• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!

Tulunadu News Posted On December 25, 2024
0


0
Shares
  • Share On Facebook
  • Tweet It

ಮೈಸೂರು ನಗರದ ಕೆ. ಆರ್. ರಸ್ತೆಯ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ವೃತ್ತದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್ ವರೆಗೆ ” ಸಿದ್ಧರಾಮಯ್ಯ ಆರೋಗ್ಯ ಮಾರ್ಗ” ಎಂದು ನಾಮಕರಣ ಮಾಡಲು ನವೆಂಬರ್ 22, 2024 ರಂದು ನಡೆದ ಮೈಸೂರು ನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಸಂಬಂಧ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳಿದ್ದರೆ ಮೈಸೂರು ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರವರ ಕಚೇರಿಗೆ 30 ದಿನಗಳೊಳಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 13 ರಂದು ನಗರಪಾಲಿಕೆ ಸಾರ್ವಜನಿಕ ಪ್ರಕಟನೆಯನ್ನು ದಿನಪತ್ರಿಕೆಗಳಲ್ಲಿ ಹೊರಡಿಸಿತ್ತು.

ಕೆ ಆರ್ ಎಸ್ ರಸ್ತೆಗೆ ನಾಮಕರಣ ಮಾಡಲು ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷೆ ಭಾನು ಮೋಹನ್ ವಿರೋಧ ವ್ಯಕ್ತಪಡಿಸಿದ್ದು, ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಹಲವು ಸೆಕ್ಷನ್ ನಡಿ ಭ್ರಷ್ಟಾಚಾರದ ದೂರು ದಾಖಲಾಗಿದೆ. ಅದ್ದರಿಂದ ಈ ಹಂತದಲ್ಲಿ ಅವರ ಹೆಸರನ್ನು ರಸ್ತೆಗೆ ಇಡುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ. ಗಂಭೀರ ಆರೋಪ ಹೊತ್ತಿರುವ ವ್ಯಕ್ತಿಯ ಹೆಸರನ್ನು ರಸ್ತೆಗೆ ಇಡುವ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ನೀಡುವುದು ಸರಿಯಾ ಎನ್ನುವುದು ಅವರ ಪ್ರಶ್ನೆ.

ಸಿದ್ಧರಾಮಯ್ಯ ವಿರುದ್ಧದ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ವಿಚಾರಣೆ ಮುಗಿದು ನ್ಯಾಯಾಲಯದ ತೀರ್ಪು ಬರುವವರೆಗೆ ಸಿದ್ಧರಾಮಯ್ಯನವರ ಹೆಸರು ರಸ್ತೆಗೆ ಇಡಬಾರದು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿದ್ಧರಾಮಯ್ಯ ದೋಷಮುಕ್ತರಾದರೆ ಆಗ ಅವರ ಹೆಸರು ಇಡಬೇಕೋ, ಬೇಡವೋ ಎಂದು ತೀರ್ಮಾನವಾಗಲಿ ಎಂದು ಅವರು ಆಗ್ರಹಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಮುಖಂಡರು ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯನವರ ಹೆಸರು ಇಡುವ ಪ್ರಕ್ರಿಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಈ ವಿಷಯದಲ್ಲಿ ವಿರೋಧಿಸುವ ಸಣ್ಣತನ ಬೇಡಾ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search