• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು

Tulunadu News Posted On August 13, 2025
0


0
Shares
  • Share On Facebook
  • Tweet It

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಕೆಂಪುಕಲ್ಲಿನ ಕೊರತೆ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಜನಸಾಮಾನ್ಯರು ಮನೆಯ ಗೃಹಪ್ರವೇಶಕ್ಕಾಗಿ ಒಳ್ಳೆಯ ಮಹೂರ್ತವನ್ನು ಜ್ಯೋತಿಷ್ಯರ ಬಳಿ ಕೇಳಿರುತ್ತಾರೆ. ವೈದಿಕರು ಹೇಳಿದ ದಿನವನ್ನು ನಿಗದಿಪಡಿಸಿರುತ್ತಾರೆ. ಆದರೆ ಇತ್ತ ಕೆಂಪುಕಲ್ಲುಗಳೇ ಸಿಗದೇ ಮನೆಯ ನಿರ್ಮಾಣದ ಕೆಲಸ ಅರ್ಧಕ್ಕೆ ನಿಂತಿರುವುದು ಕುಟುಂಬದ ಎಲ್ಲರಿಗೂ ತೀವ್ರ ಬೇಸರವನ್ನು ಉಂಟು ಮಾಡುತ್ತಿದೆ. ಇಂತಹ ಅಸಂಖ್ಯಾತ ಘಟನೆಗಳು ನಮ್ಮ ನಿಮ್ಮ ಸುತ್ತಮುತ್ತಲೂ ನಡೆಯುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಹೇಗಾದರೂ ಮಾಡಿ ಮನೆ ಕಟ್ಟಬೇಕೆಂದು ಬಯಸುವ ಜನರಿಗೆ ಎಲ್ಲಿಂದಲಾದರೂ ಕೆಂಪುಕಲ್ಲು ಸಿಕ್ಕಿದರೆ ಸಾಕು ಎನ್ನುವ ಮನಸ್ಥಿತಿಯಲ್ಲಿ ಇರುತ್ತಾರೆ. ಅಂತವರಿಗಾಗಿ ಈಗ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಂಪುಕಲ್ಲು ಸಾಗಿಸುವವರು ಇದ್ದಾರೆ. ಅವರಿಗೆ ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್. ಅವರು ಓವರ್ ಲೋಡ್ ತುಂಬಿಸಿಕೊಂಡು ಬರುತ್ತಾರೆ. ಅಂತಹ ಲಾರಿಯೊಂದನ್ನು ಮಂಗಳವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಿಡಿದಿದ್ದಾರೆ. ಆರ್ ಟಿಒ ಇನ್ಸಪೆಕ್ಟರ್ ಪ್ರಮೋದ್ ಭಟ್ ದಾಳಿ ನಡೆಸಿ ಲಾರಿ ಚಾಲಕರಿಗೆ ನೋಟಿಸ್ ನೀಡಿದ್ದಾರೆ. ಸುಮಾರು ನಾಲ್ಕು ಲಾರಿಗಳನ್ನು ತಡೆದು ನಿಲ್ಲಿಸಿದ ಅವರು ಬಳಿಕ ಬಿಸಿರೋಡಿನ ಖಾಸಗಿ ವೇ ಬ್ರಿಡ್ಜ್ ನಲ್ಲಿ ತೂಕ ಮಾಡಲಾಗಿ ನೋಟಿಸು ನೀಡಿದ್ದಾರೆ. ಜಿಲ್ಲೆಯಲ್ಲಿ ಕೆಂಪುಕಲ್ಲಿನ ಸಮಸ್ಯೆ ಆರಂಭವಾದ ಬಳಿಕ ಅಕ್ರಮವಾಗಿ ಕೇರಳದಿಂದ ದಕ ಜಿಲ್ಲೆಯತ್ತ ಕಲ್ಲುಗಳು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುವ ದಂಧೆ ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search