• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾಲ್ ಗಳಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವಂತಿಲ್ಲ!

TNN Correspondent Posted On September 4, 2017


  • Share On Facebook
  • Tweet It

ನೀವು ಮಂಗಳೂರಿನ ಸಿಟಿ ಸೆಂಟರ್ ಗೆ ಮುಂದಿನ ಬಾರಿ ಹೋದಾಗ ನಿಮ್ಮ ವಾಹನ ಮಾಲ್ ಒಳಗೆ ಪಾರ್ಕ್ ಮಾಡಲು ಹೋಗುವಾಗ ಯಾವುದೇ ಹಣ ಕೊಡುವ ಅಗತ್ಯ ಇಲ್ಲ. ಕಾರಣ ಹಾಗೆ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವುದು ಕಾನೂನು ಪ್ರಕಾರ ತಪ್ಪು ಎಂದು ಹೈದ್ರಾಬಾದ್ ನಲ್ಲಿರುವ ಆಂದ್ರಪ್ರದೇಶ ಉಚ್ಚ ನ್ಯಾಯಾಲಯ 2003, ಮೇ 2 ರಂದು ಮದನ್ ಮೋಹನ್ ಮತ್ತು ಇತರರು ವಿರುದ್ಧ ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಕೇಸಿನಲ್ಲಿ ಹೇಳಿದೆ.

ತನ್ನಿಂದ ಹೈದ್ರಾಬಾದ್ ನ ಮಾಲ್ ಒಂದರಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳಲಾಗಿದೆ ಎಂದು ವಿಜಯ್ ಗೋಪಾಲ ಎನ್ನುವವರು ಪೊಲೀಸ್ ಸ್ಟೇಶನ್ ನಲ್ಲಿ ದೂರು ನೀಡಿದ್ದರು. ಅವರ ದೂರಿನ ಮೇಲೆ ಪ್ರಥಮ ಮಾಹಿತಿ ವರದಿಯಲ್ಲಿ ಪೊಲೀಸರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ಸೆಕ್ಷನ್ 188, 418, 420 ಬಳಸಿ ಮಾಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಯಾವುದೇ ವಸತಿ ಸಮುಚ್ಚಯ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸುವಾಗ ಅದರಲ್ಲಿ ಹೊರಗಿನಿಂದ ಅಲ್ಲಿ ಭೇಟಿ ಕೊಡುವ ವ್ಯಕ್ತಿಗಳ ವಾಹನ ನಿಲ್ಲಿಸಲು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇರಬೇಕು ಎಂದು ನಿಯಮ ಇದೆ. ಹಾಗೆ ಮಾಲ್ ಗಳಿಗೆ ಭೇಟಿ ಕೊಡುವ ಗ್ರಾಹಕರಿಗಾಗಿ ಇರುವ ಪಾರ್ಕಿಂಗ್ ವ್ಯವಸ್ಥೆ ಕಡ್ಡಾಯವಾಗಿದ್ದು ಅಲ್ಲಿ ಯಾವುದೇ ರೀತಿಯ ಶುಲ್ಕವನ್ನು ಸ್ವೀಕರಿಸಬಾರದು ಎನ್ನುವ ನಿಯಮ ಇದೆ. ಆ ನಿಯಮ ಮೀರಿ ಆ ಮಾಲ್ ನ ಆಡಳಿತ ಮಂಡಳಿ ಶುಲ್ಕ ಸ್ವೀಕರಿಸುತ್ತಿದ್ದರೆ ಅವರ ವಿರುದ್ಧ ದೂರು ದಾಖಲಿಸಬಹುದು.

ಇಲ್ಲಿಯ ತನಕ ಈ ನಿಯಮ ಯಾರಿಗೂ ಗೊತ್ತಿರಲಿಲ್ಲ. ಆಂಧ್ರ ಪ್ರದೇಶ ಹೈಕೋರ್ಟ್ ಆದೇಶ ನೀಡಿದ ನಂತರ ಇದರ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿದೆ. ಕೆಲವು ರಾಜ್ಯಗಳಲ್ಲಿ ಹೆಚ್ಚೆಂದರೆ 5 ರೂಪಾಯಿ ಪಾರ್ಕಿಂಗ್ ಫೀಸ್ ಪಡೆಯುವ ಅವಕಾಶ ಇರುವುದು ಹೌದು. ಒಟ್ಟಿನಲ್ಲಿ ಕರಾವಳಿಯ ಯಾವುದೇ ಮಾಲ್ ಗಳಲ್ಲಿ ನೀವು ಇನ್ನು ಮುಂದೆ ವಾಹನ ಪಾರ್ಕ್ ಮಾಡಿ ಆರಾಮಾಗಿ ಮಾಲ್ ಸುತ್ತಾಡಿ ಬರಬಹುದು. ಅಲ್ಲಿ ಹಣ ಕೇಳಿದರೆ ಕೊಡಲ್ಲ ಎನ್ನಿ, ಕಾನೂನು ಗ್ರಾಹಕರ ಪರವಾಗಿ ಇದೆ

  • Share On Facebook
  • Tweet It


- Advertisement -
mallparking fess


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search