• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!

Tulunadu News Posted On January 14, 2025
0


0
Shares
  • Share On Facebook
  • Tweet It

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಗುತ್ತಿಗೆದಾರ ಮೊಹಮ್ಮದ್ ಮಜಹರ್ ಅವರು, ತಾವು ಮಾಡಿದ ಕಾಮಗಾರಿಗೆ ಹಣ ಬಿಡುಗಡೆ ಆಗದ ಹಿನ್ನಲೆ ಮುಖ್ಯಮಂತ್ರಿಗೆ ಹಣ ಬಿಡುಗಡೆ ಕೋರಿ ಪತ್ರ ಬರೆದಿದ್ದರು. ಮಾಡಿದ ಕಾಮಗಾರಿಗೆ ನಗರಸಭೆಯವರು ಹಣ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದರು. ಇದರ ನಂತರ ಈಗ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ನಿಂದ ದಯಾಮರಣ ಪತ್ರ ಬರೆಯಲಾಗಿದೆ.
ರಾಜ್ಯ ಸರಕಾರದಿಂದ ಸುಮಾರು 350 ಕೋಟಿ ರೂ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದ್ದು, ಕಳೆದ ಒಂದು ವರ್ಷದಿಂದ ಸರಕಾರಕ್ಕೆ ಮನವಿ ಮಾಡಿದ್ದರೂ, ಬಿಡುಗಡೆ ಮಾಡದ ಹಿನ್ನಲೆಯಲ್ಲಿ ಇದೀಗ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ಅಧ್ಯಕ್ಷ ವಸಂತ ಬಂಗೇರಾ ಅವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ವೆಂಡರ್ಸ್ ಪ್ರತಿಭಟನೆ ನಡೆಸಿದ್ದರು. ಅನೇಕ ವೆಂಡರ್ಸ್ ಕಷ್ಟದಲ್ಲಿದ್ದಾರೆ. ಇದನ್ನೇ ಆಶ್ರಯಿಸಿಕೊಂಡಿರುವ ಸಾಕಷ್ಟು ಜನ ಈಗಾಗಲೇ ಕೆಲಸ ಕಳೆದುಕೊಂಡಿದ್ದಾರೆ. ಯಾರಾದರೂ ಅಕ್ರಮ ಮಾಡಿದ್ದರೆ ಅವರ ವಿರುದ್ಧ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು ಎಲ್ಲರ ಬಿಲ್ ಪಾವತಿ ಮಾಡದಿರುವುದು ಸರಿಯಲ್ಲ ಎಂದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ಅಧ್ಯಕ್ಷ ವಸಂತ ಬಂಗೇರಾ ಪತ್ರ ಬರೆದಿದ್ದಾರೆ.
ರಾಜ್ಯ ಸರಕಾರದಲ್ಲಿ ಹಣದ ಕೊರತೆ ಇದೆಯೋ ಅಥವಾ ಗುತ್ತಿಗೆದಾರರು ಅಕ್ರಮ ಮಾಡಿದ್ದಾರೆ ಎಂದು ಹಣ ಬಿಡುಗಡೆಗೆ ಮೀನಾಮೇಶ ಎಣಿಸಲಾಗುತ್ತಿದೆಯೋ ಅಥವಾ ಇಲ್ಲಿ ಗುತ್ತಿಗೆದಾರರನ್ನು ಸತಾಯಿಸುವ ಉದ್ದೇಶ ಇದೆಯೋ ಎನ್ನುವುದರ ಬಗ್ಗೆ ಯಾವುದೋ ಒಂದು ನಿರ್ಧಾರಕ್ಕೆ ಬರಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ಇದರಿಂದ ನ್ಯಾಯಯುತವಾಗಿ ಕಾಮಗಾರಿಗಳನ್ನು ಮಾಡುವವರು ಕೂಡ ಸಂಕಷ್ಟದಲ್ಲಿ ಬಿದ್ದಿದ್ದಾರೆ ಎನ್ನುವುದು ನೂರಕ್ಕೆ ನೂರರಷ್ಟು ನಿಜ.
0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search