• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!

Tulunadu News Posted On July 12, 2025
0


0
Shares
  • Share On Facebook
  • Tweet It

ಮಳೆಗಾಲದ ದಿನಗಳಲ್ಲಿ ಹೆಚ್ಚು ಕಾಡುವ ಕಾಯಿಲೆಗಳಾದ ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಿಸುವ ದೃಷ್ಟಿಯಿಂದ ಸೊಳ್ಳೆಗಳನ್ನು ನಿರ್ಮೂಲನೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲಿಯೇ ಲರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂ ಸೇವಕರನ್ನು ನೇಮಿಸಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬರಿಗೆ ದಿನನಿತ್ಯ 400 ರೂ ಸಂಭಾವನೆ ನಿಗದಿಪಡಿಸಲಾಗಿದೆ. ಸಂಭಾವನೆ ಆರು ಕೋಟಿ ರೂಪಾಯಿ ಇತರ ಖರ್ಚುವೆಚ್ಚಗಳು ಸೇರಿಸಿ ಒಟ್ಟು 7.25 ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಮೀಸಲಿಡಲು ಸರಕಾರ ಚಿಂತನೆ ನಡೆಸಿದೆ.

ಯೋಜನೆಯಡಿ ಲಾರ್ವಾ ನಿರ್ಮೂಲನೆಗೆ 100 ದಿನಗಳ ಕಾರ್ಯಸೂಚಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ 1500 ಸ್ವಯಂಸೇವಕರನ್ನು ನೇಮಿಸಲಾಗುತ್ತದೆ. ಇವರಿಗೆನೆ ಆರು ಕೋಟಿ ರೂಪಾಯಿ ಆರೋಗ್ಯ ಇಲಾಖೆ ನೀಡಲಿದೆ. ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರತಿ ಜಿಲ್ಲೆಗೆ ಒಬ್ಬರಂತೆ ಕೀಟ ಸಂಗ್ರಹಕಾರರನ್ನೂ ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಈ ಕೀಟ ಸಂಗ್ರಹಕಾರರು ಅಂದರೆ ಇನ್ಸೆಕ್ಟ್ ಕಲೆಕ್ಟರ್ ವಿವಿಧ ಪ್ರದೇಶಗಳಿಂದ ಕೀಟ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಸಹಕರಿಸಲಿದ್ದಾರೆ. ಡೆಂಘೀ ಪರೀಕ್ಷೆಗೆ ಎಲಿಸಾ ಕಿಟ್, ಈಡಿಸ್ ಸೊಳ್ಳೆಯ ವೈರಾಣು ಪರೀಕ್ಷೆ, ಆರ್ ಟಿ – ಪಿಸಿಆರ್ ಪರೀಕ್ಷೆ ಸೇರಿ ವಿವಿಧ ವೆಚ್ಚಗಳಿಗೆ ಒಟ್ಟು 7.25 ಕೋಟಿ ರೂ ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಇವತ್ತಿನ ದಿನಗಳಲ್ಲಿ ದಿನಕ್ಕೆ ನಾಲ್ಕು ನೂರು ರೂಪಾಯಿ ಲೆಕ್ಕದಲ್ಲಿ 1500 ಜನ ಸ್ವಯಂ ಸೇವಕರು ಕೆಲಸಕ್ಕೆ ಸಿಗುತ್ತಾರಾ ಎನ್ನುವುದು ಕೂಡ ಪ್ರಶ್ನೆ. ನಗರದಲ್ಲಿ ಇದು ಕಷ್ಟಸಾಧ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಸಿಕ್ಕಿದರೂ ಸಿಗಬಹುದು ಎಂದು ಹೇಳಲಾಗುತ್ತದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search