• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!

Tulunadu News Posted On May 19, 2025
0


0
Shares
  • Share On Facebook
  • Tweet It

ಕೈಯಲ್ಲಿ ಕಾಲೇಜಿನ ಪ್ರಮಾಣಪತ್ರಗಳನ್ನು ಹಿಡಿದುಕೊಂಡು ಹೆತ್ತವರಿಗೆ ಫೋನ್ ಮಾಡಿ ಮಾತನಾಡಿದ 22 ವಯಸ್ಸಿನ ಯುವತಿ ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಕೆಯ ಹೆಸರು ಆಕಾಂಕ್ಷ. ಸುರೇಂದ್ರ ಹಾಗೂ ಸಿಂಧೂ ದೇವಿಯವರ ಮಗಳು. ಊರು ಕರ್ನಾಟಕದ ಬೆಳ್ತಂಗಡಿಯ ಧರ್ಮಸ್ಥಳದ ಬೋಳಿಯೂರು. ಆಕೆ ಮೇ 17 ರಂದು ಪಂಜಾಬಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.

ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಇಂಜಿನಿಯರ್. ಆರು ತಿಂಗಳಿನಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಅವಳಿಗೆ ಹೆಚ್ಚಿನ ಉದ್ಯೋಗಾವಕಾಶದ ಬಾಗಿಲು ತೆರೆದಿತ್ತು. ಅದಕ್ಕಾಗಿ ಕೆಲವು ದಾಖಲೆಗಳನ್ನು ಕಾಲೇಜಿನಿಂದ ಪಡೆಯಬೇಕಿತ್ತು. ಅದಕ್ಕಾಗಿ ತಾನು ಕಲಿತ ಪಂಜಾಬಿನ ಲವ್ಲಿ ಪ್ರೋಫೆಷನಲ್ ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದಳು. ಅಲ್ಲಿ ಪ್ರಮಾಣಪತ್ರಗಳನ್ನು ಪಡೆದಿದ್ದಾಳೆ. ನಂತರ ಹೆತ್ತವರೊಂದಿಗೆ ಮಾತನಾಡಿದ್ದಾಳೆ. ನಂತರ ಏಕಾಏಕಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲ್ಲಿ ಹೆತ್ತವರೊಂದಿಗೆ ಮಾತನಾಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವ ಸುಳಿವೂ ಆಕೆಯ ಮನೆಯವರಿಗೆ ಸಿಕ್ಕಿರಲಿಲ್ಲ. ಅದರೆ ಆ ಫೋನ್ ಕರೆ ಮತ್ತು ಆತ್ಮಹತ್ಯೆಯ ನಡುವೆ ಏನು ಆಯಿತು ಎನ್ನುವುದೇ ಈಗ ತನಿಖೆ ಆಗಬೇಕಾದ ಸಂಗತಿ. ಸದ್ಯ ಪೊಲೀಸರು ಆಕೆ ಕಲಿತ ಕಾಲೇಜಿನ ಪ್ರೋಫೆಸರ್ ಮ್ಯಾಥ್ಯೂ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಎನ್ನುವ ಕೇಸನ್ನು ಯುವತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಿದ್ದಾರೆ.

ಅಷ್ಟಕ್ಕೂ ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂಗೂ ಈ ಕೇಸಿಗೂ ಸಂಬಂಧ ಏನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಬಿಜಿಲ್ ಮ್ಯಾಥ್ಯೂಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನಿಗೂ, ಈಕೆಗೂ ಲವ್ ಎಫೇರ್ ಇತ್ತಾ? ತನ್ನನ್ನು ಮದುವೆಯಾಗು ಎಂದು ಆತನ ಮನೆಗೆ ಹೋಗಿ ಈಕೆ ರಂಪಾಟ ಮಾಡಿದ್ದಳಾ? ಕಾಲೇಜಿನಲ್ಲಿಯೂ ಇವರಿಬ್ಬರ ನಡುವೆ ಅದೇ ವಿಷಯಕ್ಕೆ ಮೊನ್ನೆ ಗಲಾಟೆಯಾಯಿತಾ? ಇದೆಲ್ಲವೂ ತನಿಖೆಯಿಂದ ಸಾಬೀತಾಗಬೇಕು. ಇನ್ನೊಂದೆಡೆ ಆತ ಈಕೆಯನ್ನು ಬಲವಂತವಾಗಿ ಪೀಡಿಸುತ್ತಿದ್ದಾನಾ ಎನ್ನುವುದು ಕೂಡ ತನಿಖೆಯಿಂದಲೇ ಹೊರಬೀಳಬೇಕಾಗಿದೆ. ಇದು ಪ್ರೇಮ ವೈಫಲ್ಯದ ಪ್ರಕರಣವೋ ಅಲ್ಲವೋ ಎಂದು ಗೊತ್ತಾದ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ.

ಸದ್ಯ ಆಕೆಯ ಮೃತದೇಹವನ್ನು ಹೆತ್ತವರಿಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳದ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search