• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಸವನ್ನು ನೀರಿಗೆ ಎಸೆದ ಪ್ರಖ್ಯಾತ ಗಾಯಕನಿಗೆ 250000 ದಂಡ!

Tulunadu News Posted On April 3, 2025
0


0
Shares
  • Share On Facebook
  • Tweet It

ಕೇರಳದ ಪ್ರಖ್ಯಾತ ಹಿನ್ನಲೆ ಗಾಯಕರಾದ ಎಂ ಜಿ ಶ್ರೀಕುಮಾರ್ ಅವರು ಕೊಚ್ಚಿಯ ಬ್ಯಾಕ್ ವಾಟರ್ (ಹಿನ್ನೀರು) ಇಲ್ಲಿ ತ್ಯಾಜ್ಯವನ್ನು ಎಸೆದಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಮುಲಾವುಕಾಡ್ ಗ್ರಾಮ ಪಂಚಾಯತ್ 25000 ರೂ ದಂಡ ವಿಧಿಸಿದೆ. ಪಂಚಾಯತ್ ಕಡೆಯಿಂದ ಶ್ರೀಕುಮಾರ್ ಅವರಿಗೆ ನೋಟಿಸು ಜಾರಿ ಮಾಡಲಾಗಿದ್ದು, ಹದಿನೈದು ದಿನಗಳ ಒಳಗೆ ದಂಡದ ಮೊತ್ತವನ್ನು ಕಟ್ಟುವಂತೆ ಆದೇಶಿಸಲಾಗಿದೆ.

ಅಷ್ಟಕ್ಕೂ ನಡೆದದ್ದೇನು?

ಕೊಚ್ಚಿ ಹಿನ್ನೀರು ಪ್ರದೇಶ ಪ್ರವಾಸಿಗರಿಗೆ ತುಂಬಾ ನೆಚ್ಚಿನ ತಾಣ. ಅಲ್ಲಿ ಆಗಮಿಸಿದ್ದ ಪ್ರವಾಸಿಯೊಬ್ಬ ವಿಡಿಯೋ ಮಾಡುವಾಗ ಅಲ್ಲಿಯೇ ಇರುವ ಶ್ರೀಕುಮಾರ್ ಅವರ ಮನೆಯಿಂದ ತ್ಯಾಜ್ಯದ ಚೀಲವನ್ನು ಯಾರೋ ಕೊಚ್ಚಿ ಹಿನ್ನೀರಿಗೆ ಎಸೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆ ಸ್ಥಳ ಮುಲ್ಲ್ವುಕಾಡು ಪಂಚಾಯತ್ ಏರಿಯಾಗೆ ಬರುತ್ತದೆ. ಆ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿದ ಪ್ರವಾಸಿಗ ಅದನ್ನು ಸ್ಥಳಿಯಾಡಳಿತ ಸಚಿವ ಎಂ ಬಿ ರಾಜೇಶ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಆ ಪೋಸ್ಟಿಗೆ ಪ್ರತಿಕ್ರಿಯಿಸಿದ ಸಚಿವರು ಇಂತಹ ದೂರುಗಳಿದ್ದಲ್ಲಿ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಸರಕಾರದ ವಾಟ್ಸಾಪ್ ನಂಬ್ರ (9446700800) ಇದಕ್ಕೆ ಕಳುಹಿಸಿಕೊಡಲು ಸೂಚಿಸಿದ್ದಾರೆ.
ಅದರಂತೆ ದೂರು ಸ್ವೀಕಾರ ಮಾಡಿದ ಸ್ಥಳೀಯಾಡಳಿತದ ಕಂಟ್ರೋಲ್ ರೂಂ ತಕ್ಷಣ ಅಲ್ಲಿನ ಸ್ಥಳೀಯ ಪಂಚಾಯತ್ ಗೆ ಈ ದೂರನ್ನು ಪರಿಶೀಲಿಸಲು ಸೂಚನೆ ನೀಡಿದೆ. ಅದರಂತೆ ಪರಿಶೀಲನೆ ನಡೆಸಿದ ಪಂಚಾಯತ್ ದೂರಿನಲ್ಲಿ ಸತ್ಯಾಂಶ ಇರುವುದನ್ನು ಖಾತ್ರಿಪಡಿಸಿದೆ. ಅದರಂತೆ ತಪ್ಪಿತಸ್ಥರಿಗೆ ಪಂಚಾಯತ್ ರಾಜ್ ಕಾಯಿದೆಯ ಪ್ರಕಾರ ದಂಡವನ್ನು ವಿಧಿಸಲಾಗಿದೆ.

ಇನ್ನು ಈ ಸಂಬಂಧ ಗಾಯಕರಿಂದ ಸೂಕ್ತ ಸ್ಪಂದನೆ ದೊರಕಿದ್ದಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪಂಚಾಯತ್ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ. ಒಟ್ಟಿನಲ್ಲಿ ಇಲ್ಲಿ ಸಾಮಾಜಿಕ ಜಾಲತಾಣಗಳನ್ನು ಎಷ್ಟು ಸಮರ್ಪಕವಾಗಿ ಬಳಸಬಹುದು ಮತ್ತು ಅದರಿಂದ ಸಮಾಜಕ್ಕೆ ಯಾವ ಸಂದೇಶ ಕೊಡಬಹುದು ಎನ್ನುವ ಜೊತೆಗೆ ನಮ್ಮನ್ನು ಆಳುವವರು ಇಂತಹ ಘಟನೆಗಳಾದಾಗ ತಕ್ಷಣ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎನ್ನುವುದು ಕೂಡ ಗೊತ್ತಾಗುತ್ತದೆ.
ಇಲ್ಲಿ ಪ್ರವಾಸಕ್ಕೆ ಬಂದ ವ್ಯಕ್ತಿ ವಿಡಿಯೋ ಮಾಡಿ ಅದನ್ನು ಸಂಬಂಧಪಟ್ಟ ಜನಪ್ರತಿನಿಧಿಗೆ ಕಳುಹಿಸಿ ಅವರು ಅದಕ್ಕೆ ದಾರಿಯ ಮಾಹಿತಿ ನೀಡಿ ಅಲ್ಲಿ ಸರಕಾರದ ಕಂಟ್ರೋಲ್ ರೂಂನವರು ತಕ್ಷಣ ಎಚ್ಚೆತ್ತು, ಪಂಚಾಯತ್ ನವರಿಗೆ ತಿಳಿಸಿದ ಪರಿಣಾಮ ಇದೆಲ್ಲವೂ ಉತ್ತಮ ರೀತಿಯಲ್ಲಿ ಬೇರೆಯವರಿಗೆ ಎಚ್ಚರಿಕೆಯ ಗಂಟೆಯಾಗಿದೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search