• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!

Tulunadu News Posted On May 19, 2025
0


0
Shares
  • Share On Facebook
  • Tweet It

ಕೈಯಲ್ಲಿ ಕಾಲೇಜಿನ ಪ್ರಮಾಣಪತ್ರಗಳನ್ನು ಹಿಡಿದುಕೊಂಡು ಹೆತ್ತವರಿಗೆ ಫೋನ್ ಮಾಡಿ ಮಾತನಾಡಿದ 22 ವಯಸ್ಸಿನ ಯುವತಿ ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಕೆಯ ಹೆಸರು ಆಕಾಂಕ್ಷ. ಸುರೇಂದ್ರ ಹಾಗೂ ಸಿಂಧೂ ದೇವಿಯವರ ಮಗಳು. ಊರು ಕರ್ನಾಟಕದ ಬೆಳ್ತಂಗಡಿಯ ಧರ್ಮಸ್ಥಳದ ಬೋಳಿಯೂರು. ಆಕೆ ಮೇ 17 ರಂದು ಪಂಜಾಬಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.

ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಇಂಜಿನಿಯರ್. ಆರು ತಿಂಗಳಿನಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಅವಳಿಗೆ ಹೆಚ್ಚಿನ ಉದ್ಯೋಗಾವಕಾಶದ ಬಾಗಿಲು ತೆರೆದಿತ್ತು. ಅದಕ್ಕಾಗಿ ಕೆಲವು ದಾಖಲೆಗಳನ್ನು ಕಾಲೇಜಿನಿಂದ ಪಡೆಯಬೇಕಿತ್ತು. ಅದಕ್ಕಾಗಿ ತಾನು ಕಲಿತ ಪಂಜಾಬಿನ ಲವ್ಲಿ ಪ್ರೋಫೆಷನಲ್ ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದಳು. ಅಲ್ಲಿ ಪ್ರಮಾಣಪತ್ರಗಳನ್ನು ಪಡೆದಿದ್ದಾಳೆ. ನಂತರ ಹೆತ್ತವರೊಂದಿಗೆ ಮಾತನಾಡಿದ್ದಾಳೆ. ನಂತರ ಏಕಾಏಕಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲ್ಲಿ ಹೆತ್ತವರೊಂದಿಗೆ ಮಾತನಾಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವ ಸುಳಿವೂ ಆಕೆಯ ಮನೆಯವರಿಗೆ ಸಿಕ್ಕಿರಲಿಲ್ಲ. ಅದರೆ ಆ ಫೋನ್ ಕರೆ ಮತ್ತು ಆತ್ಮಹತ್ಯೆಯ ನಡುವೆ ಏನು ಆಯಿತು ಎನ್ನುವುದೇ ಈಗ ತನಿಖೆ ಆಗಬೇಕಾದ ಸಂಗತಿ. ಸದ್ಯ ಪೊಲೀಸರು ಆಕೆ ಕಲಿತ ಕಾಲೇಜಿನ ಪ್ರೋಫೆಸರ್ ಮ್ಯಾಥ್ಯೂ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಎನ್ನುವ ಕೇಸನ್ನು ಯುವತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಿದ್ದಾರೆ.

ಅಷ್ಟಕ್ಕೂ ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂಗೂ ಈ ಕೇಸಿಗೂ ಸಂಬಂಧ ಏನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಬಿಜಿಲ್ ಮ್ಯಾಥ್ಯೂಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನಿಗೂ, ಈಕೆಗೂ ಲವ್ ಎಫೇರ್ ಇತ್ತಾ? ತನ್ನನ್ನು ಮದುವೆಯಾಗು ಎಂದು ಆತನ ಮನೆಗೆ ಹೋಗಿ ಈಕೆ ರಂಪಾಟ ಮಾಡಿದ್ದಳಾ? ಕಾಲೇಜಿನಲ್ಲಿಯೂ ಇವರಿಬ್ಬರ ನಡುವೆ ಅದೇ ವಿಷಯಕ್ಕೆ ಮೊನ್ನೆ ಗಲಾಟೆಯಾಯಿತಾ? ಇದೆಲ್ಲವೂ ತನಿಖೆಯಿಂದ ಸಾಬೀತಾಗಬೇಕು. ಇನ್ನೊಂದೆಡೆ ಆತ ಈಕೆಯನ್ನು ಬಲವಂತವಾಗಿ ಪೀಡಿಸುತ್ತಿದ್ದಾನಾ ಎನ್ನುವುದು ಕೂಡ ತನಿಖೆಯಿಂದಲೇ ಹೊರಬೀಳಬೇಕಾಗಿದೆ. ಇದು ಪ್ರೇಮ ವೈಫಲ್ಯದ ಪ್ರಕರಣವೋ ಅಲ್ಲವೋ ಎಂದು ಗೊತ್ತಾದ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ.

ಸದ್ಯ ಆಕೆಯ ಮೃತದೇಹವನ್ನು ಹೆತ್ತವರಿಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳದ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

0
Shares
  • Share On Facebook
  • Tweet It




Trending Now
ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
Tulunadu News August 9, 2025
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
Tulunadu News August 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
  • Popular Posts

    • 1
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 2
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • 3
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 4
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 5
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

  • Privacy Policy
  • Contact
© Tulunadu Infomedia.

Press enter/return to begin your search