• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಕಟ್ಟಿದ ರಾಮಜನ್ಮಭೂಮಿ ಟ್ರಸ್ಟ್!

Tulunadu News Posted On April 7, 2025
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಭವ್ಯ ರಾಮ ಮಂದಿರದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಲ್ಲಿಯ ತನಕ ಐದು ವರ್ಷಗಳಲ್ಲಿ 400 ಕೋಟಿ ರೂಪಾಯಿ ತೆರಿಗೆ ಕಟ್ಟುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಭಾರತ ಮತ್ತು ವಿದೇಶದಲ್ಲಿರುವ ಸನಾತನ ಧರ್ಮದ ಅನುಯಾಯಿಗಳ ಶ್ರದ್ಧಾಕೇಂದ್ರವಾಗಿರುವ ಅಯೋಧ್ಯೆ ಕೋಟ್ಯಾಂತರ ಭಕ್ತರನ್ನು ಆಕರ್ಷಿಸುತ್ತಾ, ಭಕ್ತರ ನಂಬಿಕೆ, ವಿಶ್ವಾಸಗಳ ಮೂಲಕೇಂದ್ರವಾಗಿ ಬೆಳಗುತ್ತಿದೆ. ಇಲ್ಲಿ ಭಕ್ತರಿಂದ ಹರಿದು ಬರುತ್ತಿರುವ ದೇಣಿಗೆ, ಕಾಣಿಕೆ, ಸೇವೆಗಳಿಂದ ಟ್ರಸ್ಟ್ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿದೆ. ಈ ನಡುವೆ 2020 ಫೆಬ್ರವರಿ 5 ರಿಂದ 2025 ಫೆಬ್ರವರಿ 5 ರವರೆಗೆ ಟ್ರಸ್ಟ್ ಕಟ್ಟಿರುವ ತೆರಿಗೆ ಹಣ 400 ಕೋಟಿ ರೂಪಾಯಿ ಎಂದು ಟ್ರಸ್ಟ್ ಸೆಕ್ರೆಟರಿ ಚಂಪತ್ ರಾಯ್ ಹೇಳಿದ್ದಾರೆ.
ಇದರಲ್ಲಿ 270 ಕೋಟಿ ರೂಪಾಯಿಗಳನ್ನು ಜಿಎಸ್ ಟಿ ರೂಪದಲ್ಲಿ ಮತ್ತು ಇತರ 130 ಕೋಟಿ ರೂಪಾಯಿಗಳನ್ನು ವಿವಿಧ ತೆರಿಗೆಯಡಿ ಕಟ್ಟಲಾಗಿದೆ. ಇತರ ತೆರಿಗೆಗಳ ಪಟ್ಟಿಯಲ್ಲಿ 39 ಕೋಟಿ ರಾಯಲ್ಟಿ, 7.4 ಕೋಟಿ ಕಾರ್ಮಿಕ ನಿಧಿ, ನಾಲ್ಕು ಕೋಟಿ ಇನ್ಸೂರೆನ್ಸ್ ಪಾಲಿಸಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಬಳಿಕ ಆ ಊರು ಬಹುದೊಡ್ಡ ಪ್ರವಾಸಿ ತಾಣವಾಗಿಯೂ ಬದಲಾಗಿದೆ. ಇದರಿಂದ ಸ್ಥಳೀಯರಿಗೆ ದೊಡ್ಡ ಮಟ್ಟದಲ್ಲಿ ಉದ್ಯೋಗಾವಕಾಶ ಕೂಡ ಲಭ್ಯವಾಗಿದೆ. ಇತ್ತೀಚೆಗೆ ಪ್ರಯಾಗರಾಜ್ ನಲ್ಲಿ ನಡೆದ ಮಹಾಕುಂಭದ ಅವಧಿಯಲ್ಲಿ ಅಯೋಧ್ಯೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆ 1.26 ಕೋಟಿ.
ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ 16 ಕೋಟಿ ಜನರು ಅಯೋಧ್ಯೆಗೆ ಆಗಮಿಸಿದ್ದಾರೆ. ಅದರಲ್ಲಿ ಐದು ಕೋಟಿ ಜನರು ರಾಮ ಮಂದಿರಕ್ಕೆ ಬಂದು ದೇವರ ದರ್ಶನ ಮಾಡಿದ್ದಾರೆ. ಟ್ರಸ್ಟಿನ ಆರ್ಥಿಕ ವ್ಯವಹಾರಗಳನ್ನು ಸಿಎಜಿ ಅಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ರಾಯ್ ಮಾಹಿತಿ ನೀಡಿದರು. ಇನ್ನು ಟ್ರಸ್ಟ್ 5 ಕೋಟಿ ರೂಪಾಯಿಯನ್ನು ಜಾಗದ ನೋಂದಣಿ, ಮ್ಯಾಪ್ ಕ್ಲಿಯರೆನ್ಸ್, ಕಂದಾಯ ತೆರಿಗೆ ಹಾಗೂ ಇತರ ವಿಷಯಗಳಿಗಾಗಿ ಖರ್ಚು ಮಾಡಲಾಗಿದೆ. ಅದರೊಂದಿಗೆ ಹತ್ತು ಕೋಟಿ ರೂಪಾಯಿಗಳನ್ನು ವಿದ್ಯುತ್ ಬಿಲ್, ದೇವಳದ ಮೂಲಭೂತ ಅಗತ್ಯ ಖರ್ಚುಗಳಿಗಾಗಿ ವ್ಯಯಿಸಲಾಗಿದೆ. ಒಟ್ಟಿನಲ್ಲಿ ರಾಮ ಮಂದಿರದ ನಿರ್ಮಾಣದಿಂದಾಗಿ ಉತ್ತರ ಪ್ರದೇಶ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪ್ರತ್ಯಕ್ಷ, ಪರೋಕ್ಷವಾಗಿ ಆದಾಯವನ್ನು ಗಳಿಸುತ್ತಿವೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search