• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಕ್ಫ್ ಪ್ರತಿಭಟನೆ ನೆಪದಲ್ಲಿ ಕೇಸರಿ ಬಂಟಿಂಗ್ ತೆರವು ಖಂಡನೀಯ:- ಶಾಸಕ ಕಾಮತ್

Tulunadu News Posted On April 17, 2025
0


0
Shares
  • Share On Facebook
  • Tweet It

ಎ.18ರಂದು ಮಂಗಳೂರಿನ ಅಡ್ಯಾರಿನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯಲಿರುವ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ, ನೇಮೋತ್ಸವಗಳಿಗೆ, ಶುಭ ಕೋರಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಯತ್ನಿಸುತ್ತಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಈ ಪ್ರತಿಭಟನೆ ಧಿಡೀರನೆ ನಿರ್ಧಾರವಾಗಿದ್ದು, ಹಿಂದೂ ಧಾರ್ಮಿಕ ಕಾರ್ಯಕ್ರಮಗಳು, ನೇಮೋತ್ಸವಗಳು, ಪೂರ್ವ ನಿಗದಿಯಾಗಿವೆ. ಅದಕ್ಕೆ ತಕ್ಕಂತೆ ಬ್ಯಾನರ್, ಬಂಟಿಂಗ್ಸ್, ಕೇಸರಿ ಧ್ವಜಗಳನ್ನು ಹಾಕಲಾಗಿದ್ದು, ಪ್ರತಿಭಟನೆ ನೆಪದಲ್ಲಿ ಅವುಗಳನ್ನು ತೆರವುಗೊಳಿಸಬೇಕೆಂದರೆ ಏನರ್ಥ? ಅವರ ಪ್ರತಿಭಟನೆ ಇರುವುದು ವಕ್ಫ್ ಕಾಯ್ದೆ ವಿರುದ್ಧ. ಅದನ್ನು ಸಂವಿಧಾನ ಬದ್ಧವಾಗಿ ಮಾಡಿಕೊಳ್ಳಲಿ. ಯಾರದ್ದೂ ಅಭ್ಯಂತರವಿಲ್ಲ. ಅದು ಬಿಟ್ಟು ಕಾಂಗ್ರೆಸ್ ಸರ್ಕಾರ ಕೇಸರಿ ಬಂಟಿಂಗ್ಸ್ ಬ್ಯಾನರ್ ತೆರವುಗೊಳಿಸುವ ಮೂಲಕ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ರೈಸ್ತ ಸಮಾಜದ ಗುಡ್ ಫ್ರೈಡೇ ದಿನದಂದೇ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿ, ರಸ್ತೆ ಬದಲಾವಣೆ ಮಾಡಿದ್ದು ಅವರ ಹಬ್ಬದ ಸಂಭ್ರಮಕ್ಕೂ ಅಡ್ಡಿಯಾಗಿದ್ದು ಯಾವೊಬ್ಬ ಕಾಂಗ್ರೆಸ್ ನಾಯಕರೂ ಮಾತನಾಡುತ್ತಿಲ್ಲ. ಅಲ್ಲದೇ ಇದು ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಬಲಿತ ಪ್ರತಿಭಟನೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗಾಗಿಯೇ ಪ್ರತಿಭಟನೆಯ ಆಯೋಜಕರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳುವುದು ಬಿಟ್ಟು, ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಓಲೈಕೆ ರಾಜಕಾರಣ ಮಾಡಲಾಗುತ್ತಿದೆ. ನಮ್ಮ ಪ್ರತಿಭಟನೆ, ಕಾರ್ಯಕ್ರಮಗಳ ಸಂದರ್ಭದಲ್ಲಿ ರಸ್ತೆ ಬಂದ್ ಮಾಡಿದರೆ ಕೇಸ್ ಮಾಡುತ್ತೇವೆ ಎನ್ನುವ ಪೊಲೀಸ್ ಇಲಾಖೆ ಈಗ ಹೇಗೆ ಮುಖ್ಯ ಹೆದ್ದಾರಿಯನ್ನೇ ಬಂದ್ ಮಾಡಲು ಅನುಮತಿ ನೀಡಿದ್ದಾರೆ? ಹಿಟ್ಲರ್, ಟಿಪ್ಪು, ಮೊಘಲ್ ಎಲ್ಲವನ್ನೂ ಒಳಗೊಂಡ ಈ ಕಾಂಗ್ರೆಸ್ ಸರ್ಕಾರ ಹಿಂದೂ ಆಚರಣೆಗಳಿಗೆ ಅಡ್ಡಿಯುಂಟು ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲವೆಂದು ಶಾಸಕರು ಎಚ್ಚರಿಕೆ ನೀಡಿದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search