• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೇ ಜೈಲಿನಿಂದ ಜಾಮರ್ ಕಾಟ.. ಬೂತ್ ಬಂಗ್ಲೆಯಂತಾದ ಹೊಸ ಜೈಲು ಕಟ್ಟಡ..!

Tulunadu News Posted On April 14, 2025
0


0
Shares
  • Share On Facebook
  • Tweet It

ಸರಕಾರ ನಡೆಸುವವರಿಗೆ ಪ್ರಬಲ ಇಚ್ಚಾಶಕ್ತಿ ಇದ್ದಿದ್ದರೆ ಇಷ್ಟೊತ್ತಿಗೆ ಮಂಗಳೂರು ನಗರದ ನಟ್ಟನಡುವಿನಲ್ಲಿರುವ ಜಿಲ್ಲಾ ಕಾರಾಗೃಹ ಮಂಗಳೂರಿನ ಹೊರವಲಯದ ಬಂಟ್ವಾಳ ವ್ಯಾಪ್ತಿಯ ಮುಡಿಪು ಸಮೀಪದ ಚೆಲ್ಲೂರು – ಕುರ್ನಾಡು ಪ್ರದೇಶದಲ್ಲಿ ಕಾರ್ಯಾಚರಿಸಬೇಕಿತ್ತು. ಆದರೆ ಹಾಗೆ ಆಗಿಲ್ಲ. ಬೆಳೆಯುತ್ತಿರುವ ಮಂಗಳೂರು ನಗರದ ನಡುವೆ ಜೈಲು ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಸುತ್ತಮುತ್ತಲೂ ಮೂರು ಕಿ.ಮೀ ವ್ಯಾಪ್ತಿಯ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಜೈಲಿನಲ್ಲಿ ಕೈದಿಗಳು ಮೊಬೈಲ್ ಫೋನ್ ಬಳಸಬಾರದು ಎನ್ನುವ ಕಾರಣ 5ಜಿ ಜಾಮರ್ ಅಳವಡಿಸಲಾಗಿದೆ.

ಇದರಿಂದ ಏನಾಗಿದೆ ಎಂದರೆ ಜೈಲಿನ ಸುತ್ತಮುತ್ತಲಿನ ವಾಣಿಜ್ಯ ಕಟ್ಟಡಗಳಲ್ಲಿ ಉದ್ಯಮ ನಡೆಸುವವರಿಗೆ ಫೋನ್ ಸಂಪರ್ಕ, ಇಂಟರ್ ನೆಟ್ ಸಂಪರ್ಕ ಇಲ್ಲದೇ ವಿಪರೀತ ತೊಂದರೆಯಾಗುತ್ತಿದೆ. ಇದರಿಂದ ಅವರ ವ್ಯಾಪಾರ, ವ್ಯವಹಾರಕ್ಕೂ ನಿರಂತರವಾಗಿ ನಷ್ಟ ಉಂಟಾಗುತ್ತಿದೆ. ಇನ್ನು ಜೈಲ್ ಆಸುಪಾಸಿನಲ್ಲಿ ಬ್ಯಾಂಕುಗಳು, ಶಿಕ್ಷಣ ಸಂಸ್ಥೆಗಳು, ವಸತಿ ಸಮುಚ್ಚಯಗಳು ಕೂಡ ಇದ್ದು, ಜನರು ಈ ಜಾಮರ್ ನಿಂದ ಸಾಕಷ್ಟು ಹೈರಾಣಾಗಿದ್ದಾರೆ. ಈ ಬಗ್ಗೆ ಶಾಸಕರಾದ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದು, ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಂತೆ ಕಾಣಿಸುವುದಿಲ್ಲ. ಹಾಗಾದರೆ ಹಳೆ ಜೈಲು ಶಿಫ್ಟ್ ಆಗುವುದು ಯಾವಾಗ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

2009 ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಜೈಲು ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆದರೆ ಅದರ ವಿಸ್ತ್ರತ ವರದಿ (ಡಿಪಿಆರ್) ತಯಾರಾದದ್ದು 2016 – 17 ರಲ್ಲಿ. ಅದರ ನಂತರ ಕಾಮಗಾರಿಯ ಟೆಂಡರ್ ಕರೆದದ್ದು 2018 – 19 ರಲ್ಲಿ. ಇದೆಲ್ಲಾ ಮುಗಿದು ಕಾಮಗಾರಿ 2020 ರಲ್ಲಿ ಆರಂಭವಾಯಿತು. ಈಗ ಐದು ವರ್ಷಗಳಲ್ಲಿ ಇಲ್ಲಿ ಬೃಹತ್ ಕಟ್ಟಡ ಎದ್ದು ನಿಂತಿದ್ದು, ಕಾಮಗಾರಿ ಸಂಪೂರ್ಣಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಕೆಲಸಕಾರ್ಯಗಳು ನಿಂತಿವೆ. ಆರಂಭದಲ್ಲಿ ಇನ್ನೂರು ಕೋಟಿಯ ಬಜೆಟ್ ಈಗ 390 ಕೋಟಿ ರೂಪಾಯಿಗಳಿಗೆ ತಲುಪಿದ್ದು, ರಾಜ್ಯ ಸರಕಾರ ಹಣ ಬಿಡುಗಡೆಗೆ ಮೀನಾಮೇಷ ಎಣಿಸುತ್ತಿದೆ.

ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗುವ ಹಂತದಲ್ಲಿದೆ. ಈಗಾಗಲೇ ಹಣ ಬಿಡುಗಡೆಯಾಗಿದ್ದರೆ ಕಾಮಗಾರಿ ಮುಗಿದು ಜೈಲು ಲೋಕಾರ್ಪಣೆಯಾಗಬೇಕಿತ್ತು. ಯಾಕೆಂದರೆ ಈ ಜೈಲು ನಿರ್ಮಾಣವಾಗುತ್ತಿರುವುದು ರಾಜ್ಯದ ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಮಂತ್ರಿ, ಶಾಸಕ, ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರ ಸ್ವಕ್ಷೇತ್ರದಲ್ಲಿ. 63 ಎಕರೆಯಷ್ಟು ಪ್ರದೇಶದಲ್ಲಿ ಬೃಹದಾಕಾರವಾಗಿ ಎದ್ದು ನಿಂತಿರುವ ಕಟ್ಟಡದಲ್ಲಿ ಒಂದು ಸಾವಿರ ಕೈದಿಗಳನ್ನು ಬಂಧಿಸಿಡುವಷ್ಟು ವಿಶಾಲವಾದ ಸ್ಥಳಾವಕಾಶ ಇದೆ. ಇಲ್ಲಿ ಕೈದಿಗಳಿಗೆ ಪ್ರಾಥಮಿಕ ಚಿಕಿತ್ಸೆ ಜೊತೆ ಒಳರೋಗಿಗಳಿಗೆ ಆಸ್ಪತ್ರೆ, ವಿಡಿಯೋ ಕಾನ್ಫರೆನ್ಸ್, ಆಡಳಿತ ಕಚೇರಿ, ಕಾರ್ಯಗಾರ ಸಭಾಂಗಣ, ಸಿಬ್ಬಂದಿಗಳಿಗೆ ಕೊಠಡಿ ಮತ್ತು ಅಧಿಕಾರಿಗಳ ವಸತಿ ಗೃಹವೂ ಇರಲಿದೆ. ಈಗ ಈ ಕಟ್ಟಡ ಅತ್ತ ಸಂಪೂರ್ಣವೂ ಆಗದೇ, ಇತ್ತ ಅರ್ಧಂಬರ್ಧ ಸ್ಥಿತಿಯಲ್ಲಿ ಭೂತ ಬಂಗ್ಲೆಯಂತಾಗಿದೆ. ಹತ್ತಿರದಿಂದ ನೋಡಿದರೆ ನಿಶ್ಯಕ್ತಿಗೆ ಒಳಗಾದಂತೆ ಕಾಣುತ್ತಿದೆ. ಇದರಿಂದ ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆಯನ್ನು ಕೂಡ ತಳ್ಳಿ ಹಾಕುವಂತಿಲ್ಲ.

ಹೊಸ ಜೈಲು ಘೋಷಣೆಯಾಗಿ ಹದಿನೈದು ವರ್ಷ ಮುಕ್ತಾಯವಾಗುತ್ತಿದ್ದು, ಕಾಮಗಾರಿ ಆರಂಭವಾಗಿ ಐದು ವರ್ಷಗಳು ಸಮೀಪಿಸುತ್ತಿದ್ದು, ಮಂಗಳೂರು ಜೈಲು ಯಾವಾಗ ಪೂರ್ಣವಾಗಿ ಹಳೆ ಜೈಲಿನ ಪರಿಸರದ ನಾಗರಿಕರ ಸಂಕಷ್ಟ ಯಾವಾಗ ಮುಕ್ತಾಯವಾಗುತ್ತದೆ ಎನ್ನುವುದಕ್ಕೆ ಯಾರ ಬಳಿಯೂ ಉತ್ತರ ಇಲ್ಲ. ಯಾಕೆಂದರೆ ಕಟ್ಟಡ ಮುಗಿಸಲು ಕೋಟ್ಯಾಂತರ ರೂಪಾಯಿ ಹಣ ಬೇಕು. ಅದು ಬಿಡುಗಡೆಯಾಗಲು ದೊಡ್ಡ ಮಟ್ಟದ ಪ್ರಯತ್ನ ಆಡಳಿತ ಪಕ್ಷದ ಜನಪ್ರತಿನಿಧಿಗಳು ಮಾಡಬೇಕು. ಯುಟಿ ಖಾದರ್ ಅವರಿಗೆ ಈ ವಿಷಯದಲ್ಲಿ ಎಷ್ಟು ಆಸಕ್ತಿ ಎನ್ನುವುದರ ಮೇಲೆ ಕಾಮಗಾರಿಯ ಭವಿಷ್ಯ ನಿಂತಿದೆ. ಇಲ್ಲದಿದ್ದರೆ ಇದು ಇನ್ನೊಂದು ಒಂಭತ್ತು ಕೆರೆ ಆಗುತ್ತಾ? ಕಾಲವೇ ಉತ್ತರ ನೀಡಬೇಕು.

 

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search