• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

TULUNADU NEWS Posted On July 1, 2025
0


0
Shares
  • Share On Facebook
  • Tweet It

ಇದು ಕೇರಳದ ಮಲ್ಲಪುರಂನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ. ಒಂದು ವರ್ಷದ ಮಗುವಿಗೆ ಜಾಂಡಿಸ್ ಬಂದಿತ್ತು. ಆದರೆ ಮಗುವಿನ ಪೋಷಕರು ಇಂದಿನ ಕಾಲದ ಚಿಕಿತ್ಸೆ ನೀಡಲು ಬಯಸಲಿಲ್ಲ. ಅವರು ಆಧುನಿಕ ಚಿಕಿತ್ಸೆ ನೀಡಲು ತಮ್ಮ ಧಾರ್ಮಿಕ ನಂಬಿಕೆ ಒಪ್ಪುತ್ತಿಲ್ಲ. ಆದ್ದರಿಂದ ಚಿಕಿತ್ಸೆ ನೀಡದ ನಿರ್ಧಾರಕ್ಕೆ ಬಂದಿದ್ದರು.

ಆದ್ದರಿಂದ ಎಸೆನ್ ಈರ್ಹಾನ್ ಎನ್ನುವ ಆ ಮಗುವಿಗೆ ಯಾವುದೇ ಚಿಕಿತ್ಸೆ ಸಿಗಲಿಲ್ಲ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಮಗುವಿನ ಹೆತ್ತವರಾದ ನವಾಝ್ ಹಾಗೂ ಹೀರಾ ಹರೇರಾ ಕೊಟ್ಟಾಕಲ್ ನಲ್ಲಿ ವಾಸಿಸುತ್ತಿದ್ದು, ಚಿಕಿತ್ಸೆ ಸಿಗದೇ ಮಗು ಜೂನ್ 27 ರಂದು ಮೃತಪಟ್ಟಿದೆ. ಮಗುವಿನ ತಾಯಿ ಆಕ್ಯುಪಂಚರ್ ಪರಿಣಿತರಾಗಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಇಂದಿನ ಚಿಕಿತ್ಸಾ ಕ್ರಮಗಳ ಬಗ್ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಅದರ ನಂತರ ಸ್ಥಳೀಯಾಡಳಿತದ ಅಧಿಕಾರಿಗಳು ಇವರನ್ನು ವಿಚಾರಿಸಿದಾಗ ಹೊರಗೆ ಬಂದಿರುವ ಮಾಹಿತಿ ನಿಜಕ್ಕೂ ಗಾಬರಿ ಹುಟ್ಟಿಸುವಂತದ್ದು. ಏನೆಂದು ಹೇಳಿದರೆ ಒಂದು ವರ್ಷದ ಮಗುವಿಗೆ ಇಲ್ಲಿಯ ತನಕ ಲಸಿಕೆ ಆಗಿರಲೇ ಇಲ್ಲ.

ಮಗು ಸತ್ತ ತಕ್ಷಣ ಅದರ ಹೆತ್ತವರು ಮಗುವಿನ ದಫನ ಕಾರ್ಯ ನೆರವೇರಿಸಿದ್ದಾರೆ. ಆದರೆ ಮಗುವಿನ ಸಾವಿಗೆ ವೈದ್ಯಕೀಯವಾಗಿ ಅದರ ಕಾಯಿಲೆಯನ್ನು ನಿರ್ಲಕ್ಷಿಸಿದ್ದೇ ಕಾರಣ ಎಂದು ಪೊಲೀಸರಿಗೆ ತಿಳಿದ ನಂತರ ಮಗುವಿನ ಶವವನ್ನು ಮತ್ತೆ ಹೊರಗೆ ತೆಗೆಯಲಾಗಿದೆ. ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಪೋಸ್ಟ್ ಮಾರ್ಟ್ ವರದಿ ಕೈ ಸೇರಿದ ಬಳಿಕ ಮುಂದಿನ ಕಾನೂನು ಪ್ರಕ್ರಿಯೆ ನಡೆಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಗುವಿನ ಹೆತ್ತವರಿಂದ ತಿಳಿದು ಬಂದ ಮಾಹಿತಿಯ ಪ್ರಕಾರ ಮಗುವನ್ನು ಮಳೆಯ ನೀರಿಗೆ ಹಿಡಿದರೆ ಜಾಂಡೀಸ್ ಗುಣಮುಖವಾಗುತ್ತದೆ ಎಂದು ಅವರು ನಂಬಿದ್ದಾರೆ. ಆದರೆ ಹಸುಳೆಗೆ ಈ ವಿಷಯದಲ್ಲಿ ಯಾವುದೇ ಚಿಕಿತ್ಸೆ ನೀಡಲಾಗಿಲ್ಲ ಎನ್ನುವುದು ನಿಜಕ್ಕೂ ಬೇಸರದ ಸಂಗತಿ. ಒಟ್ಟಿನಲ್ಲಿ ವಿದ್ಯಾವಂತರಾದರೆ ಸಾಕಾಗುವುದಿಲ್ಲ. ವಾಸ್ತವ ಮತ್ತು ಪ್ರಸ್ತುತದ ನಡುವೆ ಮನುಷ್ಯ ಬದುಕಬೇಕಾಗಿದೆ ಎನ್ನುವುದು ಸತ್ಯ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
TULUNADU NEWS November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
TULUNADU NEWS November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search