• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!

Tulunadu News Posted On May 5, 2025
0


0
Shares
  • Share On Facebook
  • Tweet It

ಕೇಂದ್ರ ಗೃಹ ಇಲಾಖೆ ಮೇ 7 ರಂದು ಅಣಕು ದಾಳಿ ರಕ್ಷಣಾ ಸಿದ್ಧತೆಯನ್ನು ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಹತ್ಯಾಕಾಂಡದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸಂಘರ್ಷ ಏರ್ಪಡುವ ಸಾಧ್ಯತೆ ಇದ್ದು, ಅದಕ್ಕಾಗಿ ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆ ನಡೆಸಲು ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ಬಂದಿದೆ.

ಒಂದು ವೇಳೆ ದೇಶದ ಹೊರಗಿನಿಂದ ವಾಯುದಾಳಿ ನಡೆದಲ್ಲಿ ಅದನ್ನು ಎದುರಿಸಲು ನಾಗರಿಕರು ಯಾವ ರೀತಿ ಮಾನಸಿಕವಾಗಿ, ದೈಹಿಕವಾಗಿ ಸಿದ್ಧರಿರಬೇಕು ಎನ್ನುವ ಕಾರಣಕ್ಕೆ ಈ ಅಣಕು ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಇಂತಹ ಒಂದು ಅಣಕು ಕಾರ್ಯಾಚರಣೆ 1971 ರಲ್ಲಿಯೂ ನಡೆದಿತ್ತು. ಅದರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿತ್ತು.

ಹಾಗಾದರೆ ಕೇಂದ್ರ ಗೃಹ ಇಲಾಖೆ ಯಾವ ರೀತಿಯ ತಯಾರಿ ಮಾಡಬೇಕೆಂದು ರಾಜ್ಯಗಳಲ್ಲಿ ಸೂಚಿಸಿದೆ ಎನ್ನುವುದನ್ನು ಈ ಕೆಳಗೆ ವಿವರಿಸಲಾಗಿದೆ.

1. ವಾಯು ದಾಳಿಯ ಮುನ್ಸೂಚನೆ ಬಂದಲ್ಲಿ ಏನು ಮಾಡಬೇಕು.

2. ದೇಶದ ಹೊರಭಾಗದಿಂದ ಪ್ರತಿಕೂಲ ದಾಳಿ ನಡೆದ್ದಲ್ಲಿ ನಾಗರಿಕರು, ವಿದ್ಯಾರ್ಥಿಗಳು ನಾಗರಿಕ ಯೋಧರಾಗಿ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬಹುದು.

3. ದಾಳಿ ಸಂಭವಿಸಿದಲ್ಲಿ ಬೆಳಕನ್ನು ಹೇಗೆ ನಂದಿಸಿ ಕ್ರಮ ಕೈಗೊಳ್ಳುವುದು.

4. ದೇಶದ ಪ್ರಮುಖ ಸ್ಥಾವರಗಳನ್ನು ದಾಳಿಯಿಂದ ರಕ್ಷಿಸಿಕೊಳ್ಳುವುದು ಅಥವಾ ರಕ್ಷಣೆಗಾಗಿ ಸ್ಥಾಪಿಸುವುದು.

5. ಪರಿಸ್ಥಿತಿಯನ್ನು ಅರಿತು ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹೇಗೆ ನಡೆಸುವುದು.

ಪಾಕಿಸ್ತಾನ ಸತತ 11 ರಾತ್ರಿ ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಗಳನ್ನು ನಡೆಸುತ್ತಾ ಬಂದಿದೆ. ಇದಕ್ಕೆ ಭಾರತ ತೀಕ್ಣವಾಗಿ ಉತ್ತರ ನೀಡಿದ್ದು, ಈಗ ಅಣಕು ದಾಳಿ ರಕ್ಷಣಾ ಕಾರ್ಯಾಚರಣೆ ಈ ಹಂತದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ.

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 5
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search