• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!

Tulunadu News Posted On July 31, 2025
0


0
Shares
  • Share On Facebook
  • Tweet It

ಬರೋಬ್ಬರಿ 17 ವರ್ಷಗಳ ಬಳಿಕ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಕೋರ್ಟ್ 2008 ರ ಕುಖ್ಯಾತ ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣದ ತೀರ್ಪು ನೀಡಿದ್ದು ಎಲ್ಲಾ ಏಳು ಮಂದಿ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸಹಿತ ಏಳು ಮಂದಿಯ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಸ್ತುತ ಎಲ್ಲಾ ಆರೋಪಿಗಳು ಜಾಮೀನಿನಲ್ಲಿ ಹೊರಗಿದ್ದರು.

2008, ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂ ನಗರದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ನಲ್ಲಿ ಆರು ಜನ ಮೃತಪಟ್ಟಿದ್ದರೆ 100ಕ್ಕೂ ಮಿಕ್ಕಿ ನಾಗರಿಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಮೃತರಿಗೆ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಧನವನ್ನು ನ್ಯಾಯಾಲಯ ಘೋಷಿಸಿದೆ. ಬಾಂಬ್ ಬ್ಲಾಸ್ಟಿಗೆ ಬಳಸಲಾದ ದ್ವಿಚಕ್ರ ವಾಹನದ ಚಾಸೀಸ್ ನಂಬ್ರ ಅಳಿಸಲ್ಪಟ್ಟಿದ್ದು, ಆ ವಾಹನ ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಸಂಬಂಧಿಸಿದ್ದು ಎನ್ನುವ ವಾದಕ್ಕೆ ಯಾವುದೇ ನಂಬಿಕಾರ್ಹ ಮೂಲಗಳಿಲ್ಲ ಹಾಗೂ ಆ ವಾದ ಈ ಪ್ರಕರಣದಲ್ಲಿ ಹೊಂದಿಕೆ ಆಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇನ್ನು ಆ ಘಟನೆ ಸಂಭವಿಸುವ ಎರಡು ವರ್ಷಗಳ ಮೊದಲೇ ಆಕೆ ಸನ್ಯಾಸತ್ವ ಸ್ವೀಕರಿಸಿದ್ದು, ಲೌಕಿಕ ಜಗತ್ತಿನಿಂದ ಅಂತರ ಕಾಯ್ದುಕೊಂಡಿದ್ದರು ಎಂದು ನ್ಯಾಯಾಲಯ ಗಮನಿಸಿದೆ.

ವಿಶೇಷ ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ “ಬಾಂಬ್ ಬ್ಲಾಸ್ಟ್ ಮಾಲೆಗಾಂನಲ್ಲಿ ಸಂಭವಿಸಿದೆ ಎನ್ನುವುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ಯಶಸ್ವಿಯಾದರೂ ಆ ದುರ್ಘಟನೆ ನಡೆದ ಸ್ಥಳದಿಂದ ವಶಪಡಿಸಿಕೊಳ್ಳಲಾದ ವಾಹನದಲ್ಲಿ ಬಾಂಬ್ ಇರಿಸಲಾಗಿತ್ತು ಎಂದು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ” ಎಂದು ಹೇಳಿದ್ದಾರೆ. ಇನ್ನು ಬಾಂಬ್ ಬ್ಲಾಸ್ಟ್ ಆದ ಬಳಿಕ ಆ ಪರಿಸರವನ್ನು ಯಥಾರ್ಥವಾಗಿ ಕಾಪಾಡಿಕೊಳ್ಳುವಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅದರಿಂದ ದುರ್ಘಟನೆ ನಡೆದ ಪರಿಸರ ಕಲುಷಿತಗೊಂಡು ಸಾಂದರ್ಭಿಕ ಸಾಕ್ಷಗಳು ನಾಶಗೊಂಡಿದೆ.

ಇನ್ನು ಪ್ರಾಸಿಕ್ಯೂಶನ್ ವಾದಿಸಿದಂತೆ ಗಾಯಾಳುಗಳ ಸಂಖ್ಯೆ 95 ವಿನ: 101 ಅಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಅದರೊಂದಿಗೆ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರು ಕಾಶ್ಮೀರದಿಂದ ಆರ್ ಡಿಎಕ್ಸ್ ತರಿಸಿ ಮನೆಯಲ್ಲಿ ಸಂಗ್ರಹಿಸಿ ಅದನ್ನು ಬ್ಲಾಸ್ಟಿಗೆ ಬಳಸಲಾಗಿತ್ತು ಎನ್ನುವುದನ್ನು ಪ್ರಾಸಿಕ್ಯೂಶನ್ ಸಾಬೀತುಪಡಿಸುವಲ್ಲಿ ವಿಫಲಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search