• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಸಿಂಧೂ ನದಿ ಒಪ್ಪಂದ ರದ್ದು ಮಾಡಿದ್ದಕ್ಕೆ ಪಾಕಿಸ್ತಾನದಿಂದ ಶಿಮ್ಲಾ ಒಪ್ಪಂದ ರದ್ದು! ಏನದು ವಿಷಯ?

Tulunadu News Posted On April 24, 2025
0


0
Shares
  • Share On Facebook
  • Tweet It

1960 ರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧೂ ನದಿ ಜಲ ಒಪ್ಪಂದವನ್ನು ಭಾರತ ರದ್ದು ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಪಾಕಿಸ್ತಾನದ 80 ಶೇಕಡಾ ಜನ ನೀರಿಗಾಗಿ ಪರದಾಡುವಂತಹ ಸ್ಥಿತಿಗೆ ತರುವ ಮುನ್ಸೂಚನೆ ನೀಡಿದರೆ ಇನ್ನೊಂದೆಡೆ ಪಾಕಿಸ್ತಾನ ಶಿಮ್ಲಾ ಒಪ್ಪಂದವನ್ನು ರದ್ದು ಮಾಡುವ ಸೂಚನೆ ನೀಡಿದೆ.

ಅಷ್ಟಕ್ಕೂ ಶಿಮ್ಲಾ ಒಪ್ಪಂದ ಎಂದರೇನು?

1971 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದ ನಂತರ 1972 ರಲ್ಲಿ ಶಿಮ್ಲಾ ಒಪ್ಪಂದ ನಡೆಸಲಾಯಿತು. ಪೂರ್ವ ಪಾಕಿಸ್ತಾನದ ವಿಷಯದಲ್ಲಿ ಭಾರತ ಹಸ್ತಕ್ಷೇಪ ನಡೆಸಿದ ಪರಿಣಾಮ ಭಾರತ ಮತ್ತು ಪಾಕ್ ಯುದ್ಧ ನಡೆದು ಬಾಂಗ್ಲಾದೇಶದ ಉಗಮ ಆದದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಭಾರತ ಮತ್ತು ಪಾಕಿಸ್ತಾನದ ನಡುವೆ ಅದರ ಬಳಿಕ ಒಂದು ಒಪ್ಪಂದ ಏರ್ಪಟ್ಟಿತ್ತು. ಅದೇ ಶಿಮ್ಲಾ ಒಪ್ಪಂದ. ಭವಿಷ್ಯದಲ್ಲಿ ಏನಾದರೂ ಸಮಸ್ಯೆಗಳು ಉದ್ಭವಿಸಿದರೆ ಎರಡು ರಾಷ್ಟ್ರಗಳು ಶಾಂತಿಯುತ ಮಾತುಕತೆ ನಡೆಸಬೇಕು ಎನ್ನುವುದೇ ಈ ಒಪ್ಪಂದದ ಸಾರಂಶವಾಗಿತ್ತು. ಅದರ ಪ್ರಥಮ ಅಂಶವೇ ಕಾಶ್ಮೀರದ ವಿಷಯದಲ್ಲಿ ಏನಾದರೂ ಸಮಸ್ಯೆ ಆದರೆ ಆ ಸಂದರ್ಭದಲ್ಲಿ ಯಾವುದೇ ಘರ್ಷಣೆ ಇಲ್ಲದೇ ಪರಿಸ್ಥಿತಿಯನ್ನು ನಿಯಂತ್ರಿಸುವುದು.

ಎರಡನೇಯ ಅಂಶ ಗಡಿ ನಿಯಂತ್ರಣ ರೇಖೆಗೆ ( ಎಲ್ ಒಸಿ) ಎರಡು ದೇಶಗಳು ಬದ್ಧರಾಗಿರುವುದು. ಯಾವುದೇ ಕಾರಣಕ್ಕೂ ಇದನ್ನು ಉಲ್ಲಂಘಿಸದೇ ಇರುವುದು. ಮೂರನೇಯದಾಗಿ ಭಾರತ ವಶಪಡಿಸಿಕೊಂಡ 13000 ಚದರ ಕಿಲೋ ಮೀಟರ್ ಜಾಗವನ್ನು ಹಿಂತಿರುಗಿಸುವುದು. ಆದರೆ ಕೆಲವು ಸೂಕ್ಷ್ಮ ಪ್ರದೇಶಗಳನ್ನು ತನ್ನಲ್ಲಿಯೇ ಇಟ್ಟುಕೊಳ್ಳುವುದು.

ನಾಲ್ಕನೇಯದಾಗಿ ಪಾಕಿಸ್ತಾನ ಬಾಂಗ್ಲಾದೇಶಕ್ಕೆ ರಾಜತಾಂತ್ರಿಕ ಗೌರವವನ್ನು ನೀಡುವುದು. ಈ ಎಲ್ಲಾ ನಿಯಮಗಳ ನಂತರವೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿರುವುದು ಕಂಡು ಬಂದಿದೆ. ಅದಕ್ಕೆ 1980 ರ ಸಿಯಾಚಿನ್ ಗ್ಲೇಸಿಯರ್ ಸಂಘರ್ಷ, 1999 ರ ಕಾರ್ಗಿಲ್ ಯುದ್ಧ ಮತ್ತು ಈಗ ನಡೆದ ಕಾಶ್ಮೀರದ ಹಿಂದೂ ನರಮೇಧವೇ ಉದಾಹರಣೆ.

1984 ರಲ್ಲಿ ಆಪರೇಶನ್ ಮೇಘದೂತದಿಂದ ಭಾರತ ಸಿಯಾಚಿನ್ ಗ್ಲೇಸಿಯರ್ ವಶಪಡಿಸಿಕೊಂಡಿದ್ದ ಕಾರಣ ಆಗ ಶಿಮ್ಲಾ ಒಪ್ಪಂದ ಉಲ್ಲಂಘನೆ ಎಂದು ಪಾಕಿಸ್ತಾನ ಅವಲತ್ತುಕೊಂಡಿತ್ತು. ಈಗ ಪಾಕಿಸ್ತಾನ ಶಿಮ್ಲಾ ಒಪ್ಪಂದ ರದ್ದು ಮಾಡಿರುವುದರಿಂದ ಭಾರತದ ಮೇಲೆ ಏನೂ ಪರಿಣಾಮ ಬೀರುವುದಿಲ್ಲ. ಆದರೆ ಸಿಂಧೂ ನದಿ ಒಪ್ಪಂದ ಮುರಿದು ಬಿದ್ದ ಕಾರಣ ಮುಂದಿನ ದಿನಗಳಲ್ಲಿ ಒಂದೊಂದು ಹನಿಗಳು ಪಾಕಿಸ್ತಾನ ಬೊಬ್ಬೆ ಹೊಡೆಯಲು ಇದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search