• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಿಕ್ಷಾ ಚಾಲಕನ ಮಗನ ಕಮಾಲ್! ಐಪಿಎಲ್ ಮೊದಲ ಪಂದ್ಯದಲ್ಲಿಯೇ 3 ವಿಕೆಟ್!

Tulunadu News Posted On March 24, 2025
0


0
Shares
  • Share On Facebook
  • Tweet It

ಸಾಧಿಸುವ ಛಲ ಇದ್ದರೆ ಎಂತಹುದೇ ಕಷ್ಟವಾದರೂ ಸಹಿಸಿ ಯಶಸ್ಸಿನ ಶಿಖರ ಏರಬಹುದು ಎನ್ನುವುದಕ್ಕೆ ಮತ್ತೊಬ್ಬ ಯುವಕ ಸಾಕ್ಷಿಯಾಗಿದ್ದಾರೆ. ಅವರ ಹೆಸರು ವಿಘ್ನೇಶ್ ಪುತ್ತೂರು. ಇವರು ದಕ್ಷಿಣ ಕನ್ನಡದ ಪುತ್ತೂರಿನವರು ಅಲ್ಲ. ಇವರು ಮೂಲತ: ಕೇರಳದ ಮಲ್ಲಪುರಂನವರು. ಕ್ರಿಕೆಟಿನಲ್ಲಿ ಉನ್ನತ ಸಾಧನೆ ಮಾಡಬೇಕು ಎನ್ನುವ ಕಾರಣಕ್ಕೆ ತಂದೆ, ತಾಯಿಯ ಪ್ರೋತ್ಸಾಹದಿಂದ ತ್ರಿಶೂರ್ ಗೆ ಸ್ಥಳಾಂತರಗೊಂಡು ಕಾಲೇಜು ಮಟ್ಟದ ಕ್ರಿಕೆಟಿನಲ್ಲಿ ಮಧ್ಯಮ ವೇಗಿಯಾಗಿ ಕ್ರಿಕೆಟ್ ಯಾನವನ್ನು ಪ್ರಾರಂಭಿಸಿದರು. ನಂತರ ಸ್ಪಿನ್ ಬೌಲಿಂಗ್ ಗೆ ಶಿಫ್ಟ್ ಆದರು. ಅದು ಅವರ ಅದೃಷ್ಟಕ್ಕೆ ಕಾರಣವಾಯಿತು.

ಇವರು ರಿಸ್ಟ್ ಸ್ಪಿನ್ ಬೌಲಿಂಗ್ ಮಾಡುತ್ತಾ ಇದ್ದಾಗ ಆಯ್ಕೆಗಾರರ ಗಮನ ಸೆಳೆದು ಕೇರಳ ಕ್ರಿಕೆಟ್ ಲೀಗಿಗೆ ಆಯ್ಕೆಯಾದರು. ಅಲ್ಲಿ ಮುಂಬೈ ಇಂಡಿಯನ್ಸ್ ತಂಡ ಇವರ ಸಾಮರ್ತ್ಯ ಗುರುತಿಸಿತು. ಐಪಿಎಲ್ 2025 ರಲ್ಲಿ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಇವರನ್ನು ಕೇವಲ 30 ಲಕ್ಷಕ್ಕೆ ಖರೀದಿಸಿದೆ. ಆದರೆ ಮೊದಲ ಪಂದ್ಯದಲ್ಲಿ ಬಲಿಷ್ಟ ಚೆನ್ನೈ ವಿರುದ್ಧ ಮೂರು ವಿಕೆಟ್ ಪಡೆದುಕೊಂಡು ಪಾದಾರ್ಪಣೆ ಮಾಡಿದ ಪಂದ್ಯದಲ್ಲಿ ಆಯ್ಕೆಗಾರರಿಗೆ ತಮ್ಮ ಝಲಕ್ ತೋರಿಸಿ ಸೈ ಎನಿಸಿಕೊಂಡಿದ್ದಾರೆ.

