• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಧುಮೇಹಿಗಳಿಗೆ ಸಿಹಿ ಸುದ್ದಿ! ಇನ್ನು ಮಾತ್ರೆಗೆ ಅಷ್ಟು ಹಣ ಕೊಡಬೇಕಿಲ್ಲ!

Tulunadu News Posted On March 14, 2025
0


0
Shares
  • Share On Facebook
  • Tweet It

ಭಾರತವನ್ನು ಮಧುಮೇಹಿಗಳ ತವರೂರು ಎನ್ನುವ ನೋವಿನ ಹಣೆಪಟ್ಟಿ ಭಾರತೀಯರಿಗೆ ಸಿಕ್ಕಿದೆ. ಡಯಾಬೀಟಿಸ್ ಕಾಯಿಲೆ ಬರದಿರಲಿ ಎಂದು ಬೇಡುವವರಿಗೇನೂ ತೊಂದರೆ ಇಲ್ಲ. ಬಹುತೇಕರು ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ಮಾತ್ರೆಗಳನ್ನು ತಿನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಮಧುಮೇಹಿಗಳು ಪ್ರಮುಖವಾಗಿ ಬಳಸುವ ಎಂಪಾಗ್ಲಿಫ್ಲೋಜಿನ್ ಮಾತ್ರೆಗೆ ಈ ಮೊದಲು 60 ರೂಪಾಯಿ ಇತ್ತು. ಆದರೆ ಎಂಪಾಗ್ಲಿಪ್ಲೋಜಿನ್ ಔಷಧದ ತಯಾರಿಕಾ ಕಂಪೆನಿಯಾದ ಬೋರಿಂಜರ್ ಇಂಗ್ಲ್ ಹೈಂ (ಬಿಐ) ಹೊಂದಿದ ಪೇಟೆಂಟ್ ಅವಧಿ ಮಾರ್ಚ್ ಗೆ ಮುಕ್ತಾಯವಾಗಿದೆ.

ಹೀಗಾಗಿ ಹಲವು ಕಂಪೆನಿಗಳು ಇದರ ಜನೆರಿಕ್ ಮಾದರಿಯ ಔಷಧಗಳನ್ನು ತಯಾರಿಸಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿವೆ. ಇದರ ಪರಿಣಾಮ ಔಷಧಗಳ ಮುಕ್ತ ಮಾರುಕಟ್ಟೆಯಲ್ಲಿ ಸ್ಪರ್ಧೆ ಏರ್ಪಟ್ಟು ದರ ಪಾತಾಳ ತಲುಪಿದೆ. ಪ್ರಸ್ತುತ ಒಂದು ಮಾತ್ರೆಗೆ ಐದು ರೂಪಾಯಿಯಿಂದ ದರ ಆರಂಭವಾಗಿದೆ. ಇದರಿಂದ ಭಾರತದ ಕೋಟ್ಯಾಂತರ ನಾಗರಿಕರಿಗೆ ಉಪಯೋಗವಾಗಲಿದೆ. ಇಲ್ಲಿಯ ತನಕ ಪಾಪದವರ ದುಡಿಯುವ ಗಮನಾರ್ಹ ಮೊತ್ತ ಈ ಮಾತ್ರೆಗಳಿಗೆ ತಗಲುತ್ತಿತ್ತು. ಇನ್ನು ಅದು ಉಳಿತಾಯವಾಗಲಿದೆ. ದೆಹಲಿ ಮೂಲದ ಕಂಪೆನಿ ಮ್ಯಾನ್ ಕ್ಲೈಂಡ್ ಇದರ ಬೆಲೆಯನ್ನು ಐದೂವರೆ ರೂಪಾಯಿಯಿಂದ ಆರಂಭಿಸಿದ್ದರೆ ಮುಂಬೈ ಮೂಲದ ಗ್ಲೆನ್ ಮಾರ್ಕ್ 11 ರೂಪಾಯಿಯಿಂದ ಆರಂಭಿಸಿದೆ. ಇನ್ನು ಆಲ್ಕೆಂ ಕಂಪೆನನಿಯು ಮೂಲ ದರಕ್ಕಿಂತ 80 ಶೇಕಡಾ ಕಡಿಮೆ ದರವನ್ನು ನಿಗದಿಪಡಿಸಿದೆ.

ಒಟ್ಟಿನಲ್ಲಿ ವಿಷಯ ಚಿಕ್ಕದಿದ್ದರೂ ಇದರ ಪ್ರಯೋಜನ ಮಾತ್ರ ದೊಡ್ಡದು. ಒಂದು ಸಂಸ್ಥೆಗೆ ಪೇಟೆಂಟ್ ಇದ್ದರೆ ಅದರ ದರ ಹೇಗಿರುತ್ತದೆ ಮತ್ತು ಪೇಟೆಂಟ್ ಇಲ್ಲದಿದ್ದರೆ ಬಡವರಿಗೆ ಎಷ್ಟು ಲಾಭವಾಗುತ್ತದೆ ಎನ್ನುವುದು ಇದರಿಂದ ಗೊತ್ತಾಗುತ್ತದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search