• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ…

TULUNADU NEWS Posted On June 27, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ (ಎನ್ ಐಎ) ತಂಡದ ವಕೀಲರು ಎನ್ ಐಎ ವಿಶೇಷ ನ್ಯಾಯಾಲಯದಲ್ಲಿ ನೀಡಿರುವ ಮಾಹಿತಿಯಲ್ಲಿ ಆತಂಕಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಎನ್ ಐಎ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಅವರು ಬಂಧಿಸಿರುವ ಪಿಎಫ್ ಐ ಕಾರ್ಯಕರ್ತರನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ಸುಮಾರು 950 ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುವ ಪಟ್ಟಿ ಸಿದ್ಧವಾಗಿದೆ. ಆದ್ದರಿಂದ ಬಂಧಿಸಲ್ಪಡುವ ಯಾವುದೇ ಪಿಎಫ್ ಐ ಕಾರ್ಯಕರ್ತನಿಗೆ ಜಾಮೀನು ನೀಡುವುದಕ್ಕೆ ಎನ್ ಐಎ ತೀವ್ರ ಆಕ್ಷೇಪ ಸಲ್ಲಿಸಿದೆ.

ಈ ವಿಷಯ ಇನ್ನಷ್ಟು ಮುನ್ನಲೆಗೆ ಬರಲು ಕಾರಣ, ಮೇ 21 ರಂದು ಸುಪ್ರೀಂ ಕೋರ್ಟ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಶ್ರೀನಿವಾಸನ್ ಕೊಲೆಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ವಿಷಯದಲ್ಲಿ ವಿಚಾರಣೆ ನಡೆಯುವಾಗ, ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ” ಒಬ್ಬನೇ ವ್ಯಕ್ತಿ ಕೊಲೆಯಾಗಿರುವುದು. ಅದಕ್ಕೆ ಎಷ್ಟು ಮಂದಿಯನ್ನು ಜೈಲಿಗೆ ಹಾಕುತ್ತೀರಿ” ಎಂದು ಕೇಳಿದೆ.

ಈ ವಿಷಯದಲ್ಲಿ ದೇಶದ ಆಟರ್ನಿ ಜನರಲ್ ಆಫ್ ಇಂಡಿಯಾ (ಎಎಸ್ ಜಿ) ರಾಜಾ ತಾಕರೆ ಅವರು ಆಕ್ಷೇಪ ವ್ಯಕ್ತಪಡಿಸಿ ತಮ್ಮ ವಾದದಲ್ಲಿ “ಪಿಎಫ್ ಐ ಬಳಿ ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುವ ಹಿಟ್ ಲಿಸ್ಟ್ ತಯಾರಾಗಿದೆ. ಇದು ಕೇವಲ ಒಂದು ಕೊಲೆಯ ವಿಷಯ ಮಾತ್ರವಲ್ಲ, ಇದರ ಹಿಂದೆ ಬಹಳ ದೊಡ್ಡ ಪಿತೂರಿ ಕೂಡ ನಡೆಯುತ್ತಿದೆ. ಪಿಎಫ್ ಐ ಮುಖಂಡರಾದ ಯಾಹ್ಯಾ ತಂಗಳ್ ಹಾಗೂ ಅಬ್ದುಲ್ ರಾವುಫ್ ಅವರಿಗೆ ಆರ್ ಎಸ್ ಎಸ್ ಮುಖಂಡ ಶ್ರೀನಿವಾಸನ್ ಕೊಲೆಯ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವ ವಿಷಯ ಮಾತ್ರವಲ್ಲ, ಬಹಳ ದೊಡ್ಡ ವ್ಯಾಪ್ತಿಯಲ್ಲಿ ಈ ಪ್ರಕರಣವನ್ನು ನೋಡಬೇಕು” ಎಂದು ಮನವಿ ಮಾಡಿದರು.

