• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ

Tulunadu News Posted On May 19, 2025
0


0
Shares
  • Share On Facebook
  • Tweet It

ನಂದಿನಿ ನದಿ ನೀರನ್ನು ಮಾಲಿನ್ಯ ಮಾಡುವವರಿಗೆ ಸೂಕ್ತ ಶಿಕ್ಷೆ ವಿಧಿಸುವುದಾಗಿ ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವ ಭರವಸೆ ನೀಡಿದೆ. ನದಿಯ ಮಾಲಿನ್ಯದಿಂದಾಗಿ ಸಾಂಪ್ರದಾಯಿಕ ಮೀನು ಹಿಡಿಯುವ ಜಾತ್ರೆಗೆ ಅಡ್ಡಿಯಾಗಿದೆ ಎಂದು ಭಕ್ತರು ದೈವದಲ್ಲಿ ನಿವೇದಿಸಿದ್ದರು. ಈ ಅಭಯ ದೊರಕಿದ್ದು ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ಪರಿವಾರ ದೈವಗಳ ನೇಮೋತ್ಸವ ಸಂದರ್ಭದಲ್ಲಿ.

ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ಜರಗುತ್ತದೆ. ಸದ್ಯ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ಸಿಕ್ಕಾಪಟ್ಟೆ ತುಂಬಿರುವುದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು, ಇದೇ ರೀತಿ ಮುಂದುವರೆದಲ್ಲಿ ಭವಿಷ್ಯದಲ್ಲಿ ಈ ಸಂಪ್ರದಾಯವೇ ನಾಶವಾಗುವ ಆತಂಕವಿದೆ.

ಈ ಹಿನ್ನಲೆಯಲ್ಲಿ ಈ ಬಾರಿ ದೈವಗಳ ನೇಮೋತ್ಸವ ಸಂದರ್ಭ ನಂದಿನಿ ನದಿ ಮಾಲಿನ್ಯದಿಂದ ಜಾತ್ರೆ ಪ್ರಯುಕ್ತ ಖಂಡಿಗೆ ಮೀನು ಹಿಡಿಯುವ ಕಾರ್ಯಕ್ರಮ ನಿಂತು ಹೋಗುವ ಪರಿಸ್ಥಿತಿ ಬಂದಿರುವ ಬಗ್ಗೆ ಆಡಳಿತ ಸಮಿತಿ, ನಂದಿನಿ ನದಿ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ದೈವದಲ್ಲೇ ನಿವೇದಿಸಿದ್ದರು.

ಈ ಬಗ್ಗೆ ಅಭಯ ನೀಡಿದ ಉಳ್ಳಾಯ ದೈವ, ತನ್ನ ಸವಾರಿಯ ನಂದಿನಿ ನದಿ ಉಳಿಸಿಯೇ ಸಿದ್ಧ, ನದಿಯನ್ನು ಮಾಲಿನ್ಯ ಮಾಡಿದವರಿಗೆ ತಕ್ಕ ಶಾಸ್ತ್ರಿ ಮಾಡುತ್ತೇನೆ ಎಂದು ಅಭಯ ನೀಡಿದೆ.
ಕಳೆದ ವರ್ಷ ಕೂಡ ಈ ಬಗ್ಗೆ ಪ್ರಮುಖರು ದೈವಕ್ಕೆ ಮೊರೆ ಹೋಗಿದ್ದು, ನಂದಿನಿ ನದಿ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಲೋಕಾಯುಕ್ತರು ಭೇಟಿ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶ ನೀಡಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search