• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!

Tulunadu News Posted On May 23, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೇರಿದ ತಿರುಮಲ ದೇವಸ್ಥಾನದ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೊಬ್ಬ ನಮಾಜ್ ಸಲ್ಲಿಸುತ್ತಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಷಯ ಅಲ್ಲಿನ ಸ್ಥಳೀಯರಲ್ಲಿ ಮತ್ತು ದೇವಳದ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಕ್ತಿ ನಮಾಜ್ ಸಲ್ಲಿಸಿದ್ದು ತಿರುಮಲ ಕಲ್ಯಾಣ ಮಂಟಪದ ಆವರಣದಲ್ಲಿ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಈಗ ವೈರಲ್ ಆಗಿದೆ.

ಈ ದೃಶ್ಯದಲ್ಲಿ ತಲೆಗೆ ಧಾರ್ಮಿಕ ಶಿರಸ್ತ್ರಾಣ ಧರಿಸಿದ ವ್ಯಕ್ತಿ ನಮಾಜ್ ಸಲ್ಲಿಸುತ್ತಿದ್ದು, ಅದು ಪುರೋಹಿತ್ ಸಂಗಮ್ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದರ ವಿಜಿಲೆನ್ಸ್ ತಂಡ ತನಿಖೆಯನ್ನು ಆರಂಭಿಸಿದ್ದು, ವ್ಯಕ್ತಿಯ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಸದ್ಯ ಆ ವ್ಯಕ್ತಿ ಬಾಡಿಗೆ ವಾಹನದ ಚಾಲಕ ಎಂದು ಹೇಳಲಾಗುತ್ತಿದ್ದು, ಹಿಂದೂ ಯಾತ್ರಿಗಳನ್ನು ಕರೆದುಕೊಂಡು ತಿರುಪತಿಗೆ ಬಂದಿದ್ದ ಎನ್ನಲಾಗುತ್ತಿದೆ. ಹತ್ತು ನಿಮಿಷದ ತನಕ

ನಮಾಜ್ ಸಲ್ಲಿಸಿ ನಂತರ ಆ ವ್ಯಕ್ತಿ ನಂತರ ಅಲ್ಲಿಂದ ತೆರಳಿದ್ದಾನೆ. ನಮಾಜ್ ಸಲ್ಲಿಸುವ ಮೊದಲು ಅಲ್ಲಿನ ಸ್ಥಳೀಯ ವ್ಯಕ್ತಿಯೊಬ್ಬರ ಬಳಿ ಅನುಮತಿಯನ್ನು ಆ ಚಾಲಕ ಕೇಳಿದ್ದಾರೆ. ಅದಕ್ಕೆ ಆ ಸ್ಥಳೀಯ ವ್ಯಕ್ತಿ ಸಮ್ಮತಿಸಿದ ನಂತರವೇ ನಮಾಜ್ ಸಲ್ಲಿಸಲಾಗಿದೆ. ಆದರೆ ಅನುಮತಿ ನೀಡಿದ ವ್ಯಕ್ತಿ ನಮಾಜ್ ಸಲ್ಲಿಸುವ ದೃಶ್ಯ ಚಿತ್ರಿಸಿ ವೈರಲ್ ಮಾಡಿದ್ದಾನೆ ಎಂದು ಕೂಡ ಹೇಳಲಾಗುತ್ತದೆ. ಭಾರತೀಯ ಜನತಾ ಪಾರ್ಟಿ ಈ ಘಟನೆಯನ್ನು ಖಂಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ನಮಾಜ್ ಸಲ್ಲಿಸಿದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search