• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!

Tulunadu News Posted On July 17, 2025
0


0
Shares
  • Share On Facebook
  • Tweet It

ಇನ್ನು ಮುಂದೆ ಉತ್ತರಾಖಂಡದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯವೆಂದು ಉತ್ತರಾಖಂಡ ಸರಕಾರ ಆದೇಶ ಹೊರಡಿಸಿದೆ. ಜುಲೈ 14 ರಂದು ಆದೇಶ ಹೊರಡಿಸಲಾಗಿದೆ. ಎಲ್ಲಾ ಸರಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೇ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡಿನಲ್ಲಿ ಬರೆಯುವಂತೆ ಕೇಳಲಾಗಿದೆ.

ಭಗವದ್ಗೀತೆಯ ತತ್ವಗಳು ಮಾನವ ಮೌಲ್ಯಗಳು, ನಡವಳಿಕೆ, ನಾಯಕತ್ವ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವ ಸಾಮರ್ತ್ಯ, ಭಾವನಾತ್ಮಕ ಸಮತೋಲನ ಮತ್ತು ವೈಜ್ಞಾನಿಕ ಚಿಂತನೆಯನ್ನು ಹೇಗೆ ಅಭಿವೃದ್ಧಿಪಡಿಸುತ್ತವೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿಸಿಕೊಡಲಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ – 2020 ರ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಸಂಪ್ರದಾಯ ಮತ್ತು ಜ್ಞಾನ ವ್ಯವಸ್ಥೆಯ ಆಧಾರದ ಜೊತೆಗೆ ವಿವಿಧ ವಿಷಯಗಳನ್ನು ಕಲಿಸಲಾಗುವುದು ಎಂದು ಶಿಕ್ಷಣ ನಿರ್ದೇಶಕ ಡಾ. ಮುಕುಲ್ ಕುಮಾರ್ ಸತಿ ಹೇಳಿದರು.

ಮದರಸಾ ಶಿಕ್ಷಣ ಮಂಡಳಿ ಅಧ್ಯಕ್ಷ ಮುಫ್ತಿ ಸ್ವಾಗತ

ಉತ್ತರಾಖಂಡ್ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಅವರು ಸರಕಾರದ ಈ ಉಪಕ್ರಮವನ್ನು ಸ್ವಾಗತಿಸಿದ್ದು, ಶಾಲೆಗಳಲ್ಲಿ ಭಗವದ್ಗೀತೆ ಮತ್ತು ರಾಮಾಯಣವನ್ನು ಕಲಿಸುವುದು ಮತ್ತು ಜನರಿಗೆ ಅವುಗಳ ಪರಿಚಯ ಮಾಡಿಕೊಡುವುದು ಬಹಳ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ. ರಾಮ ಮತ್ತು ಕೃಷ್ಣ ಇಬ್ಬರೂ ನಮ್ಮ ಪೂರ್ವಜರು ಮತ್ತು ಪ್ರತಿಯೊಬ್ಬ ಭಾರತೀಯನು ಅವರ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಪುಸ್ತಕದಲ್ಲಿ…

ಇನ್ನು ಉತ್ತರಾಖಂಡದಲ್ಲಿ ರಾಜ್ಯ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಮೇ 6 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಶ್ರೀಮದ್ ಭಗವದ್ಗೀತೆ ಮತ್ತು ರಾಮಾಯಣವನ್ನು ಅದರಲ್ಲಿ ಸೇರಿಸಲು ಸೂಚನೆಗಳನ್ನು ನೀಡಿದ್ದರು. ಭಗವದ್ಗೀತೆ ಮತ್ತು ರಾಮಾಯಣವನ್ನು ಸಹ ರಾಜ್ಯ ಪಠ್ಯಕ್ರಮದ ಚೌಕಟ್ಟಿನಲ್ಲಿ ಸೇರಿಸಲಾಗಿದೆ ಮತ್ತು ಇದರ ಪ್ರಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಪುಸ್ತಕಗಳು ಲಭ್ಯವಾಗಲಿವೆ.
ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸುಮಾರು 17000 ಸರಕಾರಿ ಶಾಲೆಗಳಲ್ಲಿ ಜಾರಿಗೆ ಬಂದಿದೆ.
ಇನ್ನು ಭಗವದ್ಗೀತೆ ಬೋಧನೆ ಜಾರಿಗೆ ತಂದ ಮೊದಲ ರಾಜ್ಯ ಎಂದು ಉತ್ತರಖಂಡ ಎಂದು ಕೆಲವರು ಹೇಳಿಕೊಳ್ಳುತ್ತಿದ್ದರೂ, ದೇಶದಲ್ಲಿ ಈ ರೀತಿಯ ನಡೆ ಇದೇ ಮೊದಲೇನಲ್ಲ. ಈ ಹಿಂದೆ ಕೆಲವು ಬಿಜೆಪಿ ಆಡಳಿತದ ರಾಜ್ಯಗಳು ಇದೇ ರೀತಿಯ ಘೋಷಣೆಗಳನ್ನು ಮಾಡಿದ್ದವು. ಗುಜರಾತ್ 2022 ರಲ್ಲಿ ಆರರಿಂದ 12 ತರಗತಿವರೆಗಿನ ಭಗವದ್ಗೀತೆ ತರಗತಿಗಳನ್ನು ಪರಿಚಯಿಸಿತು. ಪ್ರಾರ್ಥನೆಗಳಲ್ಲಿ ಶ್ಲೋಕಗಳನ್ನು ಮತ್ತು ಪಠ್ಯಪುಸ್ತಕಗಳಲ್ಲಿ ಅಧ್ಯಾಯಗಳನ್ನು ಸೇರಿಸಿತ್ತು. ಇನ್ನು ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ 2022-23 ರ ಶೈಕ್ಷಣಿಕ ಅವಧಿಯಲ್ಲಿ ತಜ್ಞರ ಸಮಾಲೋಚನೆಯ ನಂತರ ನೈತಿಕ ವಿಜ್ಞಾನದ ಅಡಿಯಲ್ಲಿ ಗೀತಾ ಪಠಣಗಳನ್ನು ಸೇರಿಸುವ ಯೋಜನೆಯನ್ನು ಪ್ರಕಟಿಸಲಾಗಿತ್ತು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search