• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!

TULUNADU NEWS Posted On June 26, 2025
0


0
Shares
  • Share On Facebook
  • Tweet It

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಹಿಂದೂಗಳ ನರಮೇಧದ ಬಗ್ಗೆ ಇಡೀ ವಿಶ್ವವೇ ಪಾಕಿಸ್ತಾನಕ್ಕೆ ಛೀ… ಥೂ ಹಾಕಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಂದು ಅಮಾಯಕ ಪ್ರವಾಸಿಗರನ್ನು ಕೊಂದ ಪಾಕಿ ಉಗ್ರರಿಗೆ ಸ್ಥಳೀಯರ ಸಹಕಾರ ಇಲ್ಲದಿದ್ದರೆ ಅವರು ಅದನ್ನೆಲ್ಲಾ ಮಾಡಲು ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಯಾಕೆಂದರೆ ಉಗ್ರರು ಪಾಕಿಸ್ತಾನದಿಂದ ನೇರವಾಗಿ ಹಾರಿ ಪೆಹಲ್ಗಾಂನಲ್ಲಿ ಇಳಿಯಲು ಸಾಧ್ಯವಿಲ್ಲ. ಅವರು ಕಳ್ಳಮಾರ್ಗದಿಂದ ಕಾಶ್ಮೀರದಲ್ಲಿ ನುಸುಳಿ ಅಲ್ಲಿ ಸ್ಥಳೀಯರ ಮನೆಗಳಲ್ಲಿ ವಾಸ್ತವ್ಯ ಮಾಡಿ, ಅಲ್ಲಿ ಯೋಜನೆ ಹಾಕಿ, ನಂತರ ಅಲ್ಲಿಂದ ವಾಹನಗಳ ಸಹಾಯದಿಂದ ಪೆಹಲ್ಗಾಂ ತಲುಪಬೇಕಾಗುತ್ತದೆ. ಇನ್ನು ಅದಕ್ಕಿಂತ ಮೊದಲು ಅಲ್ಲಿ ಹೋಗಿ ಪರಿಸ್ಥಿತಿಯನ್ನು ಅವಲೋಕಿಸಬೇಕಾಗುತ್ತದೆ. ಇದಕ್ಕೆಲ್ಲ ಉಗ್ರರಿಗೆ ಸ್ಥಳೀಯರ ಸಹಕಾರ ಬೇಕಾಗುತ್ತೆ.

ಪೆಹಲ್ಗಾಂನಲ್ಲಿಯೂ ಹೀಗೆ ಉಗ್ರರಿಗೆ ಸಹಕಾರ ನೀಡಿದ್ದ ಇಬ್ಬರು ಸ್ಥಳೀಯರಾದ ಒರ್ವೈಜ್ ಅಹ್ಮದ್ ಜೋಥರ್ ಹಾಗೂ ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಇವರನ್ನು ಸರಿಯಾಗಿ ವಿಚಾರಣೆ ನಡೆಸಿದಾಗ 26 ನಾಗರಿಕರ ಸಾವಿಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಮೂವರ ಹೆಸರನ್ನು ಸಹ ಈ ಬಂಧಿತ ಆರೋಪಿಗಳು ಬಹಿರಂಗಪಡಿಸಿದ್ದಾರೆ.

ಈ ಸ್ಥಳೀಯರಲ್ಲಿ ಪಹಲ್ಗಾಂನ ಬಟ್ಕೋಟ್ ಮೂಲದ ಪರ್ವೈಜ್ ಅಹ್ಮದ್ ಜೋಥರ್ ಹಾಗೂ ಅದೇ ಪಹಲ್ಗಾಂನ ಹಿಲ್ ಪಾರ್ಕ್ ಮೂಲದ ಬಶೀರ್ ಅಹ್ಮದ್ ಜೋಥರ್ ಮೂವರು ಸಶಸ್ತ್ರ ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ ಮತ್ತು ಉಗ್ರರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ – ಎ – ತೋಯ್ಬಾ (ಎಲ್ ಇಟಿ) ಸಂಬಂಧಿಸಿದ ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಡಿಸಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಹೇಳಿದೆ.
ತನಿಖೆಯ ಪ್ರಕಾರ, ಪರ್ವೈಜ್ ಹಾಗೂ ಬಶೀರ್ ದಾಳಿಗೆ ಮುನ್ನ ಹಿಲ್ ಪಾರ್ಕ್ ನಲ್ಲಿರುವ ಕಾಲೋಚಿತ ಧೋಕ್ ಅಂದರೆ ಗುಡಿಸಲಿನಲ್ಲಿ ಈ ಇಬ್ಬರು ಭಯೋತ್ಪಾದಕರಿಗೆ ಆಹಾರ, ಆಶ್ರಯ ಸೇರಿದಂತೆ ಎಲ್ಲಾ ವ್ಯವಸ್ಥೆಯ ಬೆಂಬಲವನ್ನು ಒದಗಿಸಿದ್ದರು.

ಎಲ್ಲಾ ಯೋಜಿತವಾಗಿ ನಡೆದ ಕಾರಣ ಆ ಮೂವರು ಉಗ್ರರು ಪೆಹಲ್ಗಾಂನಲ್ಲಿ ಏಪ್ರಿಲ್ 22 ರಂದು ತಮ್ಮ ಉದ್ದೇಶಿತ ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ ಕಾರಣ ಅಲ್ಲಿ ಕಾಶ್ಮೀರದ ಸೌಂದರ್ಯ ಸವಿಯಲು ಬಂದಿದ್ದ 26 ಜನರು ಪ್ರಾಣ ಬಿಡಬೇಕಾಯಿತು. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ವಹಿಸಿಕೊಂಡಿತ್ತು. ಕಾಶ್ಮೀರದ ಪಹಲ್ಗಾಂ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸಲು ಆಗಮಿಸಿದ್ದ ಪ್ರವಾಸಿಗರಿಗರ ಮೇಲೆ ಮಧ್ಯಾಹ್ನ 2.30 ರ ವೇಳೆಗೆ ಉಗ್ರರು ಸುತ್ತುವರೆದು ಮನಬಂದಂತೆ ಗುಂಡು ಹಾರಿಸಿದ್ದರು. ಬಂಧಿತ ಸ್ಥಳೀಯರಿಂದ ಇನ್ನಷ್ಟು ವಿಷಯವನ್ನು ಕಲೆ ಹಾಕುವಲ್ಲಿ ಎನ್ ಐಎ ನಿರತವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
TULUNADU NEWS October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
TULUNADU NEWS October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search