• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024
0


0
Shares
  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search