• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾಲಿನ ದರ ಹೆಚ್ಚಳದಿಂದಾಗಿ ಕಾಫಿ, ಟೀ ಗ್ಲಾಸಿಗೆ 2-3 ರೂ ಹೆಚ್ಚಳ ಪಕ್ಕಾ!

Tulunadu News Posted On March 28, 2025
0


0
Shares
  • Share On Facebook
  • Tweet It

ನಂದಿನಿ ಹಾಲಿನ ದರ ಲೀಟರಿಗೆ 4 ರೂ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಹೋಟೇಲು, ಕ್ಯಾಂಟೀನುಗಳಲ್ಲಿ ಕಾಫಿ, ಟೀ ದರವೂ ಸಹಜವಾಗಿ ಏರಿಕೆ ಕಾಣಲಿದೆ. ಇದು ಶೇಕಡಾ ಹತ್ತರಿಂದ ಹದಿನೈದು ಜಾಸ್ತಿಯಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೇಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಕಳೆದ ತಿಂಗಳು ಕಾಫಿ ಪುಡಿ ದರ ಹೆಚ್ಚಳವಾದಾಗ ಕೆಲವು ಹೋಟೇಲುಗಳಲ್ಲಿ ದರ ಹೆಚ್ಚಾಗಿದೆ. ಆದರೂ ಅನೇಕ ಕಡೆ ಏರಿಕೆ ಆಗಿರಲಿಲ್ಲ. ಈಗ ಹಾಲಿನ ದರವೂ ಹೆಚ್ಚಾಗಿರುವುದರಿಂದ ಹೋಟೇಲುಗಳಲ್ಲಿ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ. ಯಾವಾಗೆಲ್ಲ ಹಾಲಿನ ದರ ಹೆಚ್ಚಾಗುತ್ತದೆಯೋ ಆಗ ಅದರ ಹೊರೆಯನ್ನು ಹೋಟೇಲಿನ ಮಾಲೀಕರು ಗ್ರಾಹಕರ ಮೇಲೆ ಹಾಕುವುದು ಯಾವತ್ತೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದರೊಂದಿಗೆ ಹಾಲಿನ ಉತ್ಪನ್ನಗಳ ದರವೂ ಹೆಚ್ಚಳವಾಗುವುದರಿಂದ ಮೊಸರು ವಡೆ, ಪನ್ನೀರ್ ಐಟಂಗಳ ದರವೂ ಹೆಚ್ಚಳವಾಗಲಿದೆ.

ಇನ್ನು ತುಪ್ಪದೋಸೆ ಸಹಿತ ತುಪ್ಪದಿಂದ ತಯಾರಿಸಲಾಗುವ ಸಿಹಿತಿಂಡಿಗಳ ದರವೂ ಹೆಚ್ಚಳವಾಗಲಿದೆ. ಆದ್ದರಿಂದ ಇನ್ನು ನಿತ್ಯ ಹೋಟೇಲುಗಳಲ್ಲಿ ಆಹಾರ, ಕಾಫಿ, ಪಾರ್ಟಿ ಮಾಡುವವರು ಜೇಬನ್ನು ಹಗುರ ಮಾಡಿಕೊಳ್ಳುವ ದಿನಗಳು ಬರಲಿವೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search