• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

Tulunadu News Posted On July 25, 2025
0


0
Shares
  • Share On Facebook
  • Tweet It

ಎಸ್ ಎಸ್ ಎಲ್ ಸಿಯಲ್ಲಿ ಪಾಸ್ ಆಗಲು ಒದ್ದಾಡುವ ಮಕ್ಕಳಿಗೆ, ಹೇಗಾದರೂ ಹತ್ತನೇ ತರಗತಿಯಲ್ಲಿ ಪಾಸ್ ಆದರೆ ಸಾಕಪ್ಪ ಎಂದುಕೊಂಡಿರುವ ಮಕ್ಕಳಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಪಾಸ್ ಆಗಬೇಕಾದ ಅಂಕಗಳ ವಿಷಯದಲ್ಲಿ ಇನ್ನಷ್ಟು ಸರಳೀಕರಣ ನೀತಿಯನ್ನು ಅನುಸರಿಸಿದೆ. ಇನ್ನು ಮುಂದೆ ಹತ್ತನೇ ತರಗತಿ ಪಾಸಾಗಲು 35 ಅಂಕಗಳು ಬೇಕಾಗಿಲ್ಲ. ಕೇವಲ 30 ಅಂಕಗಳು ಇದ್ದರೂ ಸಾಕು. ಪಾಸೋ, ಫೈಲೋ ಎನ್ನುವ ತೂಗು ಉಯ್ಯಾಲೆಯಲ್ಲಿರುವ ಮಕ್ಕಳು ರಾಜ್ಯ ಸರಕಾರದ ಹೊಸ ನೀತಿಯಿಂದ ನೆಮ್ಮದಿಯ ನಿದ್ದೆಯನ್ನು ಮಾಡಬಹುದು. ಹೊಸ ನೀತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರತಿ ವಿಷಯದಲ್ಲಿ 30 ಅಂಕಗಳನ್ನು ಪಡೆದರೆ ಸಾಕು, ಅಂತಹ ವಿದ್ಯಾರ್ಥಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಓವರ್ ಆಲ್ ಅಗ್ರಿಗೇಟ್ ಶೇಕಡಾ 33 ಪಾಸಿಂಗ್ ಅಂಕಕ್ಕೆ ಕಡಿತ ಮಾಡಲಾಗಿದೆ. ಹೀಗಾಗಿ ಇದೀಗ 625 ಕ್ಕೆ 206 ಅಂಕ ಪಡೆದ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸಲಾಗುತ್ತದೆ. ಈ ಹಿಂದೆ ಓವರ್ ಆಲ್ ಪಾಸಿಂಗ್ ಶೇಕಡಾ 35 ಇತ್ತು. ಹೀಗಾಗಿ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆದರೆ ಮಾತ್ರ ಪಾಸ್ ಆಗುತ್ತಿತ್ತು. ಆದರೆ ಇದೀಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಸಾಕು. ಒಟ್ಟು ಪಾಸಿಂಗ್ ಅಗ್ರೇಗೇಟ್ ಶೇಕಡಾ 33 ಬರಬೇಕು. ಸಾರ್ವಜನಿಕರಿಗೆ ಈ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಕುರಿತು ಆಕ್ಷೇಪ ಸಲ್ಲಿಸಿಕೆ ಅವಕಾಶ ನೀಡಲಾಗಿದೆ. ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷೆ ಸೇರಿ ಒಟ್ಟಾರೆ ಸರಾಸರಿ ಶೇಕಡಾ 33 ರಷ್ಟು ಅಂಕಗಳನ್ನು ಪಡೆದರೆ ಪಾಸ್ ಎಂದು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
Tulunadu News July 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
    • ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!
  • Popular Posts

    • 1
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 2
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 3
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 4
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • 5
      ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ

  • Privacy Policy
  • Contact
© Tulunadu Infomedia.

Press enter/return to begin your search