• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!

Tulunadu News Posted On August 6, 2025
0


0
Shares
  • Share On Facebook
  • Tweet It

ನ್ಯಾಶನಲ್ ಡೆಮೊಕ್ರೆಟಿಕ್ ಅಲಾಯೆನ್ಸ್ (ಎನ್ ಡಿಎ) ಅಧಿಕಾರಕ್ಕೆ ಬಂದು 11 ವರ್ಷಗಳಾಗುತ್ತಿವೆ. ಈ ಹಂತದಲ್ಲಿ ಭಾರತೀಯ ಜನತಾ ಪಾರ್ಟಿಯ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರು ಹೊಸ ದಾಖಲೆಯೊಂದನ್ನು ಸದ್ದಿಲ್ಲದೇ ತಮ್ಮ ಹೆಸರಿನಲ್ಲಿ ಬರೆಸಿಕೊಂಡಿದ್ದಾರೆ. ಅದು ಯಾವುದೆಂದರೆ ಕೇಂದ್ರ ಗೃಹಸಚಿವರಾಗಿ ಅತೀ ದೀರ್ಘ ಅವಧಿಗೆ ಜವಾಬ್ದಾರಿಯನ್ನು ನಿರ್ವಹಿಸಿರುವುದು. ಅಮಿತ್ ಶಾ ಈಗಾಗಲೇ ದೇಶದ ಪ್ರಮುಖ ಹುದ್ದೆಯಲ್ಲಿ ಒಟ್ಟು 2258 ದಿನಗಳನ್ನು ಕಳೆದಿದ್ದು, ಇದು ಐತಿಹಾಸಿಕ ದಾಖಲೆಯಾಗಿ ಉಳಿಯಲಿದೆ. ಈ ಮೂಲಕ ಅವರು ತಮ್ಮದೇ ಪಕ್ಷದ ಹಳೆಹುಲಿ ಲಾಲ್ ಕೃಷ್ಣ ಅಡ್ವಾಣಿಯವರ ಅಧಿಕಾರಾವಧಿಯನ್ನು ಮೀರಿಸಿದ್ದಂತೆ ಆಗಿದೆ. ಅಮಿತ್ ಶಾ ಅವರು ಮೋದಿಯವರ ಎರಡನೇ ಇನ್ಸಿಂಗ್ಸ್ ಆರಂಭವಾದ 2019, ಮೇ 30 ರಂದು ಗೃಹ ಸಚಿವರಾಗಿ ಮೊದಲ ಬಾರಿ ಅಧಿಕಾರ ಸ್ವೀಕರಿಸಿದರು.

ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಮುಂಗಾರು ಅಧಿವೇಶನದ ಬಗ್ಗೆ ರೂಪುರೇಶೆಗಳ ಚರ್ಚೆಯ ಸಂದರ್ಭದಲ್ಲಿ ಮೋದಿಯವರು ಅಮಿತ್ ಶಾ ಅವರನ್ನು ಅಭಿನಂದಿಸಿದರು. ಈ ಸಾಧನೆಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ವಿಶೇಷ ಮೈಲಿಗಲ್ಲುಗಳು ಕೂಡ ಸೇರಿದೆ. ಕಾಂಗ್ರೆಸ್ಸಿನ ಗೋವಿಂದ ವಲ್ಲಭಬಾಯ್ ಪಂತ್ ಹಾಗೂ ಲಾಲ್ ಕೃಷ್ಣ ಅಡ್ವಾಣಿಯವರು ಅತ್ಯಧಿಕ ದಿನಗಳು ಗೃಹ ಸಚಿವರಾಗಿ ನಂತರದ ಸ್ಥಾನದಲ್ಲಿದ್ದಾರೆ. ಅಡ್ವಾಣಿಯವರು 2,256 ದಿನ ( ಮಾರ್ಚ್ 19, 1998 ರಿಂದ ಮೇ 22, 2004) ಹಾಗೂ ಗೋವಿಂದ ಭಲ್ಲಭ್ ಪಂಥ್ ಜನವರಿ 10 ರಿಂದ ಮಾರ್ಚ್ 7, 1961 ಒಟ್ಟು ಆರು ವರ್ಷ 56 ದಿನಗಳು ಅಧಿಕಾರದಲ್ಲಿದ್ದರು.

ಅಮಿತ್ ಶಾ ಅವರು ಮೇ 30, 2019 ರಿಂದ ಅಗಸ್ಟ್ 4, 2025 ರ ತನಕ ಒಟ್ಟು 2258 ದಿನಗಳನ್ನು ಪೂರೈಸಿ ಅದೇ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search