• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

140 ಕಿ.ಮೀ ನಡೆಯುತ್ತಾ ಅನಂತ್ ಅಂಬಾನಿಯಿಂದ ದ್ವಾರಕ ಭೇಟಿಗೆ ಸಂಕಲ್ಪ!

Tulunadu News Posted On April 1, 2025
0


0
Shares
  • Share On Facebook
  • Tweet It

ಶ್ರೀಮಂತರ ಮಕ್ಕಳಿಂದ ಇದೆಲ್ಲಾ ಸಾಧ್ಯವಾ ಎನ್ನುವ ಪ್ರಶ್ನೆಗೆ ಉತ್ತರವಾಗಿ ದೇಶದ ಅತ್ಯಂತ ಶ್ರೀಮಂತ ಉದ್ಯಮಿಯ ಪುತ್ರ ಅನಂತ್ ಅಂಬಾನಿ 140 ಕಿ.ಮೀ ಕ್ರಮಿಸಿ ದ್ವಾರಕೆಯಲ್ಲಿ ದೇವರ ದರ್ಶನ ಮಾಡಲು ಹೊರಟಿದ್ದಾರೆ. ಗುಜರಾತಿನ ಜಾಮ್ ನಗರದ ತಮ್ಮ ಮನೆಯಿಂದ ಹೊರಟು ದ್ವಾರಕಕ್ಕೆ ಬರುವ ದಾರಿಯುದ್ದಕ್ಕೂ ಅವರು ಹನುಮಾನ್ ಚಾಲಿಸಾ ಪಠಣ ಮಾಡುತ್ತಾ ಇದ್ದಾರೆ. ತಮ್ಮ 30ನೇ ವರ್ಷದ ಜನ್ಮದಿನವನ್ನು ಅನಂತ್ ಅಂಬಾನಿ ಈ ರೀತಿಯಲ್ಲಿ ಆಚರಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಕೇವಲ ನಡಿಗೆಯ ಮೂಲಕ ಅಷ್ಟು ದೂರ ಕ್ರಮಿಸಲಿರುವ ಅನಂತ್ ಅಂಬಾನಿ ತಮ್ಮ ದೇವರ ಮೇಲಿರುವ ಭಕ್ತಿಯನ್ನು ದೈಹಿಕ ಶ್ರಮದ ಮೂಲಕವೂ ತೋರಿಸಿಕೊಟ್ಟು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತಿದ್ದಾರೆ.

ನಮ್ಮ ಸ್ವಅಭಿವೃದ್ಧಿ ಮತ್ತು ಯಶಸ್ಸಿಗೆ ದೇವರ ಆರ್ಶೀವಾದ ಎಷ್ಟು ಅಗತ್ಯ ಎನ್ನುವುದನ್ನು ಅನಂತ್ ಸಾಧಿಸಿ ತೋರಿಸಿದ್ದಾರೆ. ತಮ್ಮ ಪಾದಯಾತ್ರೆಯ ಉದ್ದಕ್ಕೂ ಸನಾತನ ಧರ್ಮದಲ್ಲಿ ವಿಶ್ವಾಸ ಮತ್ತು ಸಮರ್ಪಣಾ ಮನೋಭಾವದಿಂದ ಉನ್ನತ ಸ್ಥಾನಕ್ಕೆ ಏರಲು ದೇವರ ಅನುಗ್ರಹ ಪಡೆಯಬಹುದು ಎಂದು ಕ್ರಿಯೆಯ ಮೂಲಕ ತೋರಿಸಿದ್ದಾರೆ. ಶಿಸ್ತು, ನಂಬಿಕೆ ಮತ್ತು ತಾನು ಏನೂ ಅಲ್ಲ, ಎಲ್ಲವೂ ಭಗವಂತ ಎನ್ನುವ ದೇವರೊಂದಿಗಿನ ಸಂಬಂಧದಿಂದ ಯಾವುದೇ ಸವಾಲನ್ನು ಎದುರಿಸಿ ಗೆದ್ದು ಬರಬಹುದು ಎಂದು ಅಂಬಾನಿ ಪುತ್ರ ತೋರಿಸಿಕೊಟ್ಟಿದ್ದಾರೆ.

ಪಾದಯಾತ್ರೆಯ ಮುಂಚೂಣಿಯಲ್ಲಿ ನಡೆದು ಬರುತ್ತಿರುವ ಅನಂತ ಅಂಬಾನಿ, ಒಂದು ಯಶಸ್ಸನ್ನು ಕನಸು ಕಾಣುವ ಜೊತೆಗೆ ಅದನ್ನು ಪಡೆಯಲು ಶಿಸ್ತು ಮತ್ತು ಅನುಷ್ಠಾನ ಎಷ್ಟು ಮುಖ್ಯ ಎಂದು ಈ ಮೂಲಕ ತೋರಿಸಿಕೊಟ್ಟಿದ್ದಾರೆ. ಅಧ್ಯಾತ್ಮಿಕತೆ ಮತ್ತು ಮಾನಸಿಕ ಶಕ್ತಿಯ ಮೇಲೆ ನಾವು ವಿಶ್ವಾಸ ಇಟ್ಟಾಗ ಯಶಸ್ಸಿನ ದಾರಿಯಲ್ಲಿ ಬರುವ ಎಂತಹ ಸಂಕಷ್ಟಗಳನ್ನು ಕೂಡ ದೂರ ಮಾಡಬಹುದು ಎಂದು ಅನಂತ್ ನಂಬಿದ್ದಾರೆ.

ಅನಂತ್ ಅಂಬಾನಿ ಮಾರ್ಚ್ 28 ರಂದು ಪಾದಯಾತ್ರೆ ಆರಂಭಿಸಿದ್ದು, ಒಟ್ಟು 12 ರಿಂದ 13 ದಿನಗಳ ತನಕ ನಡೆಯಲಿದ್ದಾರೆ. ನಿತ್ಯ ಕನಿಷ್ಟ 12 ಕಿಲೋ ಮೀಟರ್ ನಡೆಯುವ ಪಾದಯಾತ್ರೆ ದ್ವಾರಕಾವನ್ನು ಏಪ್ರಿಲ್ 8 ರಂದು ತಲುಪಲಿದೆ. ಅಲ್ಲಿ ಅವರು ಏಪ್ರಿಲ್ 10 ರಂದು ದ್ವಾರಕಾಧೀಶರಿಗೆ ಪೂಜೆ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search