• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ…

Tulunadu News Posted On June 20, 2025
0


0
Shares
  • Share On Facebook
  • Tweet It

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನನಿನ ಚೌಕಟ್ಟನ್ನು ಮೀರಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಭಂದಿಸಿ ಮಧ್ಯಂತರ ಆದೇಶ ಮಾಡಿದೆ.

ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸಿ ಆರೋಪಿಯ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ದಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದರು. ಕರ್ನಾಟಕ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದಕ ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್, ದಕ ಎಸ್ಪಿ ಡಾ ಕೆ ಅರುಣ್, ಉಪ್ಪಿನಂಗಡಿ ಎಸ್ ಐ ಅವಿನಾಶ್ ಗೌಡ ಇವರನ್ನು ಪ್ರತಿವಾದಿಗಳಾಗಿ ಮಾಡಲಾಗಿದೆ. ಯುಜಿ ರಾಧಾ ಅವರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಘಟನೆಗೆ ಸಂಬಂಧಿಸಿ ದಾಖಲೆ ಸಮೇತ ಉತ್ತರಿಸಬೇಕು ಎಂದು ಪ್ರತಿವಾದಿಗಳಿಗೆ ನೋಟಿಸು ಜಾರಿ ಮಾಡಿದೆ.

ಜೂನ್ 1 ರಂದು ಯು ಜಿ ರಾಧಾ ಅವರು ಉಪ್ಪಿನಂಗಡಿ ಪೇಟೆಯಲ್ಲಿರುವ ತಮ್ಮ ಮೆಡಿಕಲ್ ಶಾಪ್ ನಲ್ಲಿದ್ದಾಗ ಪೊಲೀಸರು ಮೆಡಿಕಲ್ ಟೆಸ್ಟಿಗೆ ಬಂದಿದ್ದರು. ಮರುದಿನ ಮಧ್ಯರಾತ್ರಿ ಅವರ ಮನೆಗೆ ತೆರಳಿದ ಪೊಲೀಸರು ಅವರ ಫೋಟೋ ತೆಗೆದು ಜಿಪಿಎಸ್ ಮೂಲಕ ಅಪಲೋಡ್ ಮಾಡಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಎಸ್ಪಿಯವರ ಸೂಚನೆ ಇದೆ ಎಂದು ಪೊಲೀಸರು ತಿಳಿಸಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಜೂನ್ 3 ರಂದು ಯುಜಿ ರಾಧಾ ಅವರು ಹೈಕೋರ್ಟ್ ಮೆಟ್ಟಲೇರಿದ್ದರು.

ತಮ್ಮ ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾಕಾರಣ ಕಸಿದಿದ್ದಾರೆ. ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ದಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ ಮಾನನಷ್ಟ ಪರಿಹಾರ ನೀಡಬೇಕು ಎಂದು ಯು.ಜಿ.ರಾಧಾ ರಿಟ್ ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ವಾದಿಸಿದ್ದಾರೆ.

ಜೂನ್ 19 ರಂದು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠ, ಪ್ರಕರಣ ವಿಚಾರಣೆಯಲ್ಲಿರುವುದರಿಂದ, ಕಾನೂನು ಪರಿವ್ಯಾಪ್ತಿಯನ್ನು ಹೊರತುಪಡಿಸಿ ದೂರುದಾರರಿಗೆ ಯಾವುದೇ ರೀತಿಯ ಕಿರುಕುಳವನ್ನು ಪೊಲೀಸರು ನೀಡಬಾರದು. ದೂರುದಾರರ ಮನೆಗಳಿಗೆ ಪೊಲೀಸರು ಆಗಮಿಸಿದ ವಿದ್ಯಮಾನಕ್ಕೆ ಸಂಬಂಧಿಸಿ ದಾಖಲೆ ಸಲ್ಲಿಸಬೇಕು ಎಂದು ಸೂಚಿಸಿ ಪ್ರತಿವಾದಿಗಳಿಗೆ ನೋಟಿಸು ಜಾರಿಗೆ ಆದೇಶಿಸಿದೆ. ಘಟನೆ ಕುರಿತು ಯು ಜಿ ರಾಧಾ ಅವರು ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search