• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಧ್ವಜಕ್ಕೆ ಅವಮಾನ, ಭಜರಂಗದಳದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Tulunadu News Posted On April 26, 2025
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರದ ಪ್ರಮುಖ ಪ್ರವಾಸಿ ಕೇಂದ್ರ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಎಪ್ರಿಲ್ 25 ರಂದು ವಿನೂತನವಾಗಿ ಪ್ರತಿಭಟಿಸಿದರು. ಪಾಕಿಸ್ತಾನದ ರಾಷ್ಟ್ರಧ್ವಜವನ್ನು ರಸ್ತೆ ಮತ್ತು ಇಕ್ಕೆಲಗಳಲ್ಲಿ ಬರೆದು ಸಾರ್ವಜನಿಕರು ಅದರ ಮೇಲೆ ಓಡಾಡಿ ತುಳಿದು ಅವಮಾನ ಮಾಡುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿದ್ದರು.

ಈ ಹಿನ್ನಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಉಗ್ರರು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನದ ಧ್ವಜವನ್ನು ಕಾಲಡಿಯಲ್ಲಿ ತುಳಿದು ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದೇವೆ ಎಂದು ಬಜರಂಗದಳದ ಕಾರ್ಯಕರ್ತರು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯ ಮೇಲೆ ಅಂಟಿಸಿರುವುದು ಯಾರು ಎನ್ನುವ ಪ್ರಶ್ನೆ ಉಂಟಾಗಿತ್ತು. ಯಾಕೆಂದರೆ ಇಂತಹ ಘಟನೆಗಳಿಂದ ಪರಿಸರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗುವ ಸಾಧ್ಯತೆ ಇತ್ತು. ಆದ್ದರಿಂದ ಪೊಲೀಸರು ಎಚ್ಚರಿಕೆಯ ಹೆಜ್ಜೆಗಳನ್ನು ಇಟ್ಟಿದ್ದರು. ನಂತರ ಈ ಘಟನೆಯನ್ನು ತಾವು ಮಾಡಿದ್ದಾಗಿ ಬಜರಂಗದಳದ ಕಾರ್ಯಕರ್ತರು ಸಮರ್ಥಿಸಿಕೊಂಡರು. ಕಲಬುರಗಿಯ ಜಗತ್ ವೃತ್ತ, ಸೂಪರ್ ಮಾರ್ಕೆಟ್ ಹಾಗೂ ಇನ್ನು ಕೆಲವು ಕಡೆಗಳಲ್ಲಿ ಪಾಕಿಸ್ತಾನ ಧ್ವಜವನ್ನು ನೆಲದ ಮೇಲೆ ಅಂಟಿಸಲಾಗಿತ್ತು.ಈ ಬಗ್ಗೆ ಪೊಲೀಸ್ ಕಮೀಷನರ್ ಎಸ್ ಡಿ ಶರಣಪ್ಪ ಅವರು ಮಾತನಾಡಿ ” ಸ್ಟಿಕ್ಕರ್ ಗಳನ್ನು ಅಂಟಿಸುವ ಪ್ರತಿಭಟನೆಗೆ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search