• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದಲ್ಲಿ ಮೋದಿ – ಅದಾನಿ ಟೀ ಶರ್ಟ್ , ತೆಲಂಗಾಣದಲ್ಲಿ ಕಾಂಗ್ರೆಸ್ ಸಿಎಂ – ಅದಾನಿ ಟೀ ಶರ್ಟ್ ವಿವಾದ!

Tulunadu News Posted On December 10, 2024


  • Share On Facebook
  • Tweet It

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಗಾಗ್ಗೆ ಮೋದಿ ಹಾಗೂ ಅದಾನಿ ವಿಷಯದಲ್ಲಿ ಆರೋಪ, ಟೀಕೆ, ವ್ಯಂಗ್ಯ ಹೀಗೆ ಮಾಡುತ್ತಲೇ ಬರುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಎರಡು ದಿನಗಳ ಹಿಂದಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಂಸತ್ ಭವನದ ಹೊರಗೆ ಪ್ರತಿಭಟನೆಯಲ್ಲಿ ತಮ್ಮ ಟೀಶರ್ಟ್ ನ ಬೆನ್ನಿನ ಭಾಗದಲ್ಲಿ ಮೋದಿ ಅದಾನಿ ಏಕ್ ಹೇ, ಅದಾನಿ ಸೇಫ್ ಹೇ ಎನ್ನುವ ಶಬ್ದಗಳನ್ನು ಬರೆದ ಸ್ಟಿಕ್ಕರ್ ಅಂಟಿಸಿಕೊಂಡು ಪ್ರತಿಭಟಿಸುತ್ತಿದ್ದರು. ಅವರ ಜೊತೆಯಲ್ಲಿ ಇದ್ದವರು ಕೂಡ ಹಾಗೆ ಮಾಡಿದ್ದರು. ಈ ಮೂಲಕ ಮೋದಿಯವರ ‘ಏಕ್ ಹೇ ತೋ ಸೇಫ್ ಹೇ’ ಎಂಬ ಘೋಷಣಾ ವಾಕ್ಯವನ್ನು ಹಂಗಿಸುವಂತೆ ಪ್ರತಿಭಟನಾ ರಣತಂತ್ರವನ್ನು ಹೆಣೆದಿದ್ದರು.

ದೆಹಲಿಯಲ್ಲಿ ಅದಾನಿಯವರನ್ನು ತೆಗಳುವ ಕಾಂಗ್ರೆಸ್ ಪಕ್ಷ ತಾನು ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಬೇರೆಯದ್ದೇ ರೀತಿಯ ರಾಜಕೀಯವನ್ನು ಮಾಡುತ್ತಿದೆ. ಅಲ್ಲಿ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್ಸಿನ ರೇವಂತ್ ರೆಡ್ಡಿ ಇದೇ ಅದಾನಿಯವರೊಂದಿಗೆ ಒಪ್ಪಂದವನ್ನು ಮಾಡಿಕೊಂಡು ರಾಜ್ಯದಲ್ಲಿ ಬಂಡವಾಳ ತಂದಿದ್ದಾರೆ. ಇದನ್ನು ಬಿಆರ್ ಎಸ್ ಶಾಸಕರಾದ ಕೆಟಿಆರ್ ಅವರು ವಿರೋಧಿಸಿ ಅದಾನಿ ಹಾಗೂ ರೇವಂತ್ ರೆಡ್ಡಿ ಜೊತೆಗಿರುವ ಫೋಟೋ ಧರಿಸಿ ವಿಧಾನಸೌಧದ ಒಳಗೆ ಪ್ರವೇಶಿಸಲು ಹೊರಟಾಗ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಲುವುಗಳು ವ್ಯತಿರಿಕ್ತವಾಗಿವೆ. ಕೇಂದ್ರದ ಮುಖಂಡರು ಅದಾನಿಯನ್ನು ಕಂಡರೆ ಉರಿದುಬೀಳುತ್ತಾರೆ. ಅಂಬಾನಿಯವರನ್ನು ಕಂಡರೆ ಮೈಮೇಲೆ ಆವೇಶ ಬಂದವರಂತೆ ಆಡುತ್ತಾರೆ. ಆದರೆ ಅದೇ ಕಾಂಗ್ರೆಸ್ಸಿಗರು ಮುಖಂಡರು ಅದಾನಿಯವರ ಮಗ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಮದುವೆಗೆ ಹೋಗಿ ಭಾಗವಹಿಸಿ ಎಂಜಾಯ್ ಮಾಡಿದ್ದಾರೆ. ಆಗ ಅವರಿಗೆ ಅಂಬಾನಿ ವಿರೋಧಿಯಲ್ಲ. ಅದೇ ಚುನಾವಣಾ ಪ್ರಚಾರ ಸಭೆಗಳಲ್ಲಿ, ಸಂಸತ್ತಿನಲ್ಲಿ ಮೋದಿ, ಅದಾನಿ, ಅಂಬಾನಿಯನ್ನು ಟೀಕಿಸದಿದ್ದರೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿಗೆ ಆ ಕಾರ್ಯಕ್ರಮ ಅಪೂರ್ಣವೆನಿಸುತ್ತದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮರಾವ್ ಮಾತ್ರ ಇದೇ ವಿಷಯವನ್ನು ಅಸ್ತ್ರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಹಾಗಾದರೆ ತೆಲಂಗಾಣದ ಸಿಎಂ ರೆಡ್ಡಿ ತಾವು ಕಾಂಗ್ರೆಸ್ ಹೈಕಮಾಂಡಿಗೆ ಬಿಸಿತುಪ್ಪ ಆಗುತ್ತೇನೆ ಎಂದು ಗೊತ್ತಿದ್ದರೂ ಅದಾನಿಯವರೊಂದಿಗೆ ಒಪ್ಪಂದ ಮಾಡಿಕೊಂಡ್ರಾ ಅಥವಾ ಅವರಿಗೆ ಅದು ಅನಿವಾರ್ಯವಾಗಿತ್ತಾ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search