• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ – ಕೇಂದ್ರ ಸಚಿವ ಕಿರಣ್ ರಿಜ್ಜು

TULUNADU NEWS Posted On July 4, 2025
0


0
Shares
  • Share On Facebook
  • Tweet It

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜ್ಜು ಮಾಧ್ಯಮಗಳೊಂದಿಗೆ ಮಾತನಾಡಿ “2026 ರ ಹಜ್ ಯಾತ್ರಾ ತಯಾರಿ ನಾವು ನಮ್ಮ ಕಡೆಯಿಂದ ಈಗಲೇ ಆರಂಭಿಸಿದ್ದೇವೆ. 2025 ರ ಹಜ್ ಯಾತ್ರೆ ಇಲ್ಲಿಯ ತನಕ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿಯಾಗಿರುವುದು ಎಂದು ಹೇಳಲು ತುಂಬಾ ಖುಷಿಯಿದೆ” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

“ಹಿಂದಿನ ವರ್ಷ ಮತ್ತು ಅದಕ್ಕಿಂತ ಮೊದಲು ಹಜ್ ಯಾತ್ರೆಯಲ್ಲಿ ಅನೇಕ ದುರ್ಘಟನೆಗಳು ಸಂಭವಿಸುತ್ತಿತ್ತು. ಲಕ್ಷಾಂತರ ಜನ ಯಾತ್ರಿಗಳು ತೆರಳುವುದರಿಂದ ಸಾವು ನೋವುಗಳ ಪ್ರಮಾಣ ಕೂಡ ಹೆಚ್ಚಿರುತ್ತಿತ್ತು. ಈ ಬಾರಿ ಒಟ್ಟು ಮೃತರ ಸಂಖ್ಯೆ 64 ಮಾತ್ರ. ಈ ಹಿಂದಿನ ವರ್ಷಗಳಲ್ಲಿ ಸಾವಿನ ಸಂಖ್ಯೆ ಇನ್ನೂರು ದಾಟಿದ್ದೂ ಇದೆ. ಈ ಬಾರಿ 64 ಜನ ಮರಣ ಸಂಭವಿಸಿರುವುದು ನಮ್ಮ ದೇಶದ ಹಜ್ ಕಮಿಟಿಯ ಯಾವುದೇ ಕಾರಣದಿಂದ ಅಲ್ಲ. ಬೇರೆ ಯಾವುದಾದರೂ ಆರೋಗ್ಯ ಸಂಬಂಧಿತ ಆಗಿರಬಹುದೇ ವಿನ: ನಮ್ಮಿಂದ ಯಾವುದೇ ಲೋಪದೋಷ ಆಗಿ ಏನೂ ತೊಂದರೆ ಸಂಭವಿಸಿಲ್ಲ. ನಮ್ಮ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರೊಂದಿಗೆ ವಿದೇಶಾಂಗ ಇಲಾಖೆಯ ಗಲ್ಭ್ ರಾಷ್ಟ್ರದ ರಾಯಭಾರಿಗಳು, ಅದರೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಸಚಿವಾಲಯ ಹಾಗೂ ಗೃಹ ಸಚಿವಾಲಯ ಅಧಿಕಾರಿಗಳಿಗೂ ನಾವು ಧನ್ಯವಾದ ಅರ್ಪಿಸಿದ್ದೇವೆ. ಎಲ್ಲರ ಸಹಕಾರವೂ ಉತ್ತಮವಾಗಿತ್ತು” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
TULUNADU NEWS June 16, 2026
Najlepsze bonusy i sloty w polskim kasynie online
TULUNADU NEWS May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search