ಯಾಂಕಿಗೆ ಮತ್ತು ಎಟಿಎಂಗಳಿಗೆ ಬರುವುದು ಕಡಿಮೆಯಾಗುತ್ತಲೇ ಇದೆ. ಒಂದು ಕಾಲದಲ್ಲಿ ಜನರು ಹಣ ತುಂಬಲು ಮತ್ತು ಡ್ರಾ ಮಾಡಲು ಪ್ರತಿಯೊಂದಕ್ಕೂ ಬ್ಯಾಂಕುಗಳನ್ನೇ ಆಶ್ರಯಿಸಬೇಕಾಗಿತ್ತು. ಆದರೆ ಕಾಲಕ್ರಮೇಣ ಮೂರು ದಶಕಗಳಿಂದ ಬ್ಯಾಂಕುಗಳ ಸ್ಥಾನವನ್ನು ಹೆಚ್ಚುಕಡಿಮೆ ಎಟಿಎಂಗಳು ತುಂಬಿದ್ದವು. ದಿನದ 24 ಗಂಟೆಯೂ ಎಟಿಎಂನಲ್ಲಿ ಹಣ ವಿತ್ ಡ್ರಾ ಮಾಡುವುದು, ಡಿಪಾಸಿಟ್ ಮಾಡುವುದು ಎಲ್ಲವೂ ಸಾಧ್ಯವಾಗುತ್ತಿದ್ದ ಕಾರಣ ಜನರಿಗೂ ಅನುಕೂಲವಾಗುತ್ತಿತ್ತು.

ಆದರೆ ಅದರ ನಂತರ ಈ ದಶಕದಲ್ಲಿ ಎಟಿಎಂ ಸ್ಥಾನವನ್ನು ಯುಪಿಐ ತುಂಬುತ್ತಿವೆ. ಇಲ್ಲಿ ಹಾರ್ಡ್ ಕ್ಯಾಶಿನ ವಿಷಯವೇ ಇಲ್ಲ. ಚಿಕ್ಕಪುಟ್ಟ ಗೂಡಂಗಡಿಗಳಿಂದ ಹಿಡಿದು ಮಾಲ್ ತನಕ ಯುಪಿಐ ಇರುವುದರಿಂದ ಹಣವನ್ನು ಪರಸ್ಪರ ವಿಲೇವಾರಿ ಮಾಡಲು ಸುಲಭ ಮತ್ತು ಹೊತ್ತುಕೊಂಡು ಹೋಗುವ ಕೆಲಸವೂ ಇರುವುದಿಲ್ಲ. ಒಂದು ಮೊಬೈಲ್ ಫೋನಿನೊಳಗೆ ನಿಮ್ಮ ಬ್ಯಾಂಕು ಬಂದು ಕುಳಿತುಕೊಂಡಂತೆ ಆಗಿದೆ. ಈ ಹಂತದಲ್ಲಿ ಜನರು ಎಟಿಎಂ ಗಳಿಗೆ ಮೊರೆ ಹೋಗುವುದು ಕಡಿಮೆಯಾಗಿದೆ. ಇದರಿಂದ ಏನಾಗಲಿದೆ?

ಒಂದು ಕಾಲದಲ್ಲಿ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಎಟಿಎಂ ಕ್ರಮೇಣ ಅರೆನಗರಗಳಿಗೂ, ನಂತರ ಗ್ರಾಮೀಣ ಭಾಗಗಳಿಗೂ ತಲುಪಿತ್ತು. ಆದರೆ ಒಂದು ಎಟಿಎಂ ಗೂಡನ್ನು ಪ್ರತಿ ತಿಂಗಳು ನಿರ್ವಹಣೆ ಮಾಡಲು ಸಾಕಷ್ಟು ಖರ್ಚು ಬರುತ್ತದೆ. ವಿದ್ಯುತ್, ಸ್ವಚ್ಚತೆ, ಸ್ಟೇಶನರಿ, ಹಣ ನಿರ್ವಹಣೆ ಮಾಡುವ ಕಂಪೆನಿಯ ಹೊರಗುತ್ತಿಗೆ, ವಾಚಮೆನ್ ಹೀಗೆ ವಿವಿಧ ಹೊರೆ ಬ್ಯಾಂಕುಗಳಿಗೆ ತಗಲುವುದರಿಂದ ಅದನ್ನು ತಪ್ಪಿಸಲು ಬ್ಯಾಂಕುಗಳು ತಮ್ಮ ಎಟಿಎಂ ಸಂಖ್ಯೆಯನ್ನು ಇಳಿಸುವ ತಂತ್ರಗಳನ್ನು ರೂಪಿಸಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಕಾರ 2023 ರ ಸೆಪ್ಟೆಂಬರ್ ನಲ್ಲಿ ಸುಮಾರು 2,19,000 ಇದ್ದ ಎಟಿಎಂಗಳ ಸಂಖ್ಯೆ ಮರುವರ್ಷ 2024 ರ ಸೆಪ್ಟೆಂಬರ್ ನಲ್ಲಿ 2,15,000 ಕ್ಕೆ ಇಳಿದಿದೆ. ಒಟ್ಟಿನಲ್ಲಿ ಹೊಸ ತಂತ್ರಜ್ಞಾನಗಳು ಬಂದಂತೆಲ್ಲ ಹಿಂದಿನ ಟೆಕ್ನಾಲಜಿಗಳು ಹೇಗೆ ಬದಿಗೆ ಸರಿಯುತ್ತವೆ ಎನ್ನುವುದಕ್ಕೆ ಎಟಿಎಂ ತಾಜಾ ಉದಾಹರಣೆ. ಮುಂದಿನ ಕೆಲವು ವರ್ಷಗಳ ಇದರ ಸಂಖ್ಯೆ ಇನ್ನಷ್ಟು ಇಳಿಕೆ ಕಾಣುವ ಸಾಧ್ಯತೆ ನಿಚ್ಚಳವಾಗಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search