ಆಶ್ಚರ್ಯ ಎಂದರೆ ವಿಘ್ನೇಶ್ ಪುತ್ತೂರು ಐಪಿಎಲ್ ನಂತಹ ದೊಡ್ಡ ಸರಣಿಯಲ್ಲಿ ಆಡುವ ಅವಕಾಶ ಗಳಿಸಿಕೊಂಡರೂ ಕೇರಳ ರಾಜ್ಯ ಪರ ಇನ್ನೂ ತಮ್ಮ ಕ್ರಿಕೆಟ್ ಜೀವನ ಆರಂಭಿಸಬೇಕಾಗಿದೆ. ಕೇರಳ ಪರ 23 ವರ್ಷದೊಳಗಿನ ಕ್ಯಾಟಗೇರಿಯಲ್ಲಿ ಆಡಿರುವ ವಿಘ್ನೇಶ್ ಭಾರತದ ಭವಿಷ್ಯದ ತಾರೆ ಆಗುವ ಲಕ್ಷಣ ಹೊಂದಿದ್ದಾರೆ. ಇವರ ತಂದೆ ಸುನೀಲ್ ಕುಮಾರ್ ಹಾಗೂ ತಾಯಿ ಕೆ.ಪಿ.ಬಿಂದು. ತಂದೆ ಆಟೋ ಚಾಲಕರಾಗಿದ್ದರೆ ತಾಯಿ ಗೃಹಿಣಿ. ಚೆನ್ನೈನಲ್ಲಿ ಸಿಎಸ್ ಕೆ ವಿರುದ್ಧ ಪಂದ್ಯದ ಎರಡನೇ ಇನ್ಸಿಂಗ್ಸ್ ನಲ್ಲಿ ಇಂಪ್ಯಾಕ್ಟ್ ಬದಲಿ ಆಟಗಾರನಾಗಿ ರೋಹಿತ್ ಶರ್ಮಾ ಬದಲಿಗೆ ಕಣಕ್ಕೆ ಇಳಿದ ವಿಘ್ನೇಶ್ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೊದಲ ಪಂದ್ಯದಲ್ಲಿಯೇ ಛಾಪನ್ನು ಮೂಡಿಸಿದ್ದಾರೆ. ಸದ್ಯ ಮುಂಬೈ ಇಂಡಿಯನ್ಸ್ ಆ ಪಂದ್ಯವನ್ನು ಸೋತರೂ ವಿಘ್ನೇಶ್ ಐಪಿಎಲ್ ನಲ್ಲಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಖಾಯಂ ಸದಸ್ಯನಾಗುವ ಸಾಧ್ಯತೆ ಇದೆ.

ಇಂತಹ ಯುವ ಪ್ರತಿಭೆಗಳಿಗೆ ಅವಕಾಶ ನೀಡಿ ಅವರ ಸಾಮರ್ಯ್ಯವನ್ನು ಒರೆಗಚ್ಚುವ ಕೆಲಸವನ್ನು ಮುಂಬೈ ಇಂಡಿಯನ್ಸ್ ತಂಡದ ಆಡಳಿತ ಮಂಡಳಿ ಅರಂಭದಿಂದಲೂ ಮಾಡುತ್ತಾ ಬರುತ್ತಿದೆ. ಅದಕ್ಕೆ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯನಂತವರೇ ಸಾಕ್ಷಿ.

ಇನ್ನು ವಿಘ್ನೇಶ್ ಪುತ್ತೂರು ಸಿಎಸ್ ಕೆ ನಾಯಕ ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ದೀಪಕ್ ಹೂಡಾ ವಿಕೆಟ್ ಪಡೆದು ಚೆನ್ನೈ ತಂಡದ ನಡುವನ್ನು ಮುರಿದರೂ ಮುಂಬೈ ಇಂಡಿಯನ್ಸ್ ತಂಡದ ಮೊತ್ತ 155 ಕ್ಕೆ ಸೀಮಿತಗೊಂಡಿದ್ದರಿಂದ ಗೆಲುವನ್ನು ದಾಖಲಿಸಲು ಸಾಧ್ಯವಾಗಲಿಲ್ಲ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search