• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!

Tulunadu News Posted On August 20, 2025
0


0
Shares
  • Share On Facebook
  • Tweet It

ಒಂದಾದ ಬಳಿಕ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿದ ಉದ್ದವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಚುನಾವಣೆಯಲ್ಲಿ ಘನಘೋರ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಪ್ರಥಮ ಚುಂಬನಂ ದಂತಭಗ್ನಂ ಎಂದೇ ಹೇಳಬಹುದಾಗಿದೆ. ಉದ್ದವ್ ಬಣದ ಶಿವಸೇನೆ ಹಾಗೂ ರಾಜ್ ಠಾಕ್ರೆಯವರ ಮಹಾರಾಷ್ಟ್ರದ ನವನಿರ್ಮಾಣ್ ಸೇನಾ ಬಿಇಎಸ್ ಟಿ (ಬೆಸ್ಟ್) ಎಂಪ್ಲಾಯಿಸ್ ಕೋ- ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಅಭೂತಪೂರ್ವ ಸೋಲನ್ನು ಕಂಡಿದ್ದಾರೆ.

ಉತ್ಕೃಷ್ ಪ್ಯಾನೆಲ್ ಹೆಸರಿನ ಒಕ್ಕೂಟ ರಚಿಸಿ ಕಣಕ್ಕೆ ಇಳಿದ ಈ ಒಕ್ಕೂಟ 21 ರಲ್ಲಿ 19 ರಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲಿಯೂ ಸೋಲನ್ನು ಕಾಣುವ ಮೂಲಕ ಶೂನ್ಯ ಸಂಪಾದನೆ ಮಾಡಿದೆ. ಈ ಮೂಲಕ ಈ ಶಿವಸೇನೆಯ ಒಂಭತ್ತು ವರ್ಷದ ಬಿಗಿಹಿಡಿತ ಇಲ್ಲಿಗೆ ಕೊನೆಗೊಂಡಿದೆ. ಬೃಹನ್ಮುಂಬಯಿ ವಿದ್ಯುತ್ ಪೂರೈಕೆ ಹಾಗೂ ಸಾರಿಗೆ (ಬೆಸ್ಟ್) ಇದರ ಒಟ್ಟು 15000 ಸದಸ್ಯರು ಇಲ್ಲಿ ಚುನಾವಣೆಯಲ್ಲಿ ಮತಚಲಾವಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ 10000 ಜನ ಮತದಾನ ಮಾಡಿದ್ದಾರೆ.

ಬೆಸ್ಟ್ ಇದರಲ್ಲಿ ಮರಾಠಿ ಭಾಷಿಕ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಕ್ರೆ ಸಹೋದರರ ಸೋಲು ಮುಂಬರುವ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ಚುನಾವಣೆಯಲ್ಲಿ ದೊಡ್ಡ ಆಘಾತ ನೀಡಿದಂತಾಗಿದೆ. ಇತ್ತೀಚೆಗೆ ಮರಾಠಿ ಅಸ್ಮಿತೆಯ ವಿಷಯ ಇಟ್ಟು ಠಾಕ್ರೆ ಸಹೋದರರು ಜಂಟಿಯಾಗಿ ಮುಂಬೈಯಲ್ಲಿ ಬೃಹತ್ ಸಮಾವೇಶ ನಡೆಸಿದ್ದರು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search