• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?

Tulunadu News Posted On March 14, 2025


  • Share On Facebook
  • Tweet It

ರಾಜ್ಯ ಸರಕಾರವೇನೋ ಬಜೆಟಿನಲ್ಲಿ ಜನಪ್ರಿಯ ಘೋಷಣೆಗಳನ್ನು ಮಾಡುತ್ತದೆ, ಅದನ್ನು ನೋಡಿ ಜನ ಅಂದು, ಮರುದಿನ, ಹೆಚ್ಚೆಂದರೆ ವಾರ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ನಂತರ ಇವರ ಹಣೆಬರಹವೇ ಇಷ್ಟು ಎಂದು ಅದನ್ನು ಪಕ್ಕಕ್ಕೆ ಇಟ್ಟು ಮರೆತುಬಿಡುತ್ತಾರೆ. ಮಲ್ಟಿಫ್ಲೆಕ್ಸ್ ನ ವಿಷಯದಲ್ಲಿಯೂ ಹೀಗೆ ಆಗಬಾರದು ಎಂದಾದರೆ ಬಜೆಟಿನಲ್ಲಿ ಘೋಷಣೆ ಮಾಡಿದ್ದನ್ನು ಸರಕಾರ ಶೀಘ್ರ ಈಡೇರಿಕೆಗೆ ಇಚ್ಚಾಶಕ್ತಿ ತೋರಿಸಬೇಕು.

ಮಲ್ಟಿಫ್ಲೆಕ್ಸ್ ನಲ್ಲಿ ಆರಾಮ ಆಸೀನದಲ್ಲಿ ಕುಳಿತು ತಣ್ಣನೆಯ ವಾತಾವರಣದಲ್ಲಿ ಸಿನೆಮಾ ನೋಡಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಆದರೆ ಮಲ್ಟಿಫ್ಲೆಕ್ಸ್ ಟಿಕೆಟ್ ದರ ಮಧ್ಯಮ ವರ್ಗದವರ ಕೈಗೆ ಎಟಕುವುದೇ ಕಷ್ಟವಾಗಿತ್ತು. ಒಂದೊಂದು ಸಿನೆಮಾದ ಟಿಕೆಟ್ ದರ ನೋಡಿದರೆ ಸಾಮಾನ್ಯ ಜನ ಮಲ್ಟಿಫ್ಲೆಕ್ಸ್ ನಲ್ಲಿ ಸಿನೆಮಾ ನೋಡುವ ಆಸೆಯನ್ನೇ ಕೈಬಿಡುತ್ತಿದ್ದರು. ಆದರೆ ಇಲ್ಲಿನ ಜನರ ಹಣ ಕೊಳ್ಳೆ ಹೊಡೆದು ಪರಭಾಷಿಗರು ಬೆಳೆಯುವುದಕ್ಕೆ ಕಡಿವಾಣ ಹಾಕಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರ ಬಜೆಟಿನಲ್ಲಿ ಟಿಕೆಟ್ ದರ ಗರಿಷ್ಟ 200 ರೂ ಮೀರುವಂತಿಲ್ಲ ಎಂದು ಘೋಷಿಸಿದೆ. ಆದರೆ ಘೋಷಿಸಿದ ಕೂಡಲೇ ಅದು ಜಾರಿಗೆ ಬರುವುದಿಲ್ಲ.

ಅದನ್ನು ಕ್ಯಾಬಿನೆಟ್ ನಲ್ಲಿ ಮಂಡಿಸಿ ಅಲ್ಲಿ ಮಂಜೂರಾತಿ ಸಿಕ್ಕಿದ ನಂತರ ಸಂಬಂಧಪಟ್ಟ ಇಲಾಖೆಯು ಆ ಯೋಜನೆಯ ಅನುಷ್ಠಾನಕ್ಕೆ ಬೇಕಾದ ನಿಯಮಗಳನ್ನು ರೂಪಿಸಬೇಕಾಗುತ್ತದೆ. ಈ ಪ್ರಕ್ರಿಯೆ ಮುಗಿದ ನಂತರ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸುತ್ತದೆ. ನಂತರ ಇದು ನಿಯಮವಾಗಿ ಜಾರಿಗೆ ಬರುತ್ತದೆ. ಈ ಅಧಿಸೂಚನೆಯ ಬಳಿಕ ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಆಗ ಪ್ರಕ್ರಿಯೆಗೆ ತಡೆ ಬಿದ್ದರೂ ಆಶ್ಚರ್ಯವಿಲ್ಲ.
ಕೆಲವು ನಿರ್ಮಾಪಕರು ನಮ್ಮ ಸಿನೆಮಾಗೆ ದೊಡ್ಡ ಬಜೆಟ್ ತಗುಲಿದೆ. ಹಾಗಿರುವಾಗ ನಾವು ಕಡಿಮೆ ರೇಟ್ ಇಟ್ಟರೆ ಅಸಲು ಬರುವುದಿಲ್ಲ ಎಂದು ಹೇಳುತ್ತಾರೆ. ಆದರೆ ಅಂತವರ ವಾದದಲ್ಲಿ ಹುರುಳಿರುವುದಿಲ್ಲ. ಯಾಕೆಂದರೆ ಅಂತಹ ಸಿನೆಮಾಗಳಿಗೆ ಕಡಿಮೆ ದರ ಇದ್ದಲ್ಲಿ ಪ್ರೇಕ್ಷಕರ ಸಂಖ್ಯೆ ಐದು ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆಗ ಖಂಡಿತವಾಗಿ ಲಾಭ ಬರುತ್ತದೆ. ಆದರೆ ಸಿನೆಮಾದ ಮೇಲೆ ನಂಬಿಕೆ ಇಲ್ಲದೇ ಮೊದಲ ವಾರ ಸಿಕ್ಕಿದ್ದನ್ನು ಬಾಚುವ ಐಡಿಯಾದೊಂದಿಗೆ ಸಿನೆಮಾ ಮಾಡುವ ನಿರ್ಮಾಪಕರಿಗೆ ಸರಕಾರದ ನಿರ್ಧಾರ ಕಸಿವಿಸಿ ಉಂಟುಮಾಡುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search