• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಕ್ತಪರೀಕ್ಷೆಗೆ ಇನ್ನು ಸೂಜಿ ಚುಚ್ಚಬೇಕಾಗಿಲ್ಲ!

Tulunadu News Posted On March 31, 2025
0


0
Shares
  • Share On Facebook
  • Tweet It

ರಕ್ತದಲ್ಲಿನ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಸೂಜಿ ಚುಚ್ಚುವ ದಾರಿಗೆ ಪರ್ಯಾಯವಾಗಿ ಒಂದು ಸೆಕೆಂಡ್ ಕೂಡ ನೋವಿಲ್ಲದೇ, ಚರ್ಮಕ್ಕೆ ರಂಧ್ರ ಇಲ್ಲದೇ ” ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್” ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ನಗರ ಭಾರತೀಯ ವಿಜ್ಞಾನ ಸಂಸ್ಥೆಯ ” ಇನ್ ಸ್ಟುಮೆಂಟೇಷನ್ ಆಂಡ್ ಅಪ್ಲೈಡ್ ಫಿಸಿಕ್ಸ್” ( ಐಎಪಿ) ವಿಭಾಗ ಮಾಡಿದೆ.

ಈ ಕುರಿತು ಸಂಶೋಧನಾ ವರದಿ ಬಿಡುಗಡೆ ಮಾಡಲಾಗಿದೆ. ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಆಗಾಗ ಸೂಜಿ ಚುಚ್ಚುವುದರಿಂದ ಅವರಿಗೆ ಕಿರಿಕಿರಿ ಆಗುವ ಜೊತೆ ಸೋಂಕು ಉಂಟಾಗುವ ಸಾಧ್ಯತೆಯೂ ಇದೆ. ಆದರೆ ಈ ಸಂಶೋಧನೆಯಲ್ಲಿ ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್ ತಂತ್ರ ಬಳಸಿ ಅಂಗಾಂಶದ ಮೇಲೆ ಲೇಸರ್ ಕಿರಣಗಳನ್ನು ಬಿಡಲಾಗುತ್ತದೆ. ಆಗ ಅಂಗಾಂಶ ಬಿಸಿಯಾಗಿ ಕಂಪನ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ಅಲ್ಟ್ರಾಸಾನಿಕ್ ಸೌಂಡ್ ವೇವ್ಸ್ ಗಳನ್ನು ಸೂಕ್ಷ್ಮ ಸೆನ್ಸರ್ ಗಳು ಸೆರೆಹಿಡಿಯುತ್ತವೆ.

ಲೇಸರ್ ಕಿರಣಗಳನ್ನು ಬಿಟ್ಟಾಗ ಅಂಗಾಶದೊಳಗಿನ ಬೇರೆ ಬೇರೆ ಅಣುಗಳು ಮತ್ತು ಬೇರೆ ಬೇರೆ ಅಂಶಗಳು ಬೇರೆ ಬೇರೆ ರೀತಿಯಲ್ಲಿ ಧ್ವನಿ ತರಂಗಗಳ ಮೂಲಕಪ್ರತಿಕ್ರಿಯಿಸುತ್ತವೆ. ಫಲಿತಾಂಶದ ಆಧಾರದ ಮೇಲೆ ಗ್ಲೂಕೋಸ್ ಪ್ರಮಾಣವನ್ನು ಕಂಡುಹಿಡಿಯಬಹುದು. ಈ ತಂತ್ರದಲ್ಲಿ ಅಂಗಾಂಶಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವುದು ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಐಐಎಸ್ಸಿಯ ಐಎಪಿ ವಿಭಾಗದ ಸಹಾಯಕ ಪ್ರಾಧ್ಯಾಪಕರು ತಿಳಿಸಿದ್ದಾರೆ.

ನಿರ್ದಿಷ್ಟ್ಯ ದಿಕ್ಕಿನಲ್ಲಿ ಸಾಗುವ ಧ್ರುವೀಕೃತ ಕಿರಣಗಳನ್ನು ಬಳಸಿ ಗ್ಲೂಕೋಸ್ ಅಣುವಿನ ಸಾಂದ್ರತೆ ಮಾತ್ರ ಅಳತೆ ಮಾಡಲಾಗಿದೆ. ಆರೋಗ್ಯಕರ ವ್ಯಕ್ತಿ ದೇಹದಲ್ಲಿ ಊಟಕ್ಕೆ ಮೊದಲು ಮತ್ತು ಊಟದ ನಂತರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಳೆಯಲು 3 ದಿನಗಳ ಕಾಲ ಪ್ರಾಯೋಗಿಕ ಅಧ್ಯಯನ ಕೂಡ ಮಾಡಲಾಗಿದೆ. ಈ ಪ್ರಯೋಗಕ್ಕೆ ಬಳಸಿರುವ ಲೇಸರ್ ಯಂತ್ರವು ಸಣ್ಣ ಪ್ರಮಾಣದ ಕಿರಣಗಳನ್ನು ಬಿಡುಗಡೆ ಮಾಡುತ್ತದೆ. ದುಬಾರಿಯಾಗಿದ್ದು, ಹೆಚ್ಚು ಸ್ಥಳಾವಕಾಶ ಬೇಕಾಗುತ್ತದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search