ಇನ್ನು ಎಎಸ್ ಜಿ ತಾಕರೆ ಅವರು ಮುಂದುವರೆದು ” ಆರೋಪಿ ತಂಗಳ್ ಆತನ ವಕೀಲರು ಹೇಳಿದಂತೆ ಕೇವಲ ಪ್ರತಿಭಟನಾಕಾರನಲ್ಲ, ಆತ ಕೊಲೆಯ ಹಿಂದಿನ ಮಾಸ್ಟರ್ ಮೈಂಡ್ ಕೂಡ ಆಗಿದ್ದಾನೆ” ಎಂದು ತಿಳಿಸಿದರು. ಆಪ್ರೋವರ್ ಒಬ್ಬರ ಒಪ್ಪಿತ ದಾಖಲೆಯಲ್ಲಿರುವ ಮಾಹಿತಿಯನ್ನು ಹೇಳಿದ ತಾಕರೆಯವರು ಪಿಎಫ್ ಐ ಕಾರ್ಯಕರ್ತ ಸುಬೈರ್ ಕೊಲೆಯಾದಾಗ, ಪಿಎಫ್ ಐ ಪ್ರತೀಕಾರದ ಕ್ರಮವಾಗಿ ಹಿಂದೂ ಮುಖಂಡನೊಬ್ಬನ ಹತ್ಯೆಗಾಗಿ ಏಳು ತಂಡಗಳನ್ನು ರಚಿಸಿತ್ತು. ಅದರಲ್ಲಿ ತಂಗಳ್ ಹಾಗೂ ರಾವೂಫ್ ಕೂಡ ತಂಡವೊಂದರ ಸದಸ್ಯರಾಗಿದ್ದು, ಆ ತಂಡವೇ ಶ್ರೀನಿವಾಸ್ ಹತ್ಯೆಯ ಸಂಚು ನಡೆಸಿತ್ತು. ಸುಬೈರ್ ಶವ ಇಟ್ಟಿದ್ದ ಆಸ್ಪತ್ರೆಯ ಹೊರಗೆ ಅಷ್ಟೂ ರಣತಂತ್ರಗಳು ನಡೆದಿದ್ದು, ಅದು ಜಾರಿಗೆ ಬಂದಿದೆ. ತಂಗಳ್ ಈ ಹಿಂದೆನೂ ಕೇರಳ ಹೈಕೋರ್ಟಿನ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ” ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಓಕಾ ಅವರು “ತಂಗಳ್ ಹಾಗೂ ಇತರ ಆರೋಪಿಗಳು ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಹೇಗೆ ಸಾಬೀತುಪಡಿಸುತ್ತೀರಿ. ” ಈ ವ್ಯಕ್ತಿಗಳು ಎಲ್ಲಿಯೋ ಕುಳಿತುಕೊಂಡಿದ್ದರೆ, ಅವರನ್ನೇ ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಗೆ ಹೇಳಲು ಸಾಧ್ಯ?” ಎಂದು ಪ್ರಶ್ನಿಸಿದರು. “ಇನ್ನು ಒಬ್ಬ ಮಾತ್ರ ಕೊಲೆಯಾಗಿದ್ದಾನೆ” ಎಂದು ಹೇಳಿದರು.

ಒಟ್ಟಿನಲ್ಲಿ ಈ ಪ್ರಕರಣದಿಂದ ಒಂದೊಂದು ವಿಷಯ ಸ್ಪಷ್ಟವಾಗಿದೆ. ಎನ್ ಐಎ ಬಳಿ ಪಿಎಫ್ ಐ ಸಿದ್ಧಪಡಿಸಿದ ಹಿಟ್ ಲಿಸ್ಟ್ ಇದ್ದು, ಅದರಲ್ಲಿ 950 ಹಿಂದೂ ಮುಖಂಡರ ಹೆಸರು ಇದೆ.

0
Shares
  • Share On Facebook
  • Tweet It


- Advertisement -


Trending Now
ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
TULUNADU NEWS June 27, 2025
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
TULUNADU NEWS June 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
  • Popular Posts

    • 1
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 2
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 3
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 4
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 5
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search