• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು, ಭಟ್ಕಳದಲ್ಲಿದ್ದಾರೆ ಪಾಕಿಗಳು.. ಆದರೆ ಅವರನ್ನು ಕಳುಹಿಸಲು ಸಾಧ್ಯವಿಲ್ಲ!

Tulunadu News Posted On April 26, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ಕೃತ್ಯಕ್ಕೆ ಪ್ರತಿಕಾರವಾಗಿ ಭಾರತ ಸರಕಾರವು ಪಾಕ್ ಪ್ರಜೆಗಳ ವೀಸಾ ರದ್ದುಗೊಳಿಸುವ ನಿರ್ಧಾರ ಕೈಗೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನದ ಪ್ರಜೆಗಳನ್ನು ಪೊಲೀಸ್ ಇಲಾಖೆ ಗುರುತಿಸಿದೆ.

ಈ ಮೂವರು ಮಹಿಳೆಯರಾಗಿದ್ದು, ಮಂಗಳೂರು ನಗರದ ವಿವಿಧೆಡೆ ವಾಸವಾಗಿದ್ದಾರೆ. 13 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದ ಯುವಕರನ್ನು ವಿವಾಹವಾಗಿ ಇಲ್ಲೇ ಪತಿಯ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಇವರೆಲ್ಲರೂ ದೀರ್ಘಾವಧಿಯ ವೀಸಾ ಯೋಜನೆಯಡಿ ವಾಸವಾಗಿದ್ದಾರೆ. ಕೇಂದ್ರ ಸರಕಾರದ ಸುತ್ತೋಲೆಯ ಪ್ರಕಾರ ದೀರ್ಘಾವಧಿಯ ವೀಸಾ ಹೊಂದಿರುವವರು ತಮ್ಮ ದೇಶಕ್ಕೆ ಹಿಂತಿರುಗುವುದರಿಂದ ವಿನಾಯ್ತಿ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ವಿದೇಶಾಂಗ ಇಲಾಖೆಯ ಸುತ್ತೋಲೆಯಂತೆ ಯಾವ ಪಾಕಿಸ್ತಾನಿಯ ಬಳಿ ಭಾರತದ ದೀರ್ಘಾವಧಿಯ ವೀಸಾ ಇರುತ್ತದೆಯೋ ಅದು ಸಿಂಧುವಾಗಿರುತ್ತದೆ. ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿಯವರು ಸುದ್ದಿಗೋಷ್ಟಿ ನಡೆಸಿ ಪಾಕಿಸ್ತಾನಿಗಳು ಭಾರತದಲ್ಲಿದ್ದರೆ ಅವರ ವೀಸಾ ರದ್ದುಗೊಳ್ಳುವುದರಿಂದ ತಕ್ಷಣ ಪಾಕಿಸ್ತಾನಕ್ಕೆ ಹಿಂತಿರುಗಬೇಕು ಎಂದು ಸೂಚಿಸಿದ್ದರು. ಅದರ ಬೆನ್ನಲ್ಲೇ ದೀರ್ಘಾವಧಿಯ ವೀಸಾ ಹೊಂದಿರುವವರಿಗೂ ಗೊಂದಲ ಎರ್ಪಟ್ಟಿತ್ತು. ಆದರೆ ಈಗ ಸ್ಪಷ್ಟನೆ ಸಿಕ್ಕಿದ್ದು, ಪ್ರವಾಸಿ ವೀಸಾದಲ್ಲಿರುವವರು ಮಾತ್ರ 48 ಗಂಟೆಯೊಳಗೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಒಳಪಟ್ಟಿರುವವರು 29 ಎಪ್ರಿಲ್ ಒಳಗೆ ಹಿಂತಿರುಗಬೇಕು ಎಂದು ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಪಾಕಿಸ್ತಾನದ ಪ್ರಜೆಗಳು ನೆಲೆಸಿದ್ದಾರೆ. ಭಟ್ಕಳದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನವಾಯತ್ ಮುಸ್ಲಿಮರು ಇರುವುದರಿಂದ ಅವರಲ್ಲಿ ಅನೇಕರು ಪಾಕಿಸ್ತಾನದ ಯುವತಿಯರು ಮದುವೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 15 ಪಾಕಿಸ್ತಾನಿ ಪ್ರಜೆಗಳು ಇದ್ದರೆ ಅದರಲ್ಲಿ 14 ಜನ ಭಟ್ಕಳದಲ್ಲಿ ಮತ್ತು ಒಬ್ಬರು ಕಾರವಾರದಲ್ಲಿದ್ದಾರೆ. ಭಟ್ಕಳದಲ್ಲಿರುವ ಪಾಕಿಸ್ತಾನಿಗಳ ಪೈಕಿ 14 ಮಹಿಳೆಯರಾಗಿದ್ದಾರೆ. ಈ ಎಲ್ಲಾ ಹೆಂಗಸರು ಭಟ್ಕಳದಲ್ಲಿರುವ ಮುಸ್ಲಿಂ ಸಂಬಂಧಿಗಳನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದಾರೆ. ಈ ವೀಸಾಗಳು ಪ್ರತಿ ಎರಡು ವರ್ಷಗಳಿಗೊಮ್ಮೆ ರಿನಿವಲ್ ಆಗುತ್ತಾ ಇರುತ್ತವೆ. ಇವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದರೆ ಅಂತವರಿಗೆ ದೀರ್ಘಾವಧಿಯ ವೀಸಾ ನೀಡುವ ಪದ್ಧತಿ ಜಾರಿಯಲ್ಲಿದೆ. ಕರ್ನಾಟಕದಲ್ಲಿ ಅಂದಾಜು 88 ಪಾಕಿಸ್ತಾನಿಗಳು ಇದ್ದರೆ 84 ಜನ ದೀರ್ಘಾವಧಿ ವೀಸಾ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search