• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.

ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search