• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!

TULUNADU NEWS Posted On June 16, 2025
0


0
Shares
  • Share On Facebook
  • Tweet It

ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಮಿಕ್ಕಿ ಯುವಕರು ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ತಮ್ಮ ದಿನನಿತ್ಯದ ಆದಾಯವನ್ನು ನಷ್ಟ ಮಾಡಿಕೊಳ್ಳಲಿದ್ದಾರೆ. ಒಂದು ಲಕ್ಷಕ್ಕೂ ಮಿಕ್ಕಿ ಯುವಕರು ಬೈಕ್ ಟ್ಯಾಕ್ಸಿ ನಿಷೇಧದಿಂದ ಉದ್ಯೋಗ ನಷ್ಟ ಮಾಡಿಕೊಳ್ಳಲಿದ್ದು, ಇದು ನಿಜಕ್ಕೂ ಆತಂಕಕಾರಿ ಸುದ್ದಿ ಎಂದು ವಿಶ್ಲೇಷಿಸಲಾಗಿದೆ. ಈ ಒಂದು ಲಕ್ಷಕ್ಕೂ ಮಿಕ್ಕಿದ ಬೈಕ್ ಟ್ಯಾಕ್ಸಿ ಚಾಲಕರಿಂದ ವರ್ಷಕ್ಕೆ ಎಂಟು ಕೋಟಿ ರೈಡ್ ದಾಖಲಾಗಿದ್ದು, ಇದು ಬೆಂಗಳೂರಿನ ಆರ್ಥಿಕತೆಯ ವಿಷಯದಲ್ಲಿ ಪ್ರಧಾನ ಪಾತ್ರ ವಹಿಸಿತ್ತು.

ಈ ಕುರಿತು ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಏನಾದರೂ ಪರಿಹಾರ ಮಾರ್ಗ ಕಂಡುಹಿಡಿಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಏಕಾಏಕಿ ಹೀಗೆ ಬೈಕ್ ಟ್ಯಾಕ್ಸಿ ಬಂದ್ ಆದರೆ ಅತ್ತ ಬೈಕ್ ಸವಾರರಿಗೂ, ಇತ್ತ ಮಿತವ್ಯಯಯದಲ್ಲಿ ಪ್ರಯಾಣಿಸುವ ಮಧ್ಯಮವರ್ಗದವರಿಗೂ ತೊಂದರೆ ಆಗಲಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಬೈಕ್ ಟ್ಯಾಕ್ಸಿ ಮಾರ್ಗಸೂಚಿಗಳ ಬಗ್ಗೆ ನಿಖರವಾದ ಮಾಹಿತಿ ಇಲ್ಲದಿರುವುದರಿಂದ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಆಪರೇಟರ್ ಗಳಾದ rapido, ಓಲಾ ಹಾಗೂ ಉಬರ್ ಮೋಟೋ ಕಂಪೆನಿಗಳಿಗೆ ಬೈಕ್ ಟ್ಯಾಕ್ಸಿ ಚಾಲನೆ ಮಾಡುವಂತಿಲ್ಲ ಎಂದು ಆದೇಶ ನೀಡಿದೆ.

ಇನ್ನು ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ತಮ್ಮ ಪತ್ರದಲ್ಲಿ ಈ ಉದ್ಯೋಗ ಸವಾರರ ಪ್ರಾಥಮಿಕ ಆದಾಯ ಮೂಲವಾಗಿದ್ದು, ಎಂತಹುದೇ ಬಿಸಿಲು, ಮಳೆ, ಗಾಳಿ ಎನ್ನದೇ ದಿನಕ್ಕೆ 10 ರಿಂದ 12 ಗಂಟೆಗಳ ತನಕ ಕರ್ತವ್ಯ ಮಾಡುವ ಬೈಕ್ ಸವಾರರ ಪರ ಕಾಳಜಿ ಇಟ್ಟುಕೊಂಡು ಏನಾದರೂ ಸಹಾಯ ಮಾಡಬೇಕು ಎಂದು ವಿನಂತಿಸಿದ್ದಾರೆ.

ಇದು ಸೈಡ್ ಇನ್ ಕಂ ಅಲ್ಲ, ಇದು ಬದುಕಿಗಾಗಿ ದುಡಿಯುವ ಅನಿವಾರ್ಯತೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಹೀಗೆ ಸಡನ್ ಬ್ಯಾನ್ ಆಗುವ ಬದಲಿಗೆ ರಾಜ್ಯ ಸರಕಾರ ಮೊದಲೇ ಈ ಕ್ಷೇತ್ರದ ಬಗ್ಗೆ ನಿಯಮಾವಳಿಗಳನ್ನು ಮಾಡಬಹುದಿತ್ತು ಎಂದು ಕೇಳಿಕೊಳ್ಳಲಾಗಿದ್ದು, ಲೈಸೆನ್ಸ್, ಇನ್ಯೂರೆನ್ಸ್, ಸುರಕ್ಷತಾ ವಿಧಾನಗಳ ಬಗ್ಗೆ ಕಾನೂನು ತಂದಿದ್ದರೆ ದೆಹಲಿ, ತೆಲಂಗಾಣ, ರಾಜಸ್ಥಾನದಲ್ಲಿ ಇದ್ದ ಹಾಗೆ ಇಲ್ಲಿಯೂ ಬೈಕ್ ಟ್ಯಾಕ್ಸಿಗೆ ಯೋಗ್ಯ ವಾತಾವರಣ ಸೃಷ್ಟಿಸಿದಂತೆ ಆಗುತ್ತಿತ್ತು ಎಂದು ಹೇಳಲಾಗಿದೆ.

ಇನ್ನು ಮಧ್ಯಮ ವರ್ಗದ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ, ಶೀಘ್ರವಾಗಿ, ಉತ್ತಮ ವ್ಯವಸ್ಥೆಯಲ್ಲಿ ತಮ್ಮ ಗಮ್ಯವನ್ನು ಪಡೆಯಲು ಇದಕ್ಕಿಂತ ಯೋಗ್ಯ ಆಯ್ಕೆ ಬೇರೆ ಇರಲಿಲ್ಲ ಎನ್ನುವುದಕ್ಕೆ ವರ್ಷಕ್ಕೆ ಎಂಟು ಕೋಟಿ ರೈಡ್ ಗಳು ದಾಖಲಾಗಿರುವುದೇ ಸಾಕ್ಷಿ ಎಂದು ತಿಳಿಸಲಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಚಾಲಕ ಸಂಘಸಂಸ್ಥೆಯೊಂದಿಗೆ ಮಾತುಕತೆ ನಡೆಸಿ, ಇದಕ್ಕೊಂದು ಮಾರ್ಗಸೂಚಿ ರಚಿಸಿ, ಚಾಲಕರ ಹಾಗೂ ಪ್ರಯಾಣಿಕರ ಇಬ್ಬರ ಕಾಳಜಿಯನ್ನು ಕೂಡ ವಹಿಸಬೇಕೆಂದು ಕೋರಲಾಗಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
TULUNADU NEWS September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
TULUNADU NEWS September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search