• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಮಸ್ತೆ ಸದಾ ವತ್ಸಲೆ… ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

Tulunadu News Posted On August 22, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳಲ್ಲಿ, ಬೈಠಕ್ ಗಳಲ್ಲಿ ಸ್ವಯಂ ಸೇವಕರು ಹಾಡುವ ಸಂಘದ ಗೀತೆಯ ಮೊದಲ ಚರಣವನ್ನು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಡುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದಾರೆ. ನಮಸ್ತೆ ಸದಾ ವತ್ಸಲೇ ಮಾತೃಭೂಮೇ, ತ್ವಯಾ ಹಿಂದುಭೂಮೇ ಸುಖಂ ವರ್ದಿತೋಹಮ್, ಮಹಾಮಂಗಲೇ ಪುಣ್ಯಭೂಮೇ ತ್ವದಥ್ಯೇ ಹೀಗೆ ಹಾಡಿದ್ದಾರೆ. ಡಿಕೆ ಶಿವಕುಮಾರ್ ಈ ಗೀತೆಯನ್ನು ಹಾಡುವ ಮೂಲಕ ಏನು ಸಂದೇಶ ನೀಡಿದ್ದಾರೆ ಎನ್ನುವ ಬಗ್ಗೆ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈಗ ಅವರು ಹಾಡಿರುವ ಈ ಗೀತೆಯ ಜೊತೆಗೆ ಅವರು ಹಿಂದೊಮ್ಮೆ ತಾನು ಕೂಡ ಆರ್ ಎಸ್ ಎಸ್ ಶಾಖೆಗೆ ಹೋಗಿದ್ದೆ ಎನ್ನುವುದನ್ನು ಸೇರಿಸಿ ಕೆಲವರು ವಿಡಿಯೋ ವೈರಲ್ ಮಾಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷ ಪರಂಪರಾಗತವಾಗಿ ಆರ್ ಎಸ್ ಎಸ್ ಅನ್ನು ವಿರೋಧಿಸುತ್ತಾ ಬರುತ್ತಿದೆ. ಅದು ಇಡೀ ದೇಶಕ್ಕೆ ಗೊತ್ತಿದೆ. ಸಂಘದ ಹೆಸರು ಎತ್ತಿದರೆ ಸಾಕು ರಾಹುಲ್ ಹಾಗೂ ಖರ್ಗೆ ತಮ್ಮ ಅಷ್ಟೂ ಕೋಪವನ್ನು ಹೊರಗೆ ಹಾಕುತ್ತಾರೆ. ಹಾಗಿರುವಾಗ ಡಿಕೆಶಿಯವರು ಸದನದಲ್ಲಿಯೇ ನೇರವಾಗಿ ದಾಖಲೆಯಾಗುವಂತಹ ಗೀತೆಯನ್ನು ಹಾಡಿರುವುದು ಏನು ಸೂಚನೆ ನೀಡುತ್ತದೆ ಎನ್ನುವುದು ಈಗ ಇರುವ ಪ್ರಶ್ನೆ.
ಡಿಕೆಶಿಯವರು ಏನು ಮಾತನಾಡಿದರೂ, ಮಾತನಾಡದಿದ್ದರೂ, ಹಾವಭಾವದಲ್ಲೇ ಉತ್ತರ ಕೊಟ್ಟರೂ ಅದು ಸುದ್ದಿಯಾಗುತ್ತದೆ, ಚರ್ಚೆಯಾಗುತ್ತದೆ. ಹಾಗಿರುವಾಗ ಘಂಟಾಘೋಷವಾಗಿ, ನಗುನಗುತ್ತಾ ಸಂಘದ ಗೀತೆ ಹಾಡಿದರೆ ಅದರ ಹಿಂದಿನ ವಿಷಯದ ಬಗ್ಗೆ ಚರ್ಚೆಯಾಗದೇ ಇರುತ್ತಾ? ಅದು ಆಗಿದೆ. ಇದು ಅವರು ಹೈಕಮಾಂಡಿಗೆ ಕೊಟ್ಟ ಸಂದೇಶ ಅನ್ನುವವರೂ ಇದ್ದಾರೆ. ಡಿಸೆಂಬರ್ ಒಳಗೆ ಸಿಎಂ ಸ್ಥಾನ ಸಿಗದೇ ಇದ್ದರೆ ಅವರು ಪಕ್ಷದ ವಿರುದ್ಧ ರೆಬೆಲ್ ಆಗುತ್ತಾರಾ ಎನ್ನುವ ಪ್ರಶ್ನೆಯೂ ಇದೆ. ಇನ್ನು ಕಾಂಗ್ರೆಸ್ ಮಹಾ ನಾಯಕರು ಭಾಜಪಾ ಮತ್ತು ಅದರ ಮಾತೃ ಸಂಸ್ಥೆಯನ್ನು ದ್ವೇಷಿಸುವಾಗ ಇವರು ಸಾಫ್ಟ್ ಆದರಾ ಎನ್ನುವುದನ್ನು ಕೂಡ ಕೆಲವು ವ್ಯಾಖ್ಯಾನಿಸುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿವಕುಮಾರ್ ” ನಾನು ಹುಟ್ಟು ಕಾಂಗ್ರೆಸ್ಸಿಗ. ನನ್ನ ರಕ್ತ, ನನ್ನ ಜೀವನವೇ ಕಾಂಗ್ರೆಸ್. ಆರ್ ಎಸ್ ಎಸ್ ಹೇಗೆ ಶಾಲೆಗಳನ್ನು ಸ್ವಾಧೀನಪಡಿಸಿ ಕರ್ನಾಟಕದಲ್ಲಿ ಸಂಸ್ಥೆಗಳ ನಿರ್ಮಾಣ ಮಾಡುತ್ತಿದೆ ಎನ್ನುವುದು ನಮಗೆ ಗೊತ್ತಿದೆ. ನಾನು ಕಾಂಗ್ರೆಸ್ಸಿಗನಾಗಿದ್ದು, ಕಾಂಗ್ರೆಸ್ ಪಕ್ಷವನ್ನು ನನ್ನ ಸಂಪೂರ್ಣ ಶಕ್ತಿಯೊಂದಿಗೆ ಮುನ್ನಡೆಸುತ್ತೇನೆ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search