• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!

Tulunadu News Posted On May 19, 2025
0


0
Shares
  • Share On Facebook
  • Tweet It

ಆರ್ ಎಸ್ ಎಸ್ ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್… ಅಬು ಸೈಫುಲ್ಲಾ ಹತ್ಯೆಗೆ ಬೆಚ್ಚಿಬಿದ್ದ ಪಾಕಿಸ್ತಾನ!

ಈ ಉಗ್ರರ ಮುಖಂಡನನ್ನು ಯಾರಾದರೂ ಕೊಲ್ಲುತ್ತಾರೆ ಎಂದು ಪಾಕಿಸ್ತಾನದಲ್ಲಿ ಆತನ ಸುತ್ತಲೂ ಕೋಟೆ ಕಟ್ಟಿಕೊಂಡವರಿಗೆ ಒಂದು ಸಣ್ಣ ಅನುಮಾನವೂ ಇರಲಿಲ್ಲ. ಯಾಕೆಂದರೆ ಆತ ಲಷ್ಕರೆ ತೈಬಾದ ಮಾಸ್ಟರ್ ಮೈಂಡ್ ಆಗಿದ್ದ. ಅವನನ್ನು ಅಬು ಸೈಫುಲ್ಲಾ ಎನ್ನುವ ಹೆಸರಿನಿಂದ ಕರೆಯುತ್ತಾರೆ. ಬೇರೆ ಬೇರೆ ದೇಶಗಳಲ್ಲಿ ಇರುವಾಗ ಅವನು ತನ್ನ ಹೆಸರನ್ನು ಬದಲಿಸುತ್ತಾ ಇರುತ್ತಿದ್ದ. ನೇಪಾಳದಲ್ಲಿ ಇದ್ದಾಗ ವಿನೋದ್ ಕುಮಾರ್ ಎನ್ನುವ ಹೆಸರಿನ ಪಾಸ್ ಪೋರ್ಟ್ ಹೊಂದಿದ್ದ. ಅಲ್ಲಿಯೇ ನಾಗ್ಮಾ ಬಾನು ಎನ್ನುವ ಸ್ಥಳೀಯ ಮಹಿಳೆಯನ್ನು ಮದುವೆಯಾಗಿದ್ದ. ನೇಪಾಳದಲ್ಲಿ ಕುಳಿತುಕೊಂಡೇ ಭಾರತದಲ್ಲಿ ದಾಳಿ ನಡೆಸಲು ಸಂಚು ಹೂಡಿದ್ದ.

ರಝಾವುಲ್ಲಾ ನಿಝಾಮಾನಿ ಯಾನೆ ಅಬು ಸೈಫುಲ್ಲಾ 2006 ರಲ್ಲಿ ನಾಗ್ಪುರದ ಆರ್ ಎಸ್ ಎಸ್ ಕಚೇರಿ ಮೇಲೆ ನಡೆದ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಅದರ ಹಿಂದಿನ ವರ್ಷ ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ಮೇಲೆ ನಡೆಸಿದ ಉಗ್ರ ದಾಳಿ ಹಾಗೂ 2001 ರಲ್ಲಿ ರಾಂಪುರದ ಸಿಆರ್ ಪಿಎಫ್ ಮೇಲೆ ನಡೆಸಿದ ಉಗ್ರ ದಾಳಿಯಲ್ಲಿಯೂ ಇವನದ್ದೇ ಪ್ರಮುಖ ಪಾತ್ರವಿತ್ತು. ಆದ್ದರಿಂದ ಈತ ಭಾರತಕ್ಕೆ ಅತ್ಯವಶ್ಯಕವಾಗಿ ಬೇಕಾಗಿದ್ದ. ಈ ಉಗ್ರನನ್ನು ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ.

ಇತ್ತೀಚಿನ ಕೆಲವು ವರ್ಷಗಳಿಂದ ರಜಾವುಲ್ಲಾ ಸಿಂಧ್ ನ ಮಾಟ್ಲಿಗೆ ಸ್ಥಳಾಂತರಗೊಂಡಿದ್ದ. ಲಷ್ಕರ್ ಹಾಗೂ ಅದರ ಮುಂಚೂಣಿ ಸಂಘಟನೆಯಾದ ಜಮಾತ್- ಉದ್- ದಾವಾಕ್ಕಾಗಿ ಆತ ಕೆಲಸ ಆರಂಭಿಸಿದ್ದ. ಈ ಎರಡು ಉಗ್ರ ಸಂಘಟನೆಯನ್ನು ವಿಶ್ವಸಂಸ್ಥೆ ನಿಷೇಧಿಸಿದೆ. ಮುಂದಿನ ಉಗ್ರ ಕಾರ್ಯಾಚರಣೆಗಾಗಿ ನೇಮಕಾತಿ ಮತ್ತು ನಿಧಿ ಸಂಗ್ರಹಣೆಯ ಮೇಲೆ ಅವರ ಗಮನವಿತ್ತು.

ಕಳೆದ ವರ್ಷ ಪಾಕಿಸ್ತಾನದ ಐವತ್ತಕ್ಕೂ ಹೆಚ್ಚಿನ ಉಗ್ರರು ಅನಾಮಧೇಯ ಶೂಟರ್ ಗಳಿಂದ ಹತರಾಗಿದ್ದರು. ಆ ನಂತರ ಕೆಲವು ತಿಂಗಳು ಅನಾಮಧೇಯ ಶೂಟರ್ ಗಳ ಸುಳಿವಿರಲಿಲ್ಲ. ಈಗ ಮತ್ತೆ ಅನಾಮಧೇಯರು ಕಣಕ್ಕೆ ಇಳಿದಿದ್ದಾರೆ. ಭಾರತೀಯ ಸೇನೆ ಒಂದು ಕಡೆ ಉಗ್ರರ ನಾಶದಲ್ಲಿ ನಿರತರಾಗಿದ್ದರೆ, ಇನ್ನೊಂದೆಡೆ ಈ ಅನಾಮಧೇಯ ಶೂಟರ್ ಗಳು ಉಗ್ರರನ್ನು ಅವರ ಬಿಲಗಳಲ್ಲಿ ಮುಗಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search