• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಗ್ನ ವಿಡಿಯೋ ಬಗ್ಗೆ ಶ್ರುತಿ ನಾರಾಯಣ್ ಸ್ಪಷ್ಟನೆ, ದಯವಿಟ್ಟು ಶೇರ್ ಮಾಡಬೇಡಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಕಾಲಿವುಡ್ ನಟಿ, ಸೋಶಿಯಲ್ ಮೀಡಿಯಾ ಪ್ರಭಾವಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗಿದ್ದ 14 ನಿಮಿಷದ ನಗ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ತರಹೇವಾರಿ ಸುದ್ದಿಗಳು ಹರಿದಾಡುತ್ತಿದ್ದವು. ಖಾಸಗಿ ಆಡಿಷನ್ ಸಮಯದಲ್ಲಿ ಈ ವಿಡಿಯೋ ಸೋರಿಕೆಯಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಇನ್ನೊಂದೆಡೆ ತಮಿಳು ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆನೂ ಈ ವಿಡಿಯೋ ಅಲ್ಲಿನ ಕರಾಳ ಮುಖವನ್ನು ಬಹಿರಂಗಪಡಿಸುತ್ತದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಆದರೆ ಈ ವಿಡಿಯೋ ಬಗ್ಗೆ ನಟಿ ಶ್ರುತಿ ನಾರಾಯಣ್ ಅವರು ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮತ್ತು ನಾಗರಿಕರಲ್ಲಿ ಇತ್ತು. ಆ ವಿಷಯದಲ್ಲಿ ನಟಿ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ನಗ್ನ ವಿಡಿಯೋ ಎಐನಿಂದ ತಯಾರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ಒಂದು ಅನುಮಾನ ಆರಂಭದಲ್ಲಿ ಇತ್ತು. ಆದರೆ ನಟಿಯೇ ಹೇಳುವ ತನಕ ಯಾರೂ ಆ ಬಗ್ಗೆ ನಿರ್ಧಾರ ತಳೆಯಲು ಸಾಧ್ಯವಿರಲಿಲ್ಲ. ಯಾಕೆಂದರೆ ಅದು ಆಕೆಯ ಜೀವನದ ಪ್ರಶ್ನೆಯೂ ಆಗಿತ್ತು.
ನಟಿ ಶ್ರುತಿ ಈ ಬಗ್ಗೆ ತಮ್ಮ ಇನ್ಟಾಗ್ರಾಂ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶ್ರುತಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ಪ್ರೈವೇಟ್ ಮಾಡಿಕೊಂಡಿದ್ದರು. ಇದೀಗ ತಮ್ಮ ಖಾತೆಯನ್ನು ಮತ್ತೆ ಸಾರ್ವಜನಿಕಗೊಳಿಸಿದ್ದು, ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಶೇರ್ ಮಾಡಿರುವ ಮೊದಲ ಇನ್ಟಾ ಸ್ಟೋರಿಯಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಎಐ ಕ್ಲೋನಿಂಗ್ ಮೂಲಕ ಮಾಡಲಾಗಿದೆ ಎಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋವನ್ನು ಅವರು ಅಟ್ಯಾಚ್ ಮಾಡಿದ್ದಾರೆ.

ಎರಡನೇ ಸ್ಟೋರಿಯಲ್ಲಿ ಯಾರೂ ಕೂಡ ಆ ವಿಡಿಯೋವನ್ನು ಕಾಡ್ಗಿಚ್ಚಿನಂತೆ ಹರಡಬಾರದು ಎಂದು ಶ್ರುತಿ ನಾರಾಯಣನ್ ಮನವಿ ಮಾಡಿಕೊಂಡಿದ್ದಾರೆ. ನಿಮಗೆ ಇಂತಹ ವಿಡಿಯೋ ಗಳು ಖುಷಿ ನೀಡಬಹುದು. ಆದರೆ ನನಗೆ ಮತ್ತು ನನ್ನ ಹತ್ತಿರದವರಿಗೆ ಮನಸ್ಸಿಗೆ ನೋವನ್ನು ತಂದೊಡ್ಡುತ್ತದೆ. ಅಲ್ಲದೇ ಒಂದು ವೇಳೆ ನೀವು ನೋಡುವುದಾದರೆ ನಿಮ್ಮ ತಾಯಿ, ಸಹೋದರಿ ಅಥವಾ ಗೆಳತಿಯ ವಿಡಿಯೋಗಳನ್ನು ನೋಡಿ. ಏಕೆಂದರೆ ಅವರು ಕೂಡ ಮಹಿಳೆಯರು. ಅವರಿಗೂ ನನ್ನಂತೆಯೇ ದೇಹವಿದೆ. ಆದ್ದರಿಂದ ನಮ್ಮ ತೇಜೋವಧೆ ಮಾಡಲು ಎಐ ವಿಡಿಯೋ ನೋಡುವುದಕ್ಕಿಂದ ಹೋಗಿ ನಿಮ್ಮವರ ವಿಡಿಯೋ ನೋಡಿ ಎಂದು ನೋವು ತೋಡಿಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search