• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!

Tulunadu News Posted On December 25, 2024
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮೂಳೆ ದಾನ ನಡೆದಿದೆ. ಮಡಿಕೇರಿಯ ಸೋಮವಾರಪೇಟೆಯ ಜಾಮಬೂರ್ ಗ್ರಾಮದ ಈಶ್ವರ ಎನ್ ಅವರು ಡಿಸೆಂಬರ್ 22 ರಂದು ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ನಿಧನದ ನಂತರ ಅವರ ಸಹೋದರಿ ಮತ್ತು ಕುಟುಂಬಸ್ಥರ ಒಪ್ಪಿಗೆ ಪಡೆದು ಮೂಳೆ ದಾನ ಶಸ್ತ್ರಚಿಕಿತ್ಸೆ ನಡೆಸಲಾಯಿತು. 32 ವರ್ಷದ ಈಶ್ವರ್ ಅವರು ನಿಧನ ಅಪಘಾತದಿಂದ ಆಗಿದ್ದ ಕಾರಣ ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿ ಮೂಳೆ ದಾನ ಪ್ರಕ್ರಿಯೆ ನಡೆಸಲಾಗಿತ್ತು. ಇಲ್ಲಿಯವರೆಗೆ ನೇತ್ರದಾನ, ಲಿವರ್, ಕಿಡ್ನಿ ಸಹಿತ ಬೇರೆ ಬೇರೆ ಅಂಗಾಗಗಳ ದಾನ ಪ್ರಕ್ರಿಯೆ ನಡೆದಿದೆ. ಆದರೆ ಕರ್ನಾಟಕದಲ್ಲಿ ಮೂಳೆ ದಾನ ಪ್ರಕ್ರಿಯೆ ನಡೆದಿರುವುದು ಇದೇ ಮೊದಲು.

ಆಸ್ಪತ್ರೆಯ ವೈದ್ಯರಾದ ಡಾ. ವರುಣ್ ಶೆಟ್ಟಿಯವರು ಮಾಹಿತಿ ನೀಡಿ ಈ ಮೂಳೆ ದಾನದಿಂದ ಸಂಗ್ರಹಿಸಲಾಗುವ ಅಂಶಗಳು ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತರಾಗಿರುವ ಆರು ಮಕ್ಕಳ ವೈದ್ಯಕೀಯ ಚಿಕಿತ್ಸೆಯ ಅವಧಿಯಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದು ನಮ್ಮ ರಾಜ್ಯದ ಮಟ್ಟಿಗೆ ಮೊದಲ ಮೂಳೆ ದಾನವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡುವ ಅಗತ್ಯವೂ ಇದೆ. ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಸುಮಲತಾ ಶೆಟ್ಟಿಯವರು ಮಾತನಾಡಿ ಈಶ್ವರ್ ಅವರ ಪರಿವಾರದವರಿಗೆ ಕೃತಜ್ಞತೆ ಸಲ್ಲಿಸಿ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೂ ಅಭಿನಂದನೆ ತಿಳಿಸಿದರು